ಎಐಎಡಿಎಂಕೆ ಚಿಹ್ನೆಗಾಗಿ ಲಂಚ: ದಿನಕರನ್‌ ವಿರುದ್ಧ FIR


Team Udayavani, Apr 17, 2017, 11:27 AM IST

TTV Dinakaran-700.jpg

ಹೊಸದಿಲ್ಲಿ : ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಟಿ ಟಿ ವಿ ದಿನಕರನ್‌ ವಿರುದ್ಧ ದಿಲ್ಲಿ ಪೊಲೀಸ್‌ ಕ್ರೈಮ್‌ ಬ್ರ್ಯಾಂಚ್‌ ಲಂಚದ ಕೇಸೊಂದನ್ನು ದಾಖಲಿಸಿಕೊಂಡಿದೆ.

ಎಐಎಡಿಎಂಕೆ ಪಕ್ಷದ ಎರಡೆಲೆಗಳ ಚುನಾವಣಾ ಚಿಹ್ನೆಗಾಗಿ ನಡೆಯತ್ತಿರುವ ಸಮರದ ಮೇಲೆ ಪ್ರಭಾವ ಬೀರುವುದಕ್ಕಾಗಿ ಬಳಸಲು ಉದ್ದೇಶಿಸಲಾಗಿದ್ದ 1.5 ಕೋಟಿ ನಗದು ವಶ ಪಡಿಸಿಕೊಳ್ಳಲಾಗಿರುವುದನ್ನು ಅನುಸರಿಸಿ ದಿಲ್ಲಿ ಪೊಲೀಸ್‌ ಕ್ರೈಮ್‌ ಬ್ರ್ಯಾಂಚ್‌ ಎಐಎಡಿಎಂಕೆ ನಾಯಕ ಟಿಟಿವಿ ದಿನಕರನ್‌ ಅವರನ್ನು ಎಫ್ಐಆರ್‌ನಲ್ಲಿ ಹೆಸರಿಸಿರುವುದಾಗಿ ಎಎನ್‌ಐ ಸುದ್ದಿ ಮೂಲಗಳು ತಿಳಿಸಿವೆ. 

ದಿಲ್ಲಿ ಪೊಲೀಸರು ಇಂದು ಬೆಳಗ್ಗೆ ಮಧ್ಯ ದಿಲ್ಲಿಯಲ್ಲಿನ ಹೊಟೇಲ್‌ ಒಂದರಿಂದ ಎಸ್‌ ಚಂದ್ರಶೇಖರ್‌ ಎಂಬಾತನನ್ನು ಬಂಧಿಸಿ ಆತನ ಬಳಿ ಇದ್ದ 1.5 ಕೋಟಿ ರೂ. ನಗದನ್ನು ಹಾಗೂ ಬಿಎಂಡಬ್ಲ್ಯು  ಮತ್ತು ಮರ್ಸಿಡಿಸ್‌ ಕಾರನ್ನು ವಶಪಡಿಸಿಕೊಂಡಿದ್ದರು. 

ಎಐಎಡಿಎಂಕೆ ಪಕ್ಷದ ಎರಡೆಲೆಯ ಚುನಾವಣಾ ಚಿಹ್ನೆಗಾಗಿ ಓ ಪನ್ನೀರಸೆಲ್ವಂ ಮತ್ತು ತಮಿಳು ನಾಡಿನ ಆಳುವ ಪಕ್ಷವಾಗಿರುವ ವಿ ಕೆ ಶಶಿಕಲಾ ಬಣದ ನಡುವೆ ತೀವ್ರವಾದ ಸಮರ ಏರ್ಪಟ್ಟಿರುವ ನಡುವೆಯೇ ಈ ಬಂಧನ ಹಾಗೂ 1.5 ಕೋಟಿ ರೂ. ವಶೀಕರಣ ನಡೆದಿರುವುದು ಗಮನಾರ್ಹವಾಗಿದೆ. 

 ಆರ್‌ ಕೆ ನಗರ ಉಪಚುನಾವಣೆಗೆ ಮುನ್ನವೇ ಕಳೆದ ತಿಂಗಳಲ್ಲಿ ಚುನಾವಣಾ ಆಯೋಗವು ಸ್ತಂಭನಗೊಳಿಸಿದ್ದ ಎಐಎಡಿಎಂಕೆ ಪಕ್ಷದ ಎರಡೆಲೆಗಳ ಚುನಾವಣಾ ಚಿಹ್ನೆ ಶಶಿಕಲಾ ಬಣಕ್ಕೆ ಸಲ್ಲುವಂತೆ ಮಾಡಲು 60 ಕೋಟಿ ರೂ.ಗಳ ಲಂಚವನ್ನು ನೀಡಬೇಕಾಗಿದೆ ಎಂದು ದಿನಕರನ್‌ ತನ್ನಲ್ಲಿ ಹೇಳಿರುವುದಾಗಿ ಮಧ್ಯವರ್ತಿ ಎಸ್‌ ಚಂದ್ರಶೇಖರ್‌ ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 

ಶಶಿಕಲಾ ಅವರ ಸೋದರ ಸಂಬಂಧಿಯಾಗಿರುವ ದಿನಕರನ್‌ ಅವರು ಆರ್‌ ಕೆ ನಗರ ಉಪ ಚುನಾವಣೆಯಲ್ಲಿ  ಶಶಿಕಲಾ ಬಣದ ಎಐಎಡಿಎಂಕೆ ಪಕ್ಷದ ಅಭ್ಯರ್ಥಿಯಾಗಿದ್ದರು. 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.