ಪ್ರಾಣ ಪ್ರತಿಷ್ಠೆಯ ದಿನ OPD ಸೇವೆ ಇರಲಿದೆ… ವಿರೋಧದ ಬಳಿಕ ರಜೆ ಆದೇಶ ಹಿಂಪಡೆದ AIIMS


Team Udayavani, Jan 21, 2024, 11:46 AM IST

ಪ್ರಾಣ ಪ್ರತಿಷ್ಠೆಯ ದಿನ OPD ಸೇವೆ ಇರಲಿದೆ: ವಿರೋಧದ ಬಳಿಕ ರಜೆ ಆದೇಶ ಹಿಂಪಡೆದ AIIMS

ನವದೆಹಲಿ: ಅಯೋಧ್ಯೆ ರಾಮಮಂದಿರದಲ್ಲಿ ನಾಳೆ (ಸೋಮವಾರ) ನಡೆಯುವ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಮಧ್ಯಾಹ್ನ 2:30 ರವರೆಗೆ ಆಸ್ಪತ್ರೆಯಲ್ಲಿನ ಓಪಿಡಿ ಸೇವೆಗಳನ್ನು ಮುಚ್ಚುವ ನಿರ್ಧಾರದಲ್ಲಿದ್ದ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ತನ್ನ ನಿರ್ಧಾರವನ್ನು ಹಿಂಪಡೆದಿದ್ದು ಓಪಿಡಿ ಸೇವೆಗೆಳು ನಿರಂತರವಾಗಿ ನಡೆಯಲಿದೆ ಎಂದು ಹೇಳಿದೆ.

ದೆಹಲಿ ಏಮ್ಸ್ ಆಡಳಿತಾಧಿಕಾರಿ ರಾಜೇಶ್ ಕುಮಾರ್ ಸುತ್ತೋಲೆ ಹೊರಡಿಸಿದ್ದು, ಸಂಸ್ಥೆಯ ಹೊರರೋಗಿ ವಿಭಾಗವು ಜನವರಿ 22 ರಂದು ನಿಯಮಿತ ಸಮಯದ ಪ್ರಕಾರ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದ್ದಾರೆ. ಈ ದಿನದಂದು ಅಪಾಯಿಂಟ್‌ಮೆಂಟ್ ತೆಗೆದುಕೊಳ್ಳುವ ರೋಗಿಗಳು ಒಪಿಡಿಯಲ್ಲಿ ಸೇವೆಯನ್ನು ಪಡೆಯುತ್ತಾರೆ. ಎಲ್ಲಾ ಕ್ಲಿನಿಕಲ್ ಕೇರ್ ಸೇವೆಗಳು ಲಭ್ಯವಿರುತ್ತವೆ. ಈ ಬಗ್ಗೆ ಎಲ್ಲಾ ಇಲಾಖೆಗಳ ಎಚ್‌ಒಡಿಗಳು ಮತ್ತು ಕೇಂದ್ರಗಳ ಮುಖ್ಯಸ್ಥರು ತಮ್ಮ ಸಿಬ್ಬಂದಿಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭವನ್ನು ಆಚರಿಸಲು ಶನಿವಾರದಂದು ದೆಹಲಿ ಏಮ್ಸ್ ಆಸ್ಪತ್ರೆಯನ್ನು ಮಧ್ಯಾಹ್ನ 2:30 ರವರೆಗೆ ರಜೆ ಘೋಷಿಸಿತ್ತು. ಆದರೆ ಆಡಳಿತ ಮಂಡಳಿಯ ನಿರ್ಧಾರದ ವಿರುದ್ಧ ಸಾಕಷ್ಟು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ.

ಪ್ರತಿ ದಿನದಂತೆ ಸೋಮವಾರವೂ ತುರ್ತು ಸೇವೆಗಳು ಮುಂದುವರಿಯಲಿವೆ ಎಂದು ಏಮ್ಸ್ ತನ್ನ ಆದೇಶದಲ್ಲಿ ತಿಳಿಸಿದೆ. ಇದರಿಂದ ತುರ್ತು ರೋಗಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ. ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ ಕೂಡ ಇದೇ ಆದೇಶದಲ್ಲಿ ಜನವರಿ 22 ರಂದು ಸಂಸ್ಥೆಯಲ್ಲಿ ಒಪಿಡಿ ನೋಂದಣಿ ಕೌಂಟರ್‌ಗಳು ಮಧ್ಯಾಹ್ನ 1:30 ರ ನಂತರ ತೆರೆಯುತ್ತದೆ ಎಂದು ಹೇಳಿದೆ. ಸದ್ಯ ಈ ಸಂಬಂಧ ಆರ್‌ಎಂಎಲ್‌ನಿಂದ ಯಾವುದೇ ಹೊಸ ಆದೇಶ ಬಂದಿಲ್ಲ.

ಇದನ್ನೂ ಓದಿ: ಮದುವೆಯಾದ 1 ವರ್ಷಕ್ಕೆ ಪತ್ನಿಯನ್ನು ಕೊಂದು ಅಪಘಾತ ಎಂದು ಬಿಂಬಿಸಿದ ಗೋವಾದ ಹೋಟೆಲ್ ಮ್ಯಾನೇಜರ್

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.