Gujarat University;ದಾಳಿಯ ಬಳಿಕ ವಿದೇಶಿ ವಿದ್ಯಾರ್ಥಿಗಳ ಸ್ಥಳಾಂತರ: ಭದ್ರತೆ ಬಿಗಿ
ಹಾಸ್ಟೆಲ್ ನಲ್ಲಿ ನಮಾಜ್ ಮಾಡುವಾಗ ಗುಂಪು ದಾಳಿ ನಡೆಸಲಾಗಿತ್ತು...
Team Udayavani, Mar 18, 2024, 8:02 PM IST
ಅಹಮದಾಬಾದ್: ಗುಜರಾತ್ ವಿವಿಯ ಹಾಸ್ಟೆಲ್ನಲ್ಲಿ ನಮಾಜ್ ಮಾಡುತ್ತಿದ್ದ ವೇಳೆ ನಡೆದ ದಾಳಿಯ ಬಳಿಕ ವಿದೇಶಿ ವಿದ್ಯಾರ್ಥಿಗಳನ್ನು ಹೊಸ ಹಾಸ್ಟೆಲ್ಗೆ ಸ್ಥಳಾಂತರಿಸಲು ಅಧಿಕಾರಿಗಳು ನಿರ್ಧರಿಸಿ,ದ್ದು, ಸಲಹಾ ಸಮಿತಿಯನ್ನು ರಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ವಿಶ್ವವಿದ್ಯಾನಿಲಯವು ಹಾಸ್ಟೆಲ್ ಬ್ಲಾಕ್ಗಳ ಭದ್ರತೆಯನ್ನು ಬಲಪಡಿಸಲು ಮಾಜಿ ಸೇನಾ ಸಿಬಂದಿಗಳನ್ನು ನಿಯೋಜಿಸಲು ಭದ್ರತಾ ಏಜೆನ್ಸಿಗಳಿಗೆ ನಿರ್ದೇಶನ ನೀಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
20 ರಿಂದ 25 ಮಂದಿ ಶನಿವಾರ ರಾತ್ರಿ ಹಾಸ್ಟೆಲ್ ಆವರಣವನ್ನು ಪ್ರವೇಶಿಸಿ ನಮಾಜ್ ಮಾಡುವುದನ್ನು ವಿರೋಧಿಸಿ, ಮಸೀದಿಗೆ ಹೋಗಲು ಹೇಳಿದ್ದಾರೆ. ವಾಗ್ವಾದಕ್ಕಿಳಿದು ವಿದ್ಯಾರ್ಥಿಗಳ ಹಲ್ಲೆ ನಡೆಸಿ ಕಲ್ಲು ತೂರಾಟ ನಡೆಸಿ ಕೊಠಡಿಗಳನ್ನೂ ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ವಿಶ್ವವಿದ್ಯಾನಿಲಯದ 75 ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು ತಂಗಿದ್ದ ಎ-ಬ್ಲಾಕ್ ಹಾಸ್ಟೆಲ್ ಆವರಣದಲ್ಲಿ ದಾಂಧಲೆ ನಡೆಸಲಾಗಿದೆ ಎಂದು ವಿಸಿ ಗುಪ್ತಾ ಹೇಳಿದ್ದಾರೆ.
ಹಲ್ಲೆಯ ನಂತರ ಶ್ರೀಲಂಕಾದಿಂದ ಮತ್ತು ತಜಕಿಸ್ಥಾನದ ಇಬ್ಬರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿತೇಶ್ ಮೇವಾಡ ಮತ್ತು ಭರತ್ ಪಟೇಲ್ ಎಂಬ ಇಬ್ಬರು ಆರೋಪಿಗಳನ್ನು ಭಾನುವಾರ ಬಂಧಿಸಲಾಗಿದ್ದು, ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ.
ಅಫ್ಘಾನಿಸ್ಥಾನ, ತಜಕಿಸ್ಥಾನ್, ಶ್ರೀಲಂಕಾ ಮತ್ತು ಆಫ್ರಿಕಾ ಖಂಡದ ದೇಶಗಳು ಸೇರಿದಂತೆ ವಿಶ್ವವಿದ್ಯಾಲಯದಲ್ಲಿ ಸುಮಾರು 300 ಅಂತಾ ರಾಷ್ಟ್ರೀಯ ವಿದ್ಯಾರ್ಥಿಗಳು ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ