ದಿಲ್ಲಿಯಲ್ಲಿ ಮತ್ತೂಮ್ಮೆ ಗದ್ದುಗೆ ಏರಲು ಪ್ರಶಾಂತ್ ನೆರವು ಪಡೆದ ಕೇಜ್ರಿವಾಲ್
Team Udayavani, Dec 14, 2019, 8:25 PM IST
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಮತ್ತೂಮ್ಮೆ ರಾಷ್ಟ್ರರಾಜಧಾನಿಯಲ್ಲಿ ಗದ್ದುಗೆ ಏರಲು ಆಮ್ ಆದ್ಮಿ ಪಾರ್ಟಿ ನೇತಾರ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ರಾಜಕೀಯ ಕಾರ್ಯತಂತ್ರಗಾರ ಪ್ರಶಾಂತ್ ಕಿಶೋರ್ ನೆರವು ಪಡೆಯುತ್ತಿದ್ದಾರೆ. ಈ ಕುರಿತು ಕೇಜ್ರಿವಾಲ್ ಟ್ವೀಟ್ ಮಾಡಿದ್ದು, ಪ್ರಶಾಂತ್ ಕಿಶೋರ್ ನೇತೃತ್ವದ ಭಾರತೀಯ ರಾಜಕೀಯ ಕ್ರಿಯಾ ಸಮಿತಿ(ಐ-ಪ್ಯಾಕ್ ) ಮುಂದಿನ ಚುನಾವಣೆಯಲ್ಲಿ ನಮ್ಮ ಜೊತೆ ಕೆಲಸ ಮಾಡಲಿದೆ.. ಇದನ್ನು ಹಂಚಿಕೊಳ್ಳುತ್ತಿರುವುದಕ್ಕೆ ಖುಷಿಯಾಗಿದೆ ಎಂದಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಕೂಡ ಪ್ರಶಾಂತ್ ನೆರವು ಪಡೆಯುತ್ತಿದ್ದಾರೆ.