ಆರೆಸ್ಸೆಸ್ ಪಥಸಂಚಲನಕ್ಕೆ ಹೈಕೋರ್ಟ್ ಅಸ್ತು: ಅನುಮತಿ ನೀಡದಿದ್ದರೆ ನ್ಯಾಯಾಂಗ ನಿಂದನೆ?
ಅ.2ರ ಬದಲಾಗಿ ನ.6ರಂದು ನಡೆಸಲು ಸೂಚನೆ
Team Udayavani, Sep 30, 2022, 11:23 PM IST
ಚೆನ್ನೈ: ಕೊನೆಗೂ ತಮಿಳುನಾಡಿನಲ್ಲಿ ಪಥಸಂಚಲನ ನಡೆಸಲು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಮದ್ರಾಸ್ ಉಚ್ಚ ನ್ಯಾಯಾಲಯದ ಅನುಮತಿ ದೊರೆತಿದೆ.
ತಮಿಳುನಾಡಿನ 51 ಸ್ಥಳಗಳಲ್ಲಿ ಆರೆಸ್ಸೆಸ್ ನಡೆಸಲು ಉದ್ದೇಶಿಸಿರುವ ಪಥಸಂಚಲನ ಮತ್ತು ಸಾರ್ವಜನಿಕ ಸಭೆಯನ್ನು ಅಕ್ಟೋಬರ್ 2ರ ಬದಲಾಗಿ ನವೆಂಬರ್ 6ರಂದು ನಡೆಸುವಂತೆ ಮದ್ರಾಸ್ ಹೈಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ.
ಜತೆಗೆ, ಈ ಕಾರ್ಯಕ್ರಮ ಏರ್ಪಡಿಸಲು ಅನುಮತಿ ನೀಡಬೇಕು ಹಾಗೂ ಅ.31ರೊಳಗಾಗಿ ಈ ಕುರಿತು ನಮಗೆ ಮಾಹಿತಿ ನೀಡಬೇಕು ಎಂದು ತ.ನಾಡು ಸರಕಾರ ಮತ್ತು ಪೊಲೀಸರಿಗೆ ಸೂಚಿಸಿದೆ.
ಒಂದು ವೇಳೆ, ಸರಕಾರ ಅನುಮತಿ ನೀಡದೇ ಇದ್ದರೆ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಿದೆ.
“ಅಕ್ಟೋಬರ್ 2ರಂದು ಗಾಂಧಿ ಜಯಂತಿ ಇರುವ ಕಾರಣ ನೀವು ಆರೆಸ್ಸೆಸ್ ಪಥಸಂಚಲನಕ್ಕೆ ಅನುಮತಿ ನೀಡುತ್ತಿಲ್ಲ ಅಲ್ಲವೇ? ಹಾಗಿದ್ದರೆ, ಅ.2ರ ಬದಲಾಗಿ ನ.6ರಂದು ಕಾರ್ಯಕ್ರಮ ನಡೆಯಲಿ’ ಎಂದು ಕೋರ್ಟ್ ಹೇಳಿತು. ಜತೆಗೆ ರ್ಯಾಲಿ ಮತ್ತು ಸಾರ್ವಜನಿಕ ಸಭೆ ನಡೆಸಲು ಸೆ.22ರಂದು ನಾವು ಹಾಕಿದ್ದ ಷರತ್ತುಗಳು ನ.6ರ ರ್ಯಾಲಿಗೂ ಅನ್ವಯವಾಗುತ್ತದೆ ಎಂದು ಆರೆಸ್ಸೆಸ್ಗೆ ಸೂಚಿಸಿದೆ.
ಅ.2ರ ಕಾರ್ಯಕ್ರಮಕ್ಕೆ ರಾಜ್ಯ ಸರಕಾರ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಆರೆಸ್ಸೆಸ್ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ