DRI ದಾಳಿ ಬಳಿಕ ದಿಲ್ಲಿ ಜ್ಯುವೆಲ್ಲರ್ ಕಟ್ಟಡದಿಂದ ಹಾರಿ ಆತ್ಮಹತ್ಯೆ
Team Udayavani, Apr 26, 2018, 3:58 PM IST
ಹೊಸದಿಲ್ಲಿ : ತನ್ನ ನಿವಾಸ ಮತ್ತು ಮಳಿಗೆಯ ಮೇಲೆ ಕಂದಾಯ ಗುಪ್ತಚರ ದಳದ ಅಧಿಕಾರಿಗಳಿಂದ ದಾಳಿ ನಡೆದುದನ್ನು ಅನುಸರಿಸಿ ದಿಲ್ಲಿಯ ಜ್ಯುವೆಲ್ಲರ್ ಗೌರವ್ ಗುಪ್ತಾ ಎಂಬವರು ಕಂದಾಯ ಗುಪ್ತಚರ ನಿದೇಶನಾಲಯ ಕಟ್ಟಡದ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡರು.
ಮಧ್ಯಾಹ್ನ 12 ಗಂಟೆಯ ಹೊತ್ತಿಗೆ ಗೌರವ್ ಗುಪ್ತಾ ಅವರ ದೇಹ ಕಟ್ಟಡದ ಕೆಳಗೆ ನೆಲದಲ್ಲಿ ರಕ್ತದ ಮಡುವಿನಲ್ಲಿ ಬಿದ್ದುಕೊಂಡಿದ್ದುದು ಕಂಡುಬಂತು.
ಕೂಡಲೇ ಅವರನ್ನು ಸಫ್ದರ್ಜಂಗ್ ಆಸ್ಪತ್ರೆಗೆ ಒಯ್ಯಲಾಯಿತು. ಆದರೆ ಅಲ್ಲಿನ ವೈದ್ಯರು ಗುಪ್ತಾ ಅದಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದರು.
ಡಿಆರ್ಐ ಗುಪ್ತಚರ ದಳದ ಅಧಿಕಾರಿಗಳು ಹೇಳಿರುವ, ದಾಳಿಯ ಬಳಿಕ ಗುಪ್ತಾ ಅವರನ್ನು ಬಂಧಿಸಿದ್ದೂ ಇಲ್ಲ; ಸಮನ್ಸ್ ನೀಡಿದ್ದೂ ಇಲ್ಲ; ಕೇವಲ ಭಯಗ್ರಸ್ತರಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ.
ಗೌರವ್ ಗುಪ್ತಾ ಅವರ ಸಾವಿನ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಲಾಗಿದೆ. ಡಿಆರ್ಐ ಅಧಿಕಾರಿಗಳು ಗೌರವ್ ಗುಪ್ತಾ ಅವರ ವಶದಲ್ಲಿದ್ದ ಒಟ್ಟು 13 ಕೋಟಿ ರೂ. ಮೌಲ್ಯದ ಕಳ್ಳಸಾಗಣೆ ಸರಕನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ