
ಆರ್ ಕೆ ನಗರ ಉಪಚುನಾವಣೆ:ಶಶಿಕಲಾ ಸಂಬಂಧಿ ದಿನಕರನ್ AIADMK ಅಭ್ಯರ್ಥಿ
Team Udayavani, Mar 15, 2017, 12:02 PM IST

ಚೆನ್ನೈ : ಮುಂದಿನ ತಿಂಗಳ ಎಪ್ರಿಲ್ 12ರಂದು ನಡೆಯಲಿರುವ ಆರ್ ಕೆ ನಗರ ಉಪಚುನಾವಣೆಯಲ್ಲಿ ಎಐಎಡಿಎಂಕೆ ಅಭ್ಯರ್ಥಿಯಾಗಿ, ವಿ ಕೆ ಶಶಿಕಲಾ ಅವರ ಸೋದರ ಸಂಬಂಧಿಯಾಗಿರುವ ಪಕ್ಷದ ಉಪ ಪ್ರಧಾನ ಕಾರ್ಯದರ್ಶಿ ಟಿ ಟಿ ಕೆ ದಿನಕರನ್ ಅವರ ಹೆಸರನ್ನು ಪ್ರಕಟಿಸಲಾಗಿದೆ.
ಕಳೆದ ಡಿಸೆಂಬರ್ನಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಶಾಸಕಿ ಜೆ ಜಯಲಲಿತಾ ಅವರ ನಿಧನದಿಂದಾಗಿ ತೆರವಾಗಿದ್ದ ಸ್ಥಾನಕ್ಕಾಗಿ ಆರ್ ಕೆ ನಗರ ಕ್ಷೇತ್ರಕ್ಕೆ ಇದೀಗ ಉಪ ಚುನಾವಣೆ ನಡೆಯಲಿದೆ.
ಪಕ್ಷದ ಹೇಳಿಕೆ ಪ್ರಕಾರ ದಿನಕರನ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡುವ ನಿರ್ಧಾರವನ್ನು ಪ್ರಧಾನ ಕಾರ್ಯದರ್ಶಿ ವಿ ಕೆ ಶಶಿಕಲಾ ನೇತೃತ್ವದ ಎಐಎಡಿಎಂಕೆ ಸಂಸದೀಯ ಮಂಡಳಿಯ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಭ್ರಷ್ಟಾಚಾರ ಕೇಸಿನಲ್ಲಿ ಸುಪ್ರೀಂ ಕೋರ್ಟಿನಿಂದ ಜೈಲು ಪಾಲಾಗಿರುವ ಶಶಿಕಲಾ ಪ್ರಕೃತ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಬಂಧೀಖಾನೆಯಲ್ಲಿ ಕಾರಾಗೃಹ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ.
ಶಶಿಕಲಾ ಅವರ ಸೋದರ ಸಂಬಂಧಿಯಾಗಿರುವ ದಿನಕರನ್ ಅವರು ಮಾಜಿ ಸಂಸದರು. ಜಯಲಲಿತಾ ನಿಧನದ ಬಳಿಕದಲ್ಲಿ ಎಐಎಡಿಎಂಕೆ ಎದುರಿಸುತ್ತಿರುವ ಮೊದಲ ಚುನಾವಣೆ ಇದಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa ಸ್ಮಾರ್ಟ್ ಸಿಟಿ ಯೋಜನೆಯ ತನಿಖೆ ನಡೆಸಬೇಕು: ಕಾಂಗ್ರೆಸ್ ಒತ್ತಾಯ

expose!;ಬಸ್ಸಿನಲ್ಲಿ ಮಹಿಳೆ ಎದುರು ಹಸ್ತಮೈಥುನ ಮಾಡಿದ ಕಾಮುಕನ ಬಂಧನ

ಪಣಜಿ: ಮುಂದಿನ ನಾಲ್ಕು ದಿನ ಗೋವಾದಲ್ಲಿ ಗುಡುಗು ಸಹಿತ ಮಳೆ… ಹವಾಮಾನ ಇಲಾಖೆ ಎಚ್ಚರಿಕೆ

Mumbai; ಮುಂಬೈ ವಿಮಾನ ನಿಲ್ದಾಣ-ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದು ಭೀತಿ ಹುಟ್ಟಿಸಿದ ಮಹಿಳೆ!

Uttarakhand: ಭಾರೀ ಭೂಕುಸಿತಕ್ಕೆ ರಸ್ತೆ ಸಂಪರ್ಕ ಕಡಿತ, 300 ಯಾತ್ರಾರ್ಥಿಗಳ ಪರದಾಟ
MUST WATCH
ಹೊಸ ಸೇರ್ಪಡೆ

Goa ಸ್ಮಾರ್ಟ್ ಸಿಟಿ ಯೋಜನೆಯ ತನಿಖೆ ನಡೆಸಬೇಕು: ಕಾಂಗ್ರೆಸ್ ಒತ್ತಾಯ

”ನನಗಿದು ಸ್ಪೆಷಲ್ ಸಿನಿಮಾ…”: ‘ಯದಾ ಯದಾ ಹೀ’ ಕುರಿತು ಹರಿಪ್ರಿಯಾ ಮಾತು

ದಾವಣಗೆರೆ: ಮಕ್ಕಳಿಬ್ಬರಿಗೆ ಟಿಕ್ಸೋಟೇಪ್ ಸುತ್ತಿ ಕೊಲೆಗೈದ ತಂದೆ!; ಬಂಧನ

ತವರಿನ ಲಾಭವಿಲ್ಲ, ಟಾಸ್ ಗೆದ್ದು ಫೀಲ್ಡಿಂಗ್ ಮಾಡಬೇಕಿಲ್ಲ…: ಇದು 2023ರ IPL ವಿಶೇಷತೆ

expose!;ಬಸ್ಸಿನಲ್ಲಿ ಮಹಿಳೆ ಎದುರು ಹಸ್ತಮೈಥುನ ಮಾಡಿದ ಕಾಮುಕನ ಬಂಧನ