ನಿಷೇಧದ ಹೊರತಾಗಿಯೂ ಪಟಾಕಿ ಹಂಚಿದ ಬಿಜೆಪಿ ವಕ್ತಾರ
Team Udayavani, Oct 18, 2017, 4:00 PM IST
ನವದೆಹಲಿ: ಸುಪ್ರೀಂಕೋರ್ಟ್ ಪಟಾಕಿ ಮಾರಾಟಕ್ಕೆ ನಿಷೇಧ ಹೇರಿರುವ ಹೊರತಾಗಿಯೂ ಬಿಜೆಪಿಯ ದೆಹಲಿ ವಕ್ತಾರ ತೇಜೀಂದರ್ ಬಗ್ಗಾ ಅವರು ಕೊಳಗೇರಿ ಮಕ್ಕಳಿಗೆ ಪಟಾಕಿ ವಿತರಿಸುವ ಮೂಲಕ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದಾರೆ. ಅಷ್ಟೇ ಅಲ್ಲ, ಮಕ್ಕಳಿಗೆ ಪಟಾಕಿ ವಿತರಿಸುತ್ತಿರುವ ಫೋಟೋವನ್ನು ಟ್ವಿಟರ್ನಲ್ಲಿ ಅಪ್ ಲೋಡ್ ಮಾಡಿದ್ದಾರೆ.
ನಿಷೇಧ ಆದೇಶ ಬಂದಾಗಲೇ, ತಾವು 50 ಸಾವಿರ ರೂ.ಗಳ ಪಟಾಕಿ ಖರೀದಿಸಿ ಮಕ್ಕಳಿಗೆ ಹಂಚುತ್ತೇನೆ ಎಂದು ಬಗ್ಗಾ ಘೋಷಿಸಿಕೊಂಡಿದ್ದರು. ಇದೀಗ ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿರುವ ಅವರು, “ಸುಪ್ರೀಂ ಕೋರ್ಟ್ ಪಟಾಕಿ ಮಾರಾಟ ನಿಷೇಧಿಸಿದೆಯೇ ಹೊರತು, ಸಿಡಿಸುವುದನ್ನಲ್ಲ. ನಾನು ಪಟಾಕಿಯನ್ನು ದೆಹಲಿಯ ಹೊರಗಿಂದ ಖರೀದಿಸಿ ಹಂಚಿದ್ದೇನೆ’ ಎಂದಿದ್ದಾರೆ. ಇನ್ನೊಂದೆಡೆ, ಪಟಾಕಿ ನಿಷೇಧಕ್ಕೆ ಪ್ರತಿಭಟನಾರ್ಥವಾಗಿ ಸುಪ್ರೀಂಕೋರ್ಟ್ ಮುಂದೆಯೇ ಕಿಡಿಗೇಡಿಗಳು ಪಟಾಕಿ ಸಿಡಿಸಿದ್ದು, 14 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.
ಡೀಸೆಲ್ ಜನರೇಟರ್ ನಿಷೇಧ: ಇದೇ ವೇಳೆ, ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಾಗಿರುವ ಕಾರಣ ಡೀಸೆಲ್ ಜನರೇಟರ್ ಬಳಕೆ ಮೇಲೂ ನಿಷೇಧ ಹೇರಲಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಈ ಆದೇಶ ಹೊರಡಿಸಿದ್ದು, ಬದಾ ರ್ಪುರ್ ಉಷ್ಣ ವಿದ್ಯುತ್ ಸ್ಥಾವರ ವನ್ನು ಮುಚ್ಚುವಂತೆಯೂ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ