ಕೆಂಪುಕೋಟೆಯಲ್ಲಿ ಸಿಖ್ ಧ್ವಜ ಹಾರಿಸಿದ್ದು ನಾನೇ: ಯಾರಿದು ನಟ ದೀಪ್ ಸಿಧು, ಸನ್ನಿ ಆಪ್ತ

ದೀಪ್ ಸಿಧು ಆರಂಭದಿಂದಲೂ ನಮ್ಮ ಪ್ರತಿಭಟನೆಯ ದಿಕ್ಕನ್ನು ತಪ್ಪಿಸಲು ಯತ್ನ

Team Udayavani, Jan 27, 2021, 12:25 PM IST

ಕೆಂಪುಕೋಟೆಯಲ್ಲಿ ಸಿಖ್ ಧ್ವಜ ಹಾರಿಸಿದ್ದು ನಾನೇ: ಯಾರಿದು ನಟ ದೀಪ್ ಸಿಧು, ಸನ್ನಿ ಆಪ್ತ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ನೂತನ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಗಣರಾಜ್ಯೋತ್ಸವ(ಜ.26) ದಿನಾಚರಣೆಯಂದು ರೈತ ಸಂಘಟನೆಗಳು ನಡೆಸಿದ್ದ ಟ್ರ್ಯಾಕ್ಟರ್ ರಾಲಿ ಹಿಂಸಾಚಾರಕ್ಕೆ ತಿರುಗಿತ್ತು. ಅಲ್ಲದೇ ಕೆಂಪು ಕೋಟೆ ಮೇಲೆ ಸಿಖ್ ಮತ್ತು ರೈತರ ಬಾವುಟವನ್ನು ಹಾರಿಸಲಾಗಿತ್ತು. ಏತನ್ಮಧ್ಯೆ ಕೆಂಪುಕೋಟೆ ಬಳಿ ಬಾವುಟ ಹಾರಿಸಿದ ವ್ಯಕ್ತಿ ಯಾರು? ಆ ವ್ಯಕ್ತಿಗೂ ರೈತ ಸಂಘಟನೆಗೂ ಸಂಬಂಧ ಇದೆಯಾ ಎಂಬ ಚರ್ಚೆ ಆರಂಭವಾಗಿದೆ.

ಇದನ್ನೂ ಓದಿ:Flipkart Sale: ಹಲವು ಆಫರ್, ಕೈಗೆಟುಕುವ ದರದಲ್ಲಿ ದುಬಾರಿ ಮೊಬೈಲ್ ಗಳು

ಬಾವುಟ ಹಾರಿಸಿದ್ದು ನಾನೇ; ನಟ ದೀಪ್ ಸಿಧು

ಘಟನೆ ಬಗ್ಗೆ ತೀವ್ರ ಆಕ್ರೋಶವಾಗತೊಡಗುತ್ತಿದ್ದಂತೆಯೇ ಗಣರಾಜ್ಯೋತ್ಸವದಂದು ರೈತರ ಟ್ರ್ಯಾಕ್ಟರ್ ರಾಲಿ ವೇಳೆ ಕೆಂಪು ಕೋಟೆ ಬಳಿ ಸಿಖ್ ಧರ್ಮದ ಬಾವುಟವನ್ನು ಹಾರಿಸಿದ್ದು ನಾನೇ ಎಂಬುದಾಗಿ ಪಂಜಾಬಿ ನಟ ದೀಪ್ ಸಿಧು ಒಪ್ಪಿಕೊಂಡಿದ್ದಾರೆ.

ನಿಷೇಧಿತ ಸಿಖ್ಸ್ ಫಾರ್ ಜಸ್ಟೀಸ್ ಸದಸ್ಯರಾಗಿರುವ ದೀಪ್ ಸಿಧು ಪ್ರಚೋದನಕಾರಿ ಭಾಷಣ ಮಾಡಿ ತಮ್ಮ ಬೆಂಬಲಿಗರನ್ನು ಕೆಂಪುಕೋಟೆಯತ್ತ ಕರೆದೊಯ್ದಿದ್ದರು ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಸಿಧು, ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದು, ತಾನು ಮತ್ತು ತಮ್ಮ ಬೆಂಬಲಿಗರು ರಾಷ್ಟ್ರಧ್ವಜವನ್ನು ತೆಗೆದುಹಾಕಿಲ್ಲ. ಆದರೆ ಕೆಂಪುಕೋಟೆ ಮೇಲೆ ಸಾಂಕೇತಿಕ ಪ್ರತಿಭಟನಾರ್ಥವಾಗಿ “ನಿಶಾನ್ ಸಾಹೀಬ್” ಧ್ವಜವನ್ನು ಏರಿಸಿರುವುದಾಗಿ ತಿಳಿಸಿದ್ದಾರೆ. ನಿಶಾನ್ ಸಾಹೀಬ್ ಬಾವುಟ ಸಿಖ್ ಧರ್ಮದ ಗುರುತಾಗಿದೆ. ಇದು ಎಲ್ಲಾ ಗುರುದ್ವಾರದಲ್ಲಿ ಕಂಡು ಬರುತ್ತದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ದೆಹಲಿ ಟ್ರ್ಯಾಕ್ಟರ್ ರಾಲಿ ವೇಳೆ ಹಿಂಸಾಚಾರ; ನ್ಯಾಯಾಂಗ ತನಿಖೆ ನಡೆಸಿ: ಸುಪ್ರೀಂಗೆ ಪಿಐಎಲ್

ಮಂಗಳವಾರ(ಜನವರಿ 26) ಸಂಜೆ ಫೇಸ್ ಬುಕ್ ಪೇಜ್ ನಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಿರುವ ಸಿಧು, ನಮ್ಮದು ಯಾವುದೇ ಪೂರ್ವಯೋಜಿತ ಕೃತ್ಯವಲ್ಲ. ಇದಕ್ಕೆ ಯಾವುದೇ ಕೋಮು ಬಣ್ಣ ಬಳಿಯಬೇಕಾದ ಅಗತ್ಯವಿಲ್ಲ ಮತ್ತು ಮೂಲಭೂತವಾದಿಗಳ ಕೈವಾಡವಿಲ್ಲ. ಕೇವಲ ಕಾಯ್ದೆ ವಿರುದ್ಧ ಪ್ರತಿಭಟನೆ ವ್ಯಕ್ತಪಡಿಸಲು ನಿಶಾನ್ ಸಾಹೀಬ್ ಮತ್ತು ರೈತರ ಧ್ವಜಗಳನ್ನು ಹಾರಿಸಿರುವುದಾಗಿ ತಿಳಿಸಿದ್ದು, ಕಿಶಾನ್ ಮಜ್ದೂರ್ ಏಕ್ತಾ ಘೋಷಣೆ ಕೂಗಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ನಟ ಸನ್ನಿ ಡಿಯೋಲ್ ಅವರು 2019ರ ಲೋಕಸಭಾ ಚುನಾವಣೆ ವೇಳೆ ಗುರುದಾಸ್ ಪುರ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಂದರ್ಭದಲ್ಲಿ ನಟ ಸಿಧು ನಿಕಟವರ್ತಿಯಾಗಿದ್ದರು. ಸನ್ನಿ ಈಗ ಸಂಸದರಾಗಿದ್ದು, ಕಳೆದ ಡಿಸೆಂಬರ್ ತಿಂಗಳಿನಿಂದ ರೈತರ ಪ್ರತಿಭಟನೆಯಲ್ಲಿ ಸಿಧು ಪಾಲ್ಗೊಂಡ ಬಳಿಕ ಸನ್ನಿ ಅಂತರ ಕಾಯ್ದುಕೊಂಡಿದ್ದಾರೆನ್ನಲಾಗಿದೆ.

ಮತ್ತೊಂದು ವರದಿ ಪ್ರಕಾರ, ಸಿಧು ಸನ್ನಿ ಡಿಯೋಲ್ ಅವರ ನಿಕಟವರ್ತಿಯಾಗಿದ್ದು, ಈ ಹಿಂದೆ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದ ದೀಪ್ ಸಿಧು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರನ್ನು ಭೇಟಿ ಮಾಡಿ ತೆಗೆಯಿಸಿಕೊಂಡಿದ್ದ ಫೋಟೋ ಈಗ ವೈರಲ್ ಆಗಿರುವುದಾಗಿ ವಿವರಿಸಿದೆ.

ಸಿಧುವನ್ನು ದೂರ ಇಟ್ಟಿದ್ದ ರೈತ ಸಂಘಟನೆಗಳು:

ದೀಪ್ ಸಿಧು ಆರಂಭದಿಂದಲೂ ನಮ್ಮ ಪ್ರತಿಭಟನೆಯ ದಿಕ್ಕನ್ನು ತಪ್ಪಿಸಲು ಯತ್ನಿಸಿರುವುದಾಗಿ ಸ್ವರಾಜ್ ಅಭಿಯಾನ್ ಮುಖಂಡ ಯೋಗೇಂದ್ರ ಯಾದವ್ ಆರೋಪಿಸಿದ್ದಾರೆ. ಶಂಭು ಗಡಿಯಲ್ಲಿ ಸಿಧು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಾಗ ಅವರ ಚಲನವಲನ, ಚಟುವಟಿಕೆ ಗಮನಿಸಿದ ಬಳಿಕ ಈ ವ್ಯಕ್ತಿಯಿಂದ ದೂರ ಉಳಿಯುವಂತೆ ರೈತ ಸಂಘಟನೆಗಳು ನಿರ್ಧರಿಸಿದ್ದವು ಎಂದು ತಿಳಿಸಿದ್ದಾರೆ.

ದೀಪ್ ಸಿಧು ಹಿನ್ನಲೆ:

ದೀಪ್ ಸಿಧು 2015ರಲ್ಲಿ ಪಂಜಾಬಿಯ ರಮ್ತಾ ಜೋಗಿ ಸಿನಿಮಾದಲ್ಲಿ ನಟಿಸುವ ಮೂಲಕ ಬೆಳ್ಳಿ ತೆರೆಗೆ ಪ್ರವೇಶಿಸಿದ್ದರು. ಈ ಸಿನಿಮಾವನ್ನು ಬಾಲಿವುಡ್ ಖ್ಯಾತ ನಟ ಧರ್ಮೇಂದ್ರ ಅವರ ಬ್ಯಾನರ್ ನಡಿಯಲ್ಲಿ ನಿರ್ಮಿಸಲಾಗಿತ್ತು. ಐದಾರು ಸಿನಿಮಾಗಳಲ್ಲಿ ನಟಿಸಿರುವ ಸಿಧು ಎನ್ ಐಎ (ರಾಷ್ಟ್ರೀಯ ತನಿಖಾ ದಳ) 2021ರ ಜನವರಿ 21ರಂದು ಸಿಖ್ ಫಾರ್ ಜಸ್ಟೀಸ್ ಗೆ ಸಂಬಂಧಿಸಿದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.