ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ
Team Udayavani, Feb 3, 2022, 6:21 PM IST
ನವದೆಹಲಿ: ದೆಹಲಿ-ಮೀರತ್ ಇ-ವೇನಲ್ಲಿ ಛಜರ್ಸಿ ಟೋಲ್ ಬಳಿ ತನ್ನ ವಾಹನದ ಮೇಲೆ ಗುಂಡು ಹಾರಿಸಲಾಗಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಹೇಳಿದ್ದಾರೆ.
ದೆಹಲಿಗೆ ತೆರಳುತ್ತಿದ್ದಾಗ ಅವರ ವಾಹನದ ಮೇಲೆ ಮೂರರಿಂದ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಅವರು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.
ಮೀರತ್ನ ಕಿಥೌರ್ನಲ್ಲಿ ಚುನಾವಣಾ ಸಂಬಂಧಿತ ಕಾರ್ಯಕ್ರಮದ ನಂತರ ದೆಹಲಿಗೆ ತೆರಳುತ್ತಿದ್ದಾಗ ಛಜರ್ಸಿ ಟೋಲ್ ಪ್ಲಾಜಾ ಬಳಿ ಅವರ ವಾಹನದ ಮೇಲೆ ಗುಂಡುಗಳನ್ನು ಹಾರಿಸಲಾಯಿತು. ಒಟ್ಟು ಮೂರು ಜನರಿದ್ದು, ಅವರಲ್ಲಿ ಇಬ್ಬರು ಗುಂಡು ಹಾರಿಸಿದ್ದಾರೆ ಎಂದು ಓವೈಸಿ ಹೇಳಿದ್ದಾರೆ. ವಾಹನದ ಟೈರ್ಗಳು ಪಂಕ್ಚರ್ ಆಗಿರುವುದು ಫೋಟೋಗಳಲ್ಲಿ ಕಂಡು ಬಂದಿದೆ.
ಘಟನೆ ಬಳಿಕ ಮತ್ತೊಂದು ವಾಹನದಲ್ಲಿ ದೆಹಲಿಗೆ ತೆರಳಿರುವುದಾಗಿ ಓವೈಸಿ ಟ್ವೀಟ್ ಮಾಡಿದ್ದಾರೆ .
ಘಟನೆ ನಡೆದ ಬಳಿಕ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ