ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಅನುಮತಿ ಕೋರಿ ಡಿಸಿಜಿಐಗೆ ಮನವಿ ಸಲ್ಲಿಸಿದ ಫೀಜರ್ ಇಂಡಿಯಾ
Team Udayavani, Dec 6, 2020, 12:34 PM IST
ನವದೆಹಲಿ: ಅಮೆರಿಕಾದ ಔಷಧ ತಯಾರಕ ಸಂಸ್ಥೆ ಫೀಜರ್ ( pfizer)ತನ್ನ ಕೋವಿಡ್ -19 ಲಸಿಕೆಯ ತುರ್ತು ಬಳಕೆಯ ಅನುಮತಿಯನ್ನು ಕೋರಿ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಗೆ ಅರ್ಜಿಯನ್ನು ಸಲ್ಲಿಸಿದೆ. ಗಮನಾರ್ಹ ಸಂಗತಿಯೆಂದರೇ ಫೀಜರ್ ಸಂಸ್ಥೆ ಈಗಾಗಲೇ ಯುಕೆ ಮತ್ತು ಬಹ್ರೇನ್ನಲ್ಲಿ ತುರ್ತು ಔಷಧ ಬಳಕೆಯ ಅನುಮತಿಯನ್ನು ಪಡೆದುಕೊಂಡಿದೆ ಎಂದು ವರದಿ ತಿಳಿಸಿದೆ.
ಫೀಜರ್ ಇಂಡಿಯಾ, ಡಿಜಿಸಿಐಗೆ ಸಲ್ಲಿಸಿದ ಅರ್ಜಿಯಲ್ಲಿ, ದೇಶದಲ್ಲಿ ಲಸಿಕೆಯನ್ನು ಮಾರಾಟ ಮತ್ತು ವಿತರಣೆಗಾಗಿ ಆಮದು ಮಾಡಿಕೊಳ್ಳಲು ನಿಯಂತ್ರಕರಿಂದ ಅನುಮತಿ ಕೋರಿದೆ. ಭಾರತದಲ್ಲಿ 96 ಲಕ್ಷಕ್ಕೂ ಹೆಚ್ಚು ಜನರ ಮೇಲೆ ಪರಿಣಾಮ ಬೀರಿದ ಮಾರಣಾಂತಿಕ ವೈರಸ್ಗೆ ಲಸಿಕೆ ಹುಡುಕುವ ಸ್ಪರ್ಧೆಯ ಮಧ್ಯೆ ಡಿಸಿಜಿಐ ಸ್ವೀಕರಿಸಿದ ಮೊದಲ ಕೋರಿಕೆ ಇದಾಗಿದೆ.
ಡಿಸಿಜಿಐನ ಅಧಿಕೃತ ಮೂಲಗಳು ಮಾಧ್ಯಮಗಳಿಗೆ ತಿಳಿಸಿದ ಮಾಹಿತಿ ಪ್ರಕಾರ ಫೀಜರ್ ಇಂಡಿಯಾ ಸಲ್ಲಿಸಿದ ಅರ್ಜಿಯನ್ನು ಪರಿಶೀಲನೆ ನಡೆಸಲಾಗುತ್ತಿದೆ. ನೂತನ ಔಷಧ ಮತ್ತು ಕ್ಲಿನಿಕಲ್ ಪ್ರಯೋಗಗಳ ನಿಯಮಗಳು -2019 ರ ಪ್ರಕಾರ, 90 ದಿನಗಳ ಒಳಗಾಗಿ ಈ ಕೋರಿಕೆಗೆ ಉತ್ತರಿಸಲಾಗುವುದು ಎಂದಿದೆ.
ಇದನ್ನೂ ಓದಿ: ಮಂಗಳೂರು: ಕಂಟೈನರ್ ಗೆ ಬೈಕ್ ಢಿಕ್ಕಿ, ಸವಾರ ಸ್ಥಳದಲ್ಲೇ ಸಾವು
ಫೀಜರ್ ಮತ್ತು ಜರ್ಮನ್ ಜೈವಿಕ ತಂತ್ರಜ್ಞಾನ ಪಾಲುದಾರ ಸಂಸ್ಥೆಯಾದ ಬಯೋಎನ್ಟೆಕ್ ಜಂಟಿಯಾಗಿ ಅಭಿವೃದ್ಧಿಪಡಿಸಿದ ಕೋವಿಡ್ -19 ಲಸಿಕೆಗೆ ‘ಯುಕೆ’ ಕಳೆದ ಬುಧವಾರ(ಡಿ.2) ಗ್ರೀನ್ ಸಿಗ್ನಲ್ ನೀಡಿತ್ತು. ಈ ಲಸಿಕೆ ಮೂರನೇ ಹಂತದ ಪ್ರಯೋಗಗಳಲ್ಲಿ ಶೇಕಡಾ 95 ರಷ್ಟು ದಕ್ಷತೆಯನ್ನು ಸಾಧಿಸಿದೆ ಎಂದು ವರದಿಯಾಗಿದೆ.
ಭಾರತದಲ್ಲಿ ಈ ಲಸಿಕೆಗೆ ಅನುಮತಿ ನೀಡುವ ಮೊದಲು, ಮೂರು ಹಂತದ ಕ್ಲಿನಿಕಲ್ ಪ್ರಯೋಗವನ್ನು ನಡೆಸುವುದು ಫೀಜರ್ ಸಂಸ್ಥೆಗೆ ಅನಿವಾರ್ಯವಾಗಿದೆ.
ಇದನ್ನೂ ಓದಿ: ಆರ್ ಎಸ್ಎಸ್ ನ ಮುಖವಾಣಿಯಾಗಿ ಬಿಜೆಪಿ ನಾಯಕರು ಕೆಲಸ ಮಾಡುತ್ತಿದ್ದಾರೆ: ನಾರಾಯಣ ಸ್ವಾಮಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
MUST WATCH
ಹೊಸ ಸೇರ್ಪಡೆ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ