47 ವರ್ಷ ಹಿಂದಿನ ಪ್ರಕರಣಕ್ಕೆ ಜಾಮೀನು
1973ರಲ್ಲಿ ಗುಜರಾತ್ನಲ್ಲಿ ನಡೆದಿದ್ದ ದರೋಡೆ ಪ್ರಕರಣ
Team Udayavani, Oct 17, 2020, 1:35 AM IST
ಸಾಂದರ್ಭಿಕ ಚಿತ್ರ
ಅಹ್ಮದಾಬಾದ್: ನಲವತ್ತ ಏಳು ವರ್ಷಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಪ್ಟೆಂಬರ್ನಲ್ಲಿ ಬಂಧಿತರಾಗಿದ್ದ ವ್ಯಕ್ತಿಗೆ ಅಹ್ಮದಾಬಾದ್ನ ಸ್ಥಳೀಯ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ಆ ವ್ಯಕ್ತಿಯನ್ನು ಯಶವಂತ ರಾವ್ ಮರಾಠ (68) ಎಂದು ಗುರುತಿಸಲಾಗಿದೆ. ಯಶವಂತ ರಾವ್ ವಿರುದ್ಧ 1973ರಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.12ರಂದು ಬಂಧನದ ಸಮನ್ಸ್ ನೀಡಲಾಗಿತ್ತು. ಹೀಗಾಗಿ ಗುಜರಾತ್ ಪೊಲೀಸರು ಮಧ್ಯಪ್ರದೇಶದ ಇಂದೋರ್ನಲ್ಲಿರುವ ಅವರ ನಿವಾಸದಲ್ಲಿ ಬಂಧಿಸಿದ್ದರು. ಹಿಂದಿನ ಅಸ್ಟೋಡಿಯಾ ಪೊಲೀಸ್ ಠಾಣೆ (ಖಾಡಿಯಾ ಎಂದು ಹೆಸರು)ಯಲ್ಲಿ ಕೇಸು ದಾಖಲಾಗಿತ್ತು.
ಬಂಧನದ ಬಳಿಕ ಅವರನ್ನು ಸಾಬರಮತಿ ಜೈಲಲ್ಲಿ ಇರಿಸಲಾಗಿತ್ತು. ಅಹ್ಮದಾಬಾದ್ನ ಪ್ರಧಾನ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಎಸ್.ಕೆ.ಬಕ್ಷಿ ಅವರ ಮುಂದೆ ಪ್ರಕರಣ ವಿಚಾರಣೆಗೆ ಬಂದಿತು. ಮರಾಠ ಪರ ವಕೀಲರು ವಾದ ಮಂಡಿಸಿ, ಪ್ರಕರಣದಲ್ಲಿ ತಮ್ಮ ಕಕ್ಷಿದಾರನ ವಿರುದ್ಧ ತಪ್ಪು ಆರೋಪ ಹೊರಿಸಲಾಗಿದೆ. 1973ರಲ್ಲಿ ನಡೆದಿದ್ದ ಪ್ರಕರಣದಲ್ಲಿ ಕಕ್ಷಿದಾರನ ವಾಹನ ದುರ್ಬಳಕೆ ಮಾಡಲಾಗಿತ್ತು ಮತ್ತು ಸಹ ಆರೋಪಿತ ವ್ಯಕ್ತಿ ಪರಿಚಯಸ್ಥ. ಹೀಗಾಗಿ, ಅವರಿಗೂ ಘಟನೆಗೂ ಸಂಬಂಧವಿಲ್ಲ ಎಂದು ವಾದಿಸಿದರು. ವಾದ ಪರೀಶೀಲಿಸದ ನ್ಯಾಯಾಧೀಶ ಬಕ್ಷಿ ವಯಸ್ಸು, ಪ್ರಕರಣದ ಹಿನ್ನೆಲೆ ಗಮನಿಸಿ ಷರತ್ತು ಬದ್ಧ ಜಾಮೀನು ನೀಡಿದೆ ಎಂದು “ದ ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.
ಸರಕಾರಿ ವಕೀಲರು ತಮ್ಮ ವಾದದಲ್ಲಿ ಮರಾಠ 47 ವರ್ಷಗಳಿಂದ ತಲೆಮರೆಸಿ ಕೊಂಡಿದ್ದರು. ಹೀಗಾಗಿ, ಜಾಮೀನು ಸಲ್ಲದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ