ಜಾರ್ಖಂಡ್ : ನಕ್ಸಲರಿಂದ ಬಿಜೆಪಿ ಕಛೇರಿ ಧ್ವಂಸ
Team Udayavani, May 3, 2019, 10:23 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ : Representative Image Used
ಜಾರ್ಖಂಡ್: ಇಲ್ಲಿನ ಸರಾಯ್ ಖೇಲಾ ಜಿಲ್ಲೆಯ ಖರ್ಸ್ವಾನ್ ಎಂಬಲ್ಲಿ ಭಾರತೀಯ ಜನತಾ ಪಕ್ಷದ ಚುನಾವಣಾ ಪ್ರಚಾರ ಕಛೇರಿಯನ್ನು ನಕ್ಸಲರು ಬಾಂಬ್ ನ್ಪೋಟಿಸಿ ಧ್ವಂಸಗೊಳಿಸಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಈ ಭಾಗದಲ್ಲಿ ಇಂದು ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನಲೆಯಲ್ಲಿ ನಕ್ಸಲರು ಈ ಕೃತ್ಯ ಎಸಗಿರಬಹುದೆಂದು ಸಂಶಯಿಸಲಾಗಿದೆ.
ಗುರುವಾರ ಮಧ್ಯರಾತ್ರಿ 12.30ರ ಸುಮಾರಿಗೆ ನಕ್ಸಲರು ಈ ನ್ಪೋಟವನ್ನು ನಡೆಸಿದ್ದಾರೆಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ. ಖುಂಟಿ ಲೊಖಸಭಾ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸುತ್ತಿರುವ ಜಾರ್ಖಂಡ್ ನ ಮಾಜೀ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಅರ್ಜುನ್ ಮುಂಡಾ ಅವರು ತಮ್ಮ ಚುನಾವಣಾ ಪ್ರಚಾರ ಕಾರ್ಯಗಳಿಗಾಗಿ ಈ ಕಛೇರಿಯನ್ನು ಬಳಸುತ್ತಿದ್ದರೆಂದು ತಿಳಿದುಬಂದಿದೆ.
ಅಮಿತ್ ಶಾ ಅವರು ಇಂದು ಜಾರ್ಖಂಡ್ ನ ಖುಂಟಿ, ಕೊಡೆರ್ಮಾ ಮತ್ತು ರಾಂಚಿ ಸೇರಿದಂತೆ ಹಲವು ಕಡೆ ಚುನಾವಣಾ ಪ್ರಚಾರ ಸಭೆಗಳನ್ನು ನಡೆಸಲಿದ್ದಾರೆ.
ಮಹಾರಾಷ್ಟ್ರದ ಗಢ್ ಚಿರೋಳಿಯಲ್ಲಿ ಸುಧಾರಿತ ನ್ಪೋಟಕಗಳನ್ನು ಬಳಸಿ ನಕ್ಸಲರು ಕ್ಯು.ಆರ್.ಟಿ. ಪಡೆಯ 16 ಪೊಲೀಸರನ್ನು ಬಲಿ ಪಡೆದ ಎರಡು ದಿನಗಳ ಬಳಿಕ ಜಾರ್ಖಂಡ್ ನಲ್ಲಿ ಈ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ