ಮೋದಿ ಆರ್ಥಿಕ ನೀತಿ: ಅಪ್ಪನಿಂದ ಟೀಕೆ, ಮಗನಿಂದ ಸಮರ್ಥನೆ


Team Udayavani, Sep 28, 2017, 12:31 PM IST

Jayant Sinha-700.jpg

ಹೊಸದಿಲ್ಲಿ : ಹಿರಿಯ ಬಿಜೆಪಿ ನಾಯಕ ಯಶವಂತ್‌ ಸಿನ್ಹಾ ಅವರು ‘ದೇಶದ ಆರ್ಥಿಕತೆಯನ್ನು ಹಳ್ಳ ಹಿಡಿಸಿದ್ದಾರೆ’ ಎಂದು ಆರೋಪಿಸಿ ಕೇಂದ್ರ ವಿತ್ತ ಸಚಿವ ಅರುಣ್‌ ಜೇತ್ಲಿ ವಿರುದ್ಧ ಹರಿಹಾಯ್ದ ಒಂದು ದಿನ ತರುವಾಯ ಸಿನ್ಹಾ ಅವರ ಪುತ್ರನಾಗಿರುವ ಕೇಂದ್ರ ಸಚಿವ ಜಯಂತ್‌ ಸಿನ್ಹಾ ಅವರು ಸರಕಾರದ ಆರ್ಥಿಕ ನೀತಿಗಳನ್ನು ಸಮರ್ಥಿಸಿಕೊಂಡು, “ಮೋದಿ ಸರಕಾರವು ಬಲಿಷ್ಠ ಹೊಸ ಆರ್ಥಿಕತೆಯನ್ನು ರೂಪಿಸಿದ್ದು ಇದು ದೀರ್ಘ‌ ಕಾಲದ ಬೆಳವಣಿಗೆಗೆ ಪುಷ್ಟಿ ನೀಡುತ್ತದೆ ಮತ್ತು ನವಭಾರತದ ನಿರ್ಮಾಣಕ್ಕೆ ಪೂರಕವಾಗಿ ಅಪಾರ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸಲಿದೆ’ ಎಂದು ಹೇಳಿದ್ದಾರೆ. 

ಯಶವಂತ್‌ ಸಿನ್ಹಾ ಅವರು ಪ್ರಮುಖ ರಾಷ್ಟ್ರೀಯ ದೈನಿಕವೊಂದರಲ್ಲಿ ಬರೆದಿದ್ದ ಲೇಖನದಲ್ಲಿ  ದೇಶದ ಆರ್ಥಿಕತೆಯನ್ನು ಚಿಂದಿ ಮಾಡಿರುವ ವಿತ್ತ ಸಚಿವ ಅರುಣ್‌ ಜೇತ್ಲಿ ವಿರುದ್ಧ ಕಟು ಟೀಕಾ ಪ್ರಹಾರ ಮಾಡಿದ್ದರಲ್ಲದೆ, “ಈಗಿನ ಸುಧಾರಣಾ ಪ್ರಕ್ರಿಯೆಗಳಿಂದ ಹಿಂದೆ ಸರಿಯಬೇಕು ಮತ್ತು ಉದ್ಯೋಗ ಸೃಷ್ಟಿಸದ ಅಭಿವೃದ್ಧಿ ಕಾರ್ಯಗಳಿಗೆ ವಿಪರೀತ ಒತ್ತು ಕೊಡುವುದನ್ನು ನಿಲ್ಲಿಸಬೇಕು’ ಎಂದು ಪ್ರಧಾನಿ ಮೋದಿಯನ್ನು ಆಗ್ರಹಿಸಿದ್ದರು.  

ಸಿನ್ಹಾ ಅವರು ತಮ್ಮ ಲೇಖನದಲ್ಲಿ ಮೋದಿ ಸರಕಾರದ ನೋಟು ಅಮಾನ್ಯ ಕ್ರಮವನ್ನು ಹಾಗೂ ಅವಸರವಸರದಲ್ಲಿ ಜಿಎಸ್‌ಟಿ ಜಾರಿಗೊಳಿಸಿರುವುದನ್ನು ದೂರದೃಷ್ಟಿಯ ಕ್ರಮ ಅಲ್ಲವೆಂದು ಜರೆದಿದ್ದಾರೆ. 

ಇದಕ್ಕೆ ಉತ್ತರ ಕೊಡುವ ರೀತಿಯಲ್ಲಿ ಯಶವಂತ್‌ ಸಿನ್ಹಾ ಅವರ ಪುತ್ರ, ಕೇಂದ್ರ ಸಹಾಯಕ ನಾಗರಿಕ ವಾಯುಯಾನ ಸಚಿವ ಜಯಂತ್‌ ಸಿನ್ಹಾ ಅವರು ಬರೆದಿರುವ ಲೇಖನವನ್ನು ಇಂದು ಗುರುವಾರ ಇನ್ನೊಂದು ರಾಷ್ಟ್ರೀಯ ದೈನಿಕ ಪ್ರಕಟಿಸಿದೆ.

ಈ ಲೇಖನದಲ್ಲಿ ಜಯಂತ್‌ ಅವರು, “ಮೋದಿ ಸರಕಾರ ಈಗ ಸೃಷ್ಟಿಸುತ್ತಿರುವ ಹೊಸ ಆರ್ಥಿಕತೆಯು ಹೆಚ್ಚು ಪಾರದರ್ಶಕವಾಗಿರುತ್ತದ; ಜಾಗತಿಕವಾಗಿ ಮಿತ ವ್ಯಯದ್ದಾಗಿರುತ್ತದೆ ಮತ್ತು ನವೋನ್ಮೇಷತೆಗೆ ಇಂಬು ನೀಡುತ್ತದೆ; ಎಲ್ಲಕ್ಕಿಂತ ಮುಖ್ಯವಾಗಿ ಮೋದಿ ಸರಕಾರದ ಈ ಹೊಸ ಆರ್ಥಿಕತೆಯು ಹೆಚ್ಚು ಸಮಾನತೆಗೆ ಒತ್ತು ನೀಡುತ್ತದೆ ಮತ್ತು ಆ ಮೂಲಕ ಎಲ್ಲ ಭಾರತೀಯರು ಉತ್ತಮ ಬಾಳ್ವೆಯನ್ನು ನಡೆಸಲು ಸಾಧ್ಯವಾಗುತ್ತದೆ’ ಎಂದು ಹೇಳಿದ್ದಾರೆ. 

ಮೋದಿ ಸರಕಾರದ ನೋಟು ಅಮಾನ್ಯ ಕ್ರಮವನ್ನು ಸಮರ್ಥಿಸಿಕೊಂಡಿರುವ ಸಚಿವ ಜಯಂತ್‌, ಇದೊಂದು ಗೇಮ್‌ ಚೇಂಜರ್‌ ಆಗಿದ್ದು ಇದು ದೇಶದ ಆರ್ಥಿಕತೆಗೆ ಔಪಚಾರಿಕತೆಯ ಸ್ವರೂಪವನ್ನು ನೀಡುವ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ. 

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.