ಆಮ್ಲಜನಕ ಪೂರೈಕೆ ಸ್ಥಗಿತ: ನಾಲ್ಕು ಶಿಶುಗಳು ಬಲಿ
Team Udayavani, Aug 22, 2017, 8:05 AM IST
ರಾಯ್ಪುರ: ಗೊರಖ್ಪುರದ ಬಿಆರ್ಡಿ ವೈದ್ಯ ಕಾಲೇಜಿನಲ್ಲಿ ಆಕ್ಸಿಜನ್ ಕೊರತೆಯಿಂದ 80ಕ್ಕೂ ಅಧಿಕ ಮಕ್ಕಳು ಅಸುನೀಗಿದ ಘಟನೆ ನಡೆದ ಕೆಲವೇ ದಿನಗಳ ಅಂತರದಲ್ಲೇ ಛತ್ತೀಸ್ಗಢದ ಸರಕಾರಿ ಆಸ್ಪತ್ರೆಯೊಂದರಲ್ಲಿ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ನಾಲ್ಕು ನವಜಾತ ಶಿಶುಗಳು ಬಲಿಯಾಗಿವೆ. ಇಲ್ಲೂ ಕೂಡ ಮಕ್ಕಳ ಸಾವಿಗೆ ಕಾರಣವಾಗಿರುವುದು ಆಮ್ಲಜನಕದ ಕೊರತೆ.
ಘಟನೆ ನಡೆದಿರುವುದು ಛತ್ತೀಸ್ಗಢ ರಾಜಧಾನಿ ಗೊರಖ್ಪುರದ ಡಾ| ಭೀಮರಾವ್ ಅಂಬೇಡ್ಕರ್ ಆಸ್ಪತ್ರೆಯಲ್ಲಿ. ಘಟನೆಗೆ ಕಾರಣನಾಗಿರುವ ಸಿಬ್ಬಂದಿ ಹೆಸರು ರವಿಚಂದ್ರ. ಈತನಿಗೆ ಶಿಶುಗಳ ವಾರ್ಡ್ನಲ್ಲಿ ಆಮ್ಲಜನಕ ಪೂರೈಕೆ ಮೇಲೆ ನಿಗಾ ಇರಿಸುವ ಹೊಣೆ ನೀಡಲಾಗಿತ್ತು. ಆದರೆ ರವಿವಾರ ರಾತ್ರಿ ಯದ್ವಾತದ್ವ ಮದ್ಯ ಸೇವಿಸಿ ಆಸ್ಪತ್ರೆ ಕರ್ತವ್ಯಕ್ಕೆ ಹಾಜರಾಗಿದ್ದ ರವಿಚಂದ್ರ, ಅಮಲಿನಲ್ಲಿ ನಿದ್ರೆಗೆ ಜಾರಿದ್ದಾನೆ. ಇದೇ ವೇಳೆ ವೆಂಟಿಲೇಟರ್ ನೆರವಿನಿಂದ ಉಸಿರಾಡುತ್ತಿದ್ದ 10 ಮಕ್ಕಳಿಗೆ ಆಮ್ಲಜನಕ ಪೂರೈಕೆ ಸ್ಥಗಿತಗೊಂಡಿದೆ. ಸುಮಾರು 30 ನಿಮಿಷಗಳವರೆಗೆ ಆಮ್ಲಜನಕ ಪೂರೈಕೆಯಾಗದ ಹಿನ್ನೆಲೆಯಲ್ಲಿ ನಾಲ್ಕು ನವಜಾತ ಶಿಶುಗಳು ಅಸುನೀಗಿವೆ. ವಿಚಾರ ಗೊತ್ತಾಗುತ್ತಿದ್ದಂತೆಯೇ ಎಚ್ಚೆತ್ತ ಇತರೆ ಸಿಬಂದಿ, ಕೂಡಲೇ ಆಮ್ಲಜನ ಪೂರೈಕೆ ಪುನಾರಂಭಿಸಿ, ಉಳಿದ ಮಕ್ಕಳ ಜೀವವನ್ನು ಉಳಿಸಿದ್ದಾರೆ. ಈ ಸಂಬಂಧ ರವಿಚಂದ್ರನನ್ನು ಕೆಲಸದಿಂದ ವಜಾ ಮಾಡಲಾಗಿದೆ. ಹಾಗೇ ಘಟನೆ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ರಮಣ್ ಸಿಂಗ್ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್