ಅಗತ್ಯ ಬಿದ್ದರೆ ಮಾತ್ರ ಎಐ ನಿಯಂತ್ರಣ: ಸಚಿವ ರಾಜೀವ್‌ ಚಂದ್ರಶೇಖರ್‌ ಪ್ರತಿಪಾದನೆ


Team Udayavani, Jun 10, 2023, 8:00 AM IST

ಅಗತ್ಯ ಬಿದ್ದರೆ ಮಾತ್ರ ಎಐ ನಿಯಂತ್ರಣ: ಸಚಿವ ರಾಜೀವ್‌ ಚಂದ್ರಶೇಖರ್‌ ಪ್ರತಿಪಾದನೆ

ನವದೆಹಲಿ: ಡಿಜಿಟಲ್‌ ವ್ಯವಸ್ಥೆಯಲ್ಲಿ ಸಕ್ರಿಯರಾಗಿರುವ ವ್ಯಕ್ತಿಗಳ ಹಿತ ಕಾಪಾಡುವ ನಿಟ್ಟಿನಲ್ಲಿ ಕೃತಕ ಬುದ್ಧಿಮತ್ತೆಯನ್ನು (ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌- ಎಐ) ನಿಯಂತ್ರಣಗೊಳಿಸಲು ಸರ್ಕಾರ ಬದ್ಧವಾಗಿದೆ.

ಜತೆಗೆ ಅದರಿಂದ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ ಎಂಬ ಭಾವನೆ ವ್ಯಕ್ತವಾದರೆ ಪ್ರತಿಬಂಧಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಖಾತೆ ಸಹಾಯಕ ಸಚಿವ ರಾಜೀವ್‌ ಚಂದ್ರಶೇಖರ್‌ ಹೇಳಿದ್ದಾರೆ.

ನವದೆಹಲಿಯಲ್ಲಿ ಶುಕ್ರವಾರ ಒಂಭತ್ತು ವರ್ಷಗಳಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಡಿಜಿಟಲ್‌ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಳ ಬಗ್ಗೆ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿ ಅವರು ಮಾತನಾಡಿದರು. ಸದ್ಯದ ಸ್ಥಿತಿಯಲ್ಲಿ ಕೃತಕ ಬುದ್ಧಿಮತ್ತೆ ವ್ಯವಸ್ಥೆ ಉದ್ಯೋಗಗಳನ್ನು ಕಸಿಯುವ ಸ್ಥಿತಿಯಲ್ಲಿ ಇಲ್ಲ. ಯಾವುದೇ ರೀತಿಯ ತಂತ್ರಜ್ಞಾನದ ವಿರುದ್ಧ ಪ್ರತಿಬಂಧಕ ಕ್ರಮಗಳನ್ನು ಕೈಗೊಳ್ಳುವುದಿದ್ದರೂ, ಅದರಿಂದ ಉಂಟಾಗಬಹುದಾದ ಹಾನಿಗಳನ್ನು ಅಧ್ಯಯನ ನಡೆಸಿ ಅಥವಾ ಡಿಜಿಟಲ್‌ ವ್ಯವಸ್ಥೆಯಲ್ಲಿ ಸಕ್ರಿಯವಾಗಿರುವವರ ಹಿತಕ್ಕೆ ಧಕ್ಕೆಯಾದಲ್ಲಿ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಹಿಂಜರಿಯಲಾರದು ಎಂದು ರಾಜೀವ್‌ ಚಂದ್ರಶೇಖರ್‌ ಹೇಳಿದರು.

ಇದೇ ನಿಯಮಗಳು ವೆಬ್‌3 ಸೇರಿದಂತೆ ಇನ್ನಿತರ ಯಾವುದೇ ತಾಂತ್ರಿಕ ಅಂಶಗಳಿಗೆ ಅನ್ವಯವಾಗುತ್ತವೆ. ಎಂದರು.

ತಾಂತ್ರಿಕ ವ್ಯವಸ್ಥೆ ಬಲಪಡಿಸಲು ನೆರವು:
ಇದೇ ವೇಳೆ, ಓಪನ್‌ ಎಐ ಸಂಸ್ಥೆಯ ಸಿಇಒ ಸ್ಯಾಮ್‌ ಆಲ್ಟ್ಮನ್‌ ಜತೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಭೇಟಿಯ ಬಗ್ಗೆ ಟ್ವೀಟ್‌ ಮಾಡಿರುವ ಪ್ರಧಾನಿಯವರು “ದೇಶದ ತಾಂತ್ರಿಕ ಕ್ಷೇತ್ರವನ್ನು ಇನ್ನಷ್ಟು ವಿಸ್ತಾರಗೊಳಿಸಲು ಮತ್ತು ಬಲಪಡಿಸಲು ಕೃತಕ ಬುದ್ಧಿಮತ್ತೆ (ಎಐ)ನೆರವಾಗಲಿದೆ. ಈ ನಿಟ್ಟಿನಲ್ಲಿ ಸಹಕಾರಿಯಾಗಲಿರುವ ಎಲ್ಲ ರೀತಿಯ ಸಹಭಾಗಿತ್ವವನ್ನು ನಾವು ಸ್ವಾಗತಿಸುತ್ತೇವೆ’ ಎಂದು ಬರೆದುಕೊಂಡಿದ್ದಾರೆ. ಪ್ರಧಾನಿ ಜತೆಗಿನ ಭೇಟಿ ಬಗ್ಗೆ ಟ್ವೀಟ್‌ ಮಾಡಿರುವ ಸ್ಯಾಮ್‌ “ದೇಶದ ಅತ್ಯುತ್ತಮ ತಾಂತ್ರಿಕ ವ್ಯವಸ್ಥೆಯ ಬಗ್ಗೆ ಪ್ರಧಾನಿ ಮೋದಿಯವರ ಜತೆಗೆ ಅತ್ಯುತ್ತಮ ಮಾತುಕತೆ ನಡೆಸಿದ್ದೇನೆ. ಎಐನಿಂದ ದೇಶಕ್ಕೆ ಯಾವ ರೀತಿ ಅನುಕೂಲವಾಗಬಹುದು ಎಂಬ ವಿಚಾರ ವಿನಿಮಯ ನಡೆಸಲಾಗಿದೆ’ ಎಂದು ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

1-wsaadsadd

Bantwal; ಬಾಲ್ಯವಿವಾಹ ಮಾಡಲು ತಯಾರಿಯಲ್ಲಿದ್ದ ವೇಳೆ ಅಧಿಕಾರಿಗಳ ದಾಳಿ

1-fdwewq

Gujarat ; ಕುಸಿದು ಬಿದ್ದ ಹಳೆಯ ಸೇತುವೆ: ಕನಿಷ್ಠ 6 ಮಂದಿ ನೀರುಪಾಲು ಶಂಕೆ

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

1-asdasd

Jog Falls ಸಮೀಪದ ದೇವಿಗುಂಡಿಯಲ್ಲಿ ಇಬ್ಬರು ನೀರುಪಾಲು

1-asdsad

Kannada in UK ; ಲಂಡನ್ ನಲ್ಲಿ ಮೊಳಗಲಿರುವ ಕನ್ನಡ ಬಳಗದ ಡಿಂಡಿಮ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-fdwewq

Gujarat ; ಕುಸಿದು ಬಿದ್ದ ಹಳೆಯ ಸೇತುವೆ: ಕನಿಷ್ಠ 6 ಮಂದಿ ನೀರುಪಾಲು ಶಂಕೆ

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

Ra

Congress ಛತ್ತೀಸ್‌ಗಢ, ಮಧ್ಯಪ್ರದೇಶದಲ್ಲಿ ಗೆಲ್ಲುವುದು ಖಚಿತ, ರಾಜಸ್ಥಾನದಲ್ಲಿ…: ರಾಹುಲ್

Vande Bharat; ಭಾರತೀಯ ರೈಲ್ವೆಯ ಪರಿವರ್ತನೆಗಾಗಿ ನಮ್ಮ ಸರ್ಕಾರದ ಕೆಲಸ: ಪ್ರಧಾನಿ ಮೋದಿ

Vande Bharat; ಭಾರತೀಯ ರೈಲ್ವೆಯ ಪರಿವರ್ತನೆಗಾಗಿ ನಮ್ಮ ಸರ್ಕಾರದ ಕೆಲಸ: ಪ್ರಧಾನಿ ಮೋದಿ

Brij Bhushan Singh harassed wrestlers at every opportunity: Delhi Police to court

WrestlersCase ಅವಕಾಶ ಸಿಕ್ಕಾಗೆಲ್ಲಾ ಬ್ರಿಜ್ ಭೂಷಣ್ ಕಿರುಕುಳ:ಕೋರ್ಟ್ ನಲ್ಲಿ ದೆಹಲಿಪೊಲೀಸರು

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

1-wsaadsadd

Bantwal; ಬಾಲ್ಯವಿವಾಹ ಮಾಡಲು ತಯಾರಿಯಲ್ಲಿದ್ದ ವೇಳೆ ಅಧಿಕಾರಿಗಳ ದಾಳಿ

1-fdwewq

Gujarat ; ಕುಸಿದು ಬಿದ್ದ ಹಳೆಯ ಸೇತುವೆ: ಕನಿಷ್ಠ 6 ಮಂದಿ ನೀರುಪಾಲು ಶಂಕೆ

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

1-dasdsad

Bhatkal: ಸಚಿವ ಮಂಕಾಳ ವೈದ್ಯ ಅವರ ಕಾರ್ಯಾಲಯ ಆರಂಭ; ಜನಜಂಗುಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.