ಹಿಂಸಾಚಾರದ ಎಫೆಕ್ಟ್: ಹೋರಾಟ ಇಬ್ಭಾಗ-ಪ್ರತಿಭಟನೆಯಿಂದ ಹಿಂದೆ ಸರಿದ 2 ಸಂಘಟನೆ
ನಾವು ಪ್ರತಿಭಟನೆಯನ್ನು ಮುಂದುವರಿಸಲು ಇಚ್ಚಿಸುವುದಿಲ್ಲ ಎಂದು ಎರಡು ಸಂಘಟನೆ ತಿಳಿಸಿದೆ.
Team Udayavani, Jan 27, 2021, 5:51 PM IST
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಜನವರಿ 26ರಂದು ರೈತರು ನಡೆಸಿದ ಟ್ರ್ಯಾಕ್ಟರ್ ರಾಲಿ ಹಿಂಸಾಚಾರಕ್ಕೆ ತಿರುಗಿ, ಕೆಂಪುಕೋಟೆಗೆ ನುಗ್ಗಿ ಸಿಖ್ ಧ್ವಜ ಹಾರಿಸಲಾಗಿತ್ತು. ಏತನ್ಮಧ್ಯೆ ಟೀಕೆ, ಟಿಪ್ಪಣಿ ನಡುವೆಯೇ ಕೇಂದ್ರದ ಮೂರು ಕೃಷಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರಾಷ್ಟ್ರೀಯ ಕಿಸಾನ್ ಮಜ್ದೂರ್ ಸಂಘ ಮತ್ತು ಭಾರತೀಯ ಕಿಸಾನ್ ಯೂನಿಯನ್ ಪ್ರತಿಭಟನೆಯಿಂದ ಹಿಂದೆ ಸರಿಯುವುದಾಗಿ ಬುಧವಾರ (ಜನವರಿ 27) ಘೋಷಿಸಿದೆ.
ಇದನ್ನೂ ಓದಿ:ರೈತರ ಹೋರಾಟಕ್ಕೆ ಕಾಂಗ್ರೇಸ್ ಕುಮ್ಮಕ್ಕು ನೀಡುತ್ತಿದೆ : ಶೆಟ್ಟರ್ ಆರೋಪ
ಗಣರಾಜ್ಯೋತ್ಸದ ದಿನ ಟ್ರ್ಯಾಕ್ಟರ್ ರಾಲಿ ವೇಳೆ ನಡೆದ ಹಿಂಸಾಚಾರವನ್ನು ಎರಡೂ ಸಂಘಟನೆಗಳು ಖಂಡಿಸಿದ್ದು, ಈ ರೀತಿಯಲ್ಲಿ ನಾವು ಪ್ರತಿಭಟನೆಯನ್ನು ಮುಂದುವರಿಸಲು ಇಚ್ಚಿಸುವುದಿಲ್ಲ ಎಂದು ಎರಡು ಸಂಘಟನೆ ತಿಳಿಸಿದೆ.
“ನಿನ್ನೆ ನಡೆದ ಘಟನೆಯಿಂದ ತುಂಬಾ ನೋವಾಗಿದೆ. ಇದರೊಂದಿಗೆ ನಮ್ಮ 58 ದಿನಗಳ ಹೋರಾಟ ಕೂಡಾ ಅಂತ್ಯ ಕಾಣಲಿದೆ” ಎಂದು ಭಾರತೀಯ ಕಿಸಾನ್ ಯೂನಿಯನ್ ಅಧ್ಯಕ್ಷ ಠಾಕೂರ್ ಭಾನು ಪ್ರತಾಪ್ ಸಿಂಗ್ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.
“ನಾವು ಬೇರೆ ಯಾರದ್ದೋ ನಿರ್ದೇಶನದ ಮೇರೆಗೆ ಪ್ರತಿಭಟನೆಯನ್ನು ಮುಂದುವರಿಸಲು ಇಷ್ಟ ಪಡುವುದಿಲ್ಲ. ನಾವು ತಕ್ಷಣದಿಂದಲೇ ನಮ್ಮ ಪ್ರತಿಭಟನೆಯನ್ನು ವಾಪಸ್ ಪಡೆಯುತ್ತಿದ್ದೇವೆ. ನಮಗೆ ಎಂಎಸ್ ಪಿ ಭರವಸೆ ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ. ಆದರೆ ಈ ಸಂಘಟನೆಗಳ ಜತೆ ನಮ್ಮ ಹೋರಾಟ ಮುಂದುವರಿಯಲ್ಲ. ನಾವು ಇಲ್ಲಿಗೆ ಹೋರಾಡಲು ಬಂದಿರುವುದು ಹುತಾತ್ಮರಾಗಲೋ ಅಥವಾ ಹೊಡೆತ ತಿನ್ನಲು ಅಲ್ಲ ಎಂದು ಆಲ್ ಇಂಡಿಯ ಕಿಸಾನ್ ಸಂಘರ್ಷ ಕೋ ಆರ್ಡಿನೇಷನ್ ಸಮಿತಿಯ ವಿಎಂ ಸಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದಿರಾಗಾಂಧಿ ತುರ್ತುಪರಿಸ್ಥಿತಿ ಹೇರಿಕೆ ತಪ್ಪುನಿರ್ಧಾರ; ಆದರೆ RSS ಇಂದು.. :ರಾಹುಲ್ ಗಾಂಧಿ
ರಸಗೊಬ್ಬರ ಬೆಲೆಯೇರಿಕೆ ಇಲ್ಲ : ರೈತರ ಹಿತ ಕಾಯುವ ನಿರ್ಧಾರಕ್ಕೆ ಬದ್ಧ ; IFFCO
ತನಿಖಾ ಸಂಸ್ಥೆಗಳಲ್ಲಿ ಸಿಸಿಟಿವಿಗೆ ಮೀನ ಮೇಷ: ಸುಪ್ರೀಂ ಗರಂ
ಗುಜರಾತ್ ನಲ್ಲಿ ಕಾಂಗ್ರೆಸ್ ಹಿನ್ನಡೆ : ಅಮಿತ್ ಚಾವ್ ಡಾ ರಾಜೀನಾಮೆ
ಮೋದಿಗೆ ಬಹುಪರಾಕ್ : ಜಮ್ಮುವಿನಲ್ಲಿ ಆಜಾದ್ ವಿರುದ್ಧ ಆಕ್ರೋಶ ..!
MUST WATCH
ಹೊಸ ಸೇರ್ಪಡೆ
ಇಂದಿರಾಗಾಂಧಿ ತುರ್ತುಪರಿಸ್ಥಿತಿ ಹೇರಿಕೆ ತಪ್ಪುನಿರ್ಧಾರ; ಆದರೆ RSS ಇಂದು.. :ರಾಹುಲ್ ಗಾಂಧಿ
ನಿತ್ಯಭವಿಷ್ಯ: ಈ ರಾಶಿಯವರು ಇಂದು ವಾಹನ ಸಂಚಾರದಲ್ಲಿ ಅತೀ ಜಾಗ್ರತೆ ವಹಿಸಿ !
ಕಾಂಗ್ರೆಸ್ನಲ್ಲಿ ತಳಮಳ : ಸಿದ್ದರಾಮಯ್ಯ ಕೋಪ ತಣಿಸಲು ಹೈಕಮಾಂಡ್ ಪ್ರಯತ್ನ
ನಾಳೆಯಿಂದ ಬಜೆಟ್ ಅಧಿವೇಶನ : ಸಿ.ಡಿ. ಬಾಂಬ್, ಮೀಸಲಾತಿ ಸದ್ದಿನ ನಿರೀಕ್ಷೆ
ವ್ಯಕ್ತಿ ನಿರ್ಮಾಣವೇ ಸಂಘದ ಪರಮಗುರಿ