Germany ಬೆನ್ನಲ್ಲೇ ಕೇಜ್ರಿ ಕೇಸಿಗೆ ಮೂಗು ತೂರಿಸಿದ ಅಮೆರಿಕ

ನ್ಯಾಯಸಮ್ಮತ, ಸಕಾಲಿಕ ಕಾನೂನು ಪ್ರಕ್ರಿಯೆಗೆ ಪ್ರೋತ್ಸಾಹ: ಅಮೆರಿಕ ; ಜರ್ಮನಿ ಬೆನ್ನಲ್ಲೇ ಅಮೆರಿಕದಿಂದಲೂ ಅದೇ ರಾಗ

Team Udayavani, Mar 26, 2024, 11:11 PM IST

Germany ಬೆನ್ನಲ್ಲೇ ಕೇಜ್ರಿ ಕೇಸಿಗೆ ಮೂಗು ತೂರಿಸಿದ ಅಮೆರಿಕ

ಹೊಸದಿಲ್ಲಿ: ಅಬಕಾರಿ ನೀತಿ ಹಗರಣದಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿ ವಾಲ್‌ ಬಂಧನ ವಿಚಾರದಲ್ಲಿ ಮೂಗು ತೂರಿಸಿ ಜರ್ಮನಿಯು ಭಾರತದಿಂದ ತೀವ್ರ ಆಕ್ಷೇಪಕ್ಕೆ ಗುರಿಯಾದ ಬೆನ್ನಲ್ಲೇ ಈಗ ಅಮೆರಿಕ ಕೂಡ ಅದೇ ರಾಗವನ್ನು ಹಾಡಿದೆ. ಕೇಜ್ರಿವಾಲ್‌ ಬಂಧನದ ಪರಿಸ್ಥಿತಿ ಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಅಮೆರಿಕ ಹೇಳಿದೆ.

ಈ ಕುರಿತು ಸುದ್ದಿ ಸಂಸ್ಥೆಯೊಂದಕ್ಕೆ ಪ್ರತಿಕ್ರಿಯಿಸಿ ರುವ ಅಮೆರಿಕದ ವಿದೇಶಾಂಗ ಸಚಿವಾಲಯ ವಕ್ತಾರರು, “ದಿಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಪ್ರಕರಣದಲ್ಲಿ ನ್ಯಾಯಸಮ್ಮತ, ಪಾರದರ್ಶಕ ಮತ್ತು ಸಕಾಲಿಕ ಕಾನೂನು ಪ್ರಕ್ರಿಯೆಗಳನ್ನು ಅಮೆರಿಕವು ಪ್ರೋತ್ಸಾಹಿಸುತ್ತದೆ’ ಎಂದು ಹೇಳಿದ್ದಾರೆ. ಅಮೆರಿಕದ ಈ ಹೇಳಿಕೆಗೆ ಭಾರತವು ಇನ್ನೂ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

ಜರ್ಮನಿಗೆ ತಿರುಗೇಟು ನೀಡಿದ್ದ ಭಾರತ: ಮೂರ್ನಾಲ್ಕು ದಿನಗಳ ಹಿಂದೆ ಕೇಜ್ರಿವಾಲ್‌ ಬಂಧನ ಕುರಿತು ಜರ್ಮನಿಯ ವಿದೇಶಾಂಗ ಸಚಿವಾಲಯ ಕೂಡ ಇದೇ ರೀತಿಯ ಹೇಳಿಕೆ ನೀಡಿತ್ತು. “ಕೇಜ್ರಿವಾಲ್‌ ಪ್ರಕರಣದಲ್ಲೂ ನ್ಯಾಯಾಂಗ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಮೂಲ ತಣ್ತೀಗಳನ್ನು ಅನ್ವಯಿಸಲಾಗುತ್ತದೆ ಎಂದು ನಾವು ಭಾವಿಸುತ್ತೇವೆ’ ಎಂದು ತಿಳಿಸಿತ್ತು.

ಈ ಹೇಳಿಕೆ ಬೆನ್ನಲ್ಲೇ, ಜರ್ಮನಿ ದೂತಾವಾಸ ಕಚೇರಿಯ ಅಧಿಕಾರಿಯನ್ನು ಕರೆಯಿಸಿಕೊಂಡ ಭಾರತವು ತನ್ನ ವಿರೋಧವನ್ನು ದಾಖಲಿಸಿತ್ತು. ಜರ್ಮನಿಯ ಹೇಳಿಕೆಯು ನಮ್ಮ ಆಂತರಿಕ ವ್ಯವಹಾರದಲ್ಲಿ ಅನಪೇಕ್ಷಿತ ಹಸ್ತಕ್ಷೇಪ ಎಂದು ವಾದಿಸಿತ್ತು.

ಪಿಎಂ ಮನೆ ಮುತ್ತಿಗೆಗೆ ಮುಂದಾದ ಆಪ್‌:
ಕೇಜ್ರಿ ರಾಜೀನಾಮೆಗೆ ಬಿಜೆಪಿ ಪ್ರತಿಭಟನೆ
ದಿಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಬಂಧನವನ್ನು ಖಂಡಿಸಿ ಆಪ್‌ ಕಾರ್ಯರ್ತರು ಮಂಗಳವಾರ ಪ್ರಧಾನಿ ನಿವಾಸಕ್ಕೆ ಘೇರಾವ್‌ ಹಾಕುವ ಪ್ರಯತ್ನ ಮಾಡಿದರೆ, ಮತ್ತೂಂದೆಡೆ ಕೇಜ್ರಿವಾಲ್‌ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯ ಪ್ರತಿಭಟನ ರ್ಯಾಲಿ ನಡೆ ಸಿದೆ. ಪೊಲೀಸರು ಎರಡೂ ಪ್ರತಿಭಟನೆಗಳನ್ನು ತಡೆದಿದ್ದಾರೆ. ಮಂಗಳವಾರ ಆಪ್‌ ಕಾರ್ಯಕರ್ತರು ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟರು. ಆದರೆ ಪೊಲೀಸರು ಅವರನ್ನು ಪಟೇಲ್‌ ಚೌಕ್‌ನಲ್ಲೇ ತಡೆದು, ಆಪ್‌ ನಾಯಕರು, ಕಾರ್ಯಕರ್ತರನ್ನು ತಮ್ಮ ವಶಕ್ಕೆ ಪಡೆದುಕೊಂಡರು. ದಿಲ್ಲಿ ಆಪ್‌ ಘಟಕ ಸಂಚಾಲಕ ಗೋಪಾಲ್‌ ರಾಯ್‌ ಮಾತನಾಡಿ, “ಪೊಲೀಸರು ದಿಲ್ಲಿಯನ್ನು ಪೊಲೀಸ್‌ ರಾಜ್ಯವನ್ನಾಗಿ ಮಾಡಿದ್ದಾರೆ’ ಎಂದು ಆರೋಪಿಸಿದರು. ಮುಂಜಾಗ್ರತೆ ಕ್ರಮವಾಗಿ ದಿಲ್ಲಿಯ ಅನೇಕ ಕಡೆ ನಿಷೇಧಾಜ್ಞೆ ಹೊರಡಿಸಲಾಗಿತ್ತು.

ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ
ಬಿಜೆಪಿ ಕೂಡ ಜೈಲಿನಲ್ಲಿರುವ ಕೇಜ್ರಿವಾಲ್‌ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿತು. ಮಂಗಳವಾರ ಫಿರೋಜ್‌ ಶಾ ಕೋಟ್ಲಾ ಮೈದಾನದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ದಿಲ್ಲಿ ಸಚಿವಾಲಯದತ್ತ ಪ್ರತಿಭಟನೆ ಮೆರೆವಣಿಗೆ ಹೊರಟರು. ಬಹದ್ದೂರ್‌ ಶಾ ಜಾಫ‌ರ್‌ ಮಾರ್ಗಕ್ಕೆ ಬರುತ್ತಿದ್ದಂತೆ ದಿಲ್ಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ್‌ ಸೇರಿ 57 ಬಿಜೆಪಿ ನಾಯಕರನ್ನು ಪೊಲೀಸರು ತಮ್ಮ ವಶಕ್ಕೆ ಪಡೆದರು.

ಕೇಜ್ರಿ 2ನೇ ಆದೇಶ
ಜೈಲಿನಿಂದಲೇ ಕೇಜ್ರಿವಾಲ್‌ ಮಂಗಳವಾರ ಮತ್ತೂಂದು ಆದೇಶ ಹೊರಡಿಸಿದ್ದಾರೆಂದು ದಿಲ್ಲಿ ಸಚಿವ ಸೌರಭ್‌ ಭಾರ ದ್ವಾಜ್‌ ತಿಳಿಸಿದ್ದಾರೆ. ದಿಲ್ಲಿಯ ಎಲ್ಲ ಸರಕಾರಿ ಆಸ್ಪತ್ರೆಗಳು ಮತ್ತು ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಅಗತ್ಯ ಔಷಧಗಳು ಮತ್ತು ಪರೀಕ್ಷೆಗಳು ಲಭ್ಯವಾಗಿರುವಂತೆ ಅಧಿಕಾರಿಗಳಿಗೆ ತಮ್ಮ ಆದೇಶದ ಮೂಲಕ ಸೂಚಿಸಿದ್ದಾರೆಂದು ಸಚಿವರು ತಿಳಿಸಿದ್ದಾರೆ.

ಉಚಿತ ಸೇವೆ ರದ್ದಾಗದು
ಜನಪರ ಕಲ್ಯಾಣ ಕಾರ್ಯಕ್ರಮಗಳು ಮತ್ತು ಉಚಿತ ಸೇವೆಗಳು ರದ್ದಾಗಲಿವೆ ಎಂಬ ವದಂತಿಯನ್ನು ನಂಬಬೇಡಿ ಎಂದು ದಿಲ್ಲಿ ಸರಕಾರ ಸ್ಪಷ್ಟಪಡಿಸಿದೆ. ಸಿಎಂ ಕೇಜ್ರಿವಾಲ್‌ ಬಂಧನದ ಹಿನ್ನೆಲೆಯಲ್ಲಿ ಕೆಲವರು ತಪ್ಪು ಮಾಹಿತಿಯನ್ನು ಪಸರಿಸುತ್ತಿದ್ದಾರೆ. ಆದರೆ ಇದಾವುದೂ ನಿಜವಲ್ಲ. ಕಾರ್ಯಕ್ರಮಗಳ ಅನುಷ್ಠಾನ ಮತ್ತು ಆಡಳಿತವು ಯಾವುದೇ ನಿರ್ದಿಷ್ಟ ವ್ಯಕ್ತಿಯ ಸಂಬಂಧಿಸಿದ್ದರಾಗಿರು ವುದಿಲ್ಲ ಮತ್ತು ಅವು ಮುಂದುವರಿಯುತ್ತವೆ ಎಂದು ದಿಲ್ಲಿ ಯೋಜನಾ ಇಲಾಖೆ ಹೇಳಿದೆ.

ಟಾಪ್ ನ್ಯೂಸ್

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.