ಚಿಗುರಿದ ಎಲೆ: ಅಂತೂ ಒಂದಾದ AIADMKಯ ಎರಡು ಬಣ


Team Udayavani, Aug 22, 2017, 6:00 AM IST

AIADMK-21-8.jpg

ಚೆನ್ನೈ: ಸರಿಯಾಗಿ ಆರು ತಿಂಗಳ ಬಳಿಕ ತಮಿಳುನಾಡಿನಲ್ಲಿ ‘ಅಮ್ಮಾ ಮಕ್ಕಳು’ ಒಂದಾಗಿದ್ದಾರೆ. ಕಳೆದ ಆರೇಳು ದಿನಗಳಿಂದ ಒಗ್ಗೂಡುವಿಕೆಗಾಗಿ ನಡೆಯುತ್ತಿದ್ದ ಸಂಧಾನ ಮಾತುಕತೆ ರವಿವಾರವೇ ಸಫ‌ಲವಾಗಿದ್ದು, ಸೋಮವಾರ ಸರಕಾರದ ಅಂಗವಾಗಿ ಒ. ಪನ್ನೀರ್‌ ಸೆಲ್ವಂ ಸೇರ್ಪಡೆಯಾಗಿದ್ದಾರೆ. ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ಮತ್ತು ಇವರ ಸಂಬಂಧಿ ದಿನಕರನ್‌ರನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ಕುರಿತಂತೆ ಖಚಿತ ಭರವಸೆ ಪಡೆದ ಬಳಿಕವೇ ಪನ್ನೀರ್‌ ಸೆಲ್ವಂ ಬಣ ಪಕ್ಷದಲ್ಲಿ ವಿಲೀನವಾಗಲು ಒಪ್ಪಿಗೆ ನೀಡಿತು.

ಸೋಮವಾರ ಬೆಳಗ್ಗೆಯಿಂದಲೇ ಎರಡೂ ಬಣಗಳಲ್ಲಿ ಭಾರೀ ಚಟುವಟಿಕೆ ಕಂಡು ಬಂದಿತು. ಮಧ್ಯಾಹ್ನ 12-1 ಗಂಟೆಯ ವೇಳೆಯಲ್ಲೇ ಘೋಷಣೆಯಾಗಲಿದೆ ಎಂದು ಹೇಳಲಾಗಿತ್ತಾದರೂ ಪನ್ನೀರ್‌ ಸೆಲ್ವಂ ಬಣ ಶಶಿಕಲಾರನ್ನು ಉಚ್ಚಾಟಿಸುವ ಕುರಿತಂತೆ ಸ್ಪಷ್ಟ ಅಭಿಪ್ರಾಯ ಬೇಕು ಎಂದು ಪಟ್ಟು ಹಿಡಿಯಿತು. ಈ ಸಂಬಂಧ ಸದ್ಯ ಪಕ್ಷದ ಸಾಮಾನ್ಯ ಸಭೆ ಕರೆದು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಭರವಸೆ ನೀಡಿದ ಅನಂತರ ವಿಲೀನಕ್ಕೆ ಒಪ್ಪಿಗೆ ನೀಡಲಾಯಿತು.


ಪನ್ನೀರ್‌ ಓಕೆ ಮಾಡಿದ ತತ್‌ಕ್ಷಣವೇ ಮುಖ್ಯಮಂತ್ರಿ ಪಳನಿಸ್ವಾಮಿ, ಆರು ತಿಂಗಳ ಅನಂತರ ಪ್ರಧಾನ ಕಚೇರಿಗೆ ಆಗಮಿಸಿದ ಪನ್ನೀರ್‌ ಸೆಲ್ವಂ ಅವರನ್ನು ಎದುರುಗೊಳ್ಳಲು ಹೋದರು. ಪಕ್ಷದ ಕಚೇರಿಗೆ ಬಂದ ಪನ್ನೀರ್‌ಸೆಲ್ವಂ ಅವರನ್ನು ಸ್ವಾಗತಿಸಿದ ಎಐಎಡಿಎಂಕೆ ನಾಯಕರು, ಬಳಿಕ ಜತೆಯಾಗಿಯೇ ಪತ್ರಿಕಾಗೋಷ್ಠಿ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪನ್ನೀರ್‌ ಸೆಲ್ವಂ ‘ನನ್ನ ಹೃದಯಕ್ಕೆ ಭಾರವಾಗಿದ್ದ ಅಡ್ಡಿ ಹೋಗಿದೆ. ನಾವು ಅಮ್ಮಾ ಮಕ್ಕಳಾಗಿದ್ದು, ಒಂದಾಗಿದ್ದೇವೆ. ಇನ್ನು ನಮ್ಮನ್ನು ಯಾವ ಶಕ್ತಿಯೂ ಬೇರ್ಪಡಿಸಲು ಸಾಧ್ಯವಿಲ್ಲ’ ಎಂದರು.

ರಾತ್ರಿ ನಡೆದ ಮಹತ್ವದ ಬೆಳವಣಿಗೆಯಲ್ಲಿ 18 ಶಾಸಕರು ಜಯಲಲಿತಾ ಸಮಾಧಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರು ಜೈಲಲ್ಲಿರುವ ಶಶಿಕಲಾ ನಟರಾಜನ್‌ ಪರ ಘೋಷಣೆಗಳನ್ನು ಕೂಗುತ್ತಿದ್ದು, ಮಂಗಳವಾರ ರಾಜ್ಯಪಾಲ ರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ.

ಅಮ್ಮಾ ಸಮಾಧಿಗೆ ನಮನ: ಜಂಟಿ ಪತ್ರಿಕಾಗೋಷ್ಠಿ ಮುಗಿಸಿದ ತರುವಾಯ ಪಳನಿಸ್ವಾಮಿ ಮತ್ತು ಪನ್ನೀರ್‌ಸೆಲ್ವಂ ಸೀದಾ ಜಯಲಲಿತಾ ಸಮಾಧಿಯತ್ತ ತೆರಳಿದರು. ಶುಕ್ರವಾರ ರಾತ್ರಿಯಿಂದಲೇ ಜಯಾ ಸಮಾಧಿಯನ್ನು ಎರಡೂ ಬಣಗಳ ಒಗ್ಗೂಡಿಕೆಗಾಗಿ ಸಿಂಗರಿಸಲಾಗಿತ್ತು. ಕಡೆಗೆ ಸೋಮವಾರ ಮಧ್ಯಾಹ್ನ ಅಲ್ಲಿಗೆ ತೆರಳಿದ ಇಬ್ಬರೂ ಜಯಾಗೆ ನಮಸ್ಕರಿಸಿದರು.


ಪನ್ನೀರ್‌ ಪ್ರಮಾಣ:
ಜಯಾ ಸಮಾಧಿಯಿಂದ ಎಲ್ಲ ನಾಯಕರು ನೇರ ರಾಜಭವನದತ್ತ ಹೋದರು. ಸರಿಯಾಗಿ 4.30ಕ್ಕೆ ಪನ್ನೀರ್‌ ಸೆಲ್ವಂ ಹಣಕಾಸು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಜತೆಗೆ ಒಪಿಎಸ್‌ ಬೆಂಬಲಿಗ ಕೆ. ಪಾಂಡಿರಾಜನ್‌ ಕೂಡ ತಮಿಳು ಭಾಷೆ ಮತ್ತು ಸಂಸ್ಕೃತಿ ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಪನ್ನೀರ್‌ ಸೆಲ್ವಂ ಸರಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲಿದ್ದು, ಹಣಕಾಸು, ಗ್ರಾಮ ಮತ್ತು ನಗರ ಪ್ರದೇಶಗಳ ವಸತಿ ಸಚಿವರಾಗಿಯೂ ಜವಾಬ್ದಾರಿ ನಿರ್ವಹಿಸಲಿದ್ದಾರೆ.

ಮೋದಿ ಸ್ವಾಗತ: ಸೋಮವಾರ ಬೆಳಗ್ಗೆಯಿಂದಲೇ ದಿಲ್ಲಿಯಿಂದಲೇ ತಮಿಳುನಾಡು ಬೆಳವಣಿಗೆಗಳನ್ನು ಗಮನಿಸುತ್ತಿದ್ದ ಬಿಜೆಪಿ ನಾಯಕರು ಸಂಜೆ ವೇಳೆಗೆ ನಿಟ್ಟುಸಿರು ಬಿಟ್ಟರು. ವಿಶೇಷವೆಂದರೆ, ಎರಡು ಬಣಗಳು ವಿಲೀನ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ ಮುಗಿಯುತ್ತಲೇ ಮೊದಲಿಗೆ ಶುಭ ಕೋರಿದವರು ಪ್ರಧಾನಿ ನರೇಂದ್ರ ಮೋದಿ. ಉಪಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ ಪನ್ನೀರ್‌ಸೆಲ್ವಂ ಅವರಿಗೆ ಸ್ವಾಗತವೆಂದ ಮೋದಿ ಅವರು, ಪಳನಿಸ್ವಾಮಿ ಸರಕಾರಕ್ಕೆ ಎಲ್ಲ ರೀತಿಯ ನೆರವು ನೀಡುವುದಾಗಿ ಟ್ವೀಟಿಸಿದರು. ಕೆಲವು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಪಳನಿಸ್ವಾಮಿ ಮತ್ತು ಪನ್ನೀರ್‌ಸೆಲ್ವಂ ಅವರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು. ಇದಾದ ಬಳಿಕವೇ ವಿಲೀನಕ್ಕೆ ವೇಗ ಸಿಕ್ಕಿತು ಎಂದು ಹೇಳಲಾಗುತ್ತಿದೆ.


ಆರ್‌ಎಸ್‌ಎಸ್‌ ಮಧ್ಯಸ್ಥಿಕೆ?:
ಮೂಲಗಳ ಪ್ರಕಾರ, ಸೋಮವಾರ ಮಧ್ಯಾಹ್ನವೂ ಎರಡೂ ಬಣಗಳ ಮಾತುಕತೆ ಮುರಿದುಬಿದ್ದಿತ್ತು ಎಂದೇ ಹೇಳಲಾಗುತ್ತಿದೆ. ಶಶಿಕಲಾ ಅವರನ್ನು ಪಕ್ಷದಿಂದ ಉಚ್ಚಾಟಿಸಿದ ಬಳಿಕವಷ್ಟೇ ವಿಲೀನ ಎಂದು ಒಪಿಎಸ್‌ ಬಣ ಪಟ್ಟುಹಿಡಿಯಿತು ಎಂದು ಹೇಳಲಾಗಿದೆ. ಆದರೆ, ಆರ್‌ಎಸ್‌ಎಸ್‌ ಸಿದ್ಧಾಂತ ಪ್ರತಿಪಾದಿಸುವ ಎಸ್‌. ಗುರುಮೂರ್ತಿ ಅವರು ಸಂಧಾನ ನಡೆಸಿ ಬಿಕ್ಕಟ್ಟು ಬಗೆಹರಿಸಿದರು ಎಂದು ಹೇಳಲಾಗಿದೆ.

ಶಶಿಕಲಾ ಹಾದಿ ಅಂತ್ಯ?
ಸದ್ಯದ ಬೆಳವಣಿಗೆಗಳು ಶಶಿಕಲಾ ಅವರ ಹಾದಿಯನ್ನು ಅಂತ್ಯಗೊಳಿಸಿವೆ ಎಂದೇ ಹೇಳಲಾಗುತ್ತಿದೆ. ಸದ್ಯ ಜೈಲಿನಲ್ಲಿರುವ ಶಶಿಕಲಾ ಬಿಡುಗಡೆ ಹೊಂದುವುದು ಇನ್ನೂ ತಡ. ಅಲ್ಲದೆ ದಿನಕರನ್‌ ಚುನಾವಣಾ ಆಯೋಗಕ್ಕೆ ಲಂಚ ನೀಡಲು ಹೋಗಿ ಆರೋಪಿ ಸ್ಥಾನದಲ್ಲಿ ನಿಂತಿದ್ದಾರೆ. ಅಲ್ಲದೆ ಶಶಿಕಲಾ ಅವರ ವಿರೋಧಿ ಎಂದೇ ಗುರುತಿಸಲಾಗಿದ್ದ ಪನ್ನೀರ್‌ ಸೆಲ್ವಂ ವಾಪಸಾಗಿರುವುದರಿಂದ ಎಐಎಡಿಎಂಕೆ ಬಾಗಿಲು ಇನ್ನು ತೆರೆಯಲ್ಲ ಎಂದೇ ವಿಶ್ಲೇಷಿಸಲಾಗುತ್ತಿದೆ. ಒಂದು ವೇಳೆ ಶಿಕ್ಷೆ ಮುಗಿಸಿ ಜೈಲಿನಿಂದ ಹೊರಬಂದರೂ ಮತ್ತೆ ರಾಜಕೀಯದಲ್ಲಿ ಸ್ಥಾನ ಸಿಗುವುದೂ ಕಷ್ಟ ಎಂಬ ಮಾತುಗಳು ಕೇಳಿಬರುತ್ತಿವೆ.

ಎನ್‌ಡಿಎಗೆ ಸೇರ್ಪಡೆ?
ಎಐಎಡಿಎಂಕೆ ಕೂಡ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸೇರ್ಪಡೆ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ನಿಗದಿಯಾದ ಪ್ರಕಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ತಮಿಳುನಾಡಿಗೆ ಸೋಮವಾರವೇ ಆಗಮಿಸಬೇಕಾಗಿತ್ತು. ಆದರೆ ಪ್ರವಾಸ ರದ್ದು ಮಾಡಿರುವ ಅವರು ದಿಲ್ಲಿಯಲ್ಲೇ ಉಳಿದು ಬಿಜೆಪಿ ನಾಯಕರ ಜತೆ ಮಾತುಕತೆ ನಡೆಸುತ್ತಿದ್ದಾರೆ. ಸದ್ಯದಲ್ಲೇ ಕೇಂದ್ರದ ಸಂಪುಟ ಪುನಾರಚನೆಯಾಗಲಿದ್ದು, ಇದರಲ್ಲಿ ಎಐಎಡಿಎಂಕೆಯಿಂದ ಮೂವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೆ ಇತ್ತೀಚೆಗಷ್ಟೇ ಎನ್‌ಡಿಎಗೆ ವಾಪಸ್‌ ಆಗಿರುವ ಜೆಡಿಯುನಿಂದಲೂ ಇಬ್ಬರು ಸಂಪುಟ ಸೇರಬಹುದು ಎನ್ನಲಾಗಿದೆ. ಎಐಎಡಿಎಂಕೆಯಿಂದ ಒಬ್ಬರಿಗೆ ಕ್ಯಾಬಿನೆಟ್‌ ಹಾಗೂ ಇಬ್ಬರಿಗೆ ಸಹಾಯಕ ಸಚಿವರ ಸ್ಥಾನ ನೀಡಬಹುದು ಎನ್ನಲಾಗಿದೆ. ಅಂತೆಯೇ ಜೆಡಿಯುನಲ್ಲೂ ಓರ್ವರಿಗೆ ಕ್ಯಾಬಿನೆಟ್‌ ಹಾಗೂ ಓರ್ವರಿಗೆ ರಾಜ್ಯ ಖಾತೆ ಸಿಗುವ ಸಂಭವವಿದೆ.

ಶೀಘ್ರ ಚುನಾವಣಾ ಆಯೋಗಕ್ಕೆ ಮನವಿ
ಪಕ್ಷದಲ್ಲಿ ಎರಡು ಬಣಗಳಾಗಿದ್ದರಿಂದ ಎಐಎಡಿಎಂಕೆಯ ಚಿಹ್ನೆಯಾದ ಎರಡೆಲೆ ಯಾರಿಗೂ ಸಿಕ್ಕಿಲ್ಲ. ಇದೀಗ ವಿಲೀನವಾಗಿದ್ದರಿಂದ ಈ ಚಿಹ್ನೆ ಪಡೆದುಕೊಳ್ಳುವುದು ಸುಲಭವಾಗಲಿದೆ. ಹೀಗಾಗಿ ಸದ್ಯದಲ್ಲೇ ದಿಲ್ಲಿಗೆ ತೆರಳಲಿರುವ ನಾಯಕರು ಕೇಂದ್ರ ಚುನಾವಣಾ ಆಯೋಗದ ಮುಂದೆ ಚಿಹ್ನೆಗಾಗಿ ಮನವಿ ಸಲ್ಲಿಸಲಿದ್ದಾರೆ.

ಒಂದಾಗಲು ಡೀಲ್‌
ಎರಡೂ ಬಣ ಒಂದಾಗಲು ಕೆಲವೊಂದು ಒಪ್ಪಂದವನ್ನೂ ಮಾಡಿಕೊಂಡಿವೆ. ಇದರ ಪ್ರಕಾರ ಪನ್ನೀರ್‌ ಸೆಲ್ವಂಗೆ ಉಪಮುಖ್ಯಮಂತ್ರಿ ಸ್ಥಾನ ಹಾಗೂ ಪಕ್ಷದ ಮುಖ್ಯ ಸಂಚಾಲಕ ಹುದ್ದೆ. ಮುಖ್ಯಮಂತ್ರಿ ಪಳನಿಸ್ವಾಮಿಗೆ ಉಪ ಸಂಚಾಲಕ ಹುದ್ದೆ ನೀಡುವ ಮೂಲಕ ಈ ಇಬ್ಬರು ಪಕ್ಷದ ಆಗುಹೋಗುಗಳನ್ನು ನೋಡಿಕೊಳ್ಳುವುದು. ಒಟ್ಟು 13 ಮಂದಿಯ ಈ ಸಮನ್ವಯ ಸಮಿತಿಯಲ್ಲಿ ಇಪಿಎಸ್‌ ಬಣದಿಂದ 10 ಹಾಗೂ ಒಪಿಎಸ್‌ ಬಣದಿಂದ ಮೂವರು ಇರಲಿದ್ದಾರೆ. ಶಶಿಕಲಾ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ಸಂಬಂಧ ಸದ್ಯದಲ್ಲೇ ಸಾಮಾನ್ಯ ಸಭೆ ಕರೆಯುವುದು. ದಿನಕರನ್‌ ಅವರನ್ನು ಸಂಪೂರ್ಣವಾಗಿ ಪಕ್ಷದಿಂದ ಹೊರಗೆ ಕಳುಹಿಸುವುದು.

ಟಾಪ್ ನ್ಯೂಸ್

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

Amit Shah

Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.