ಗೋಡೆಗೆ ಗುದ್ದಿಯೂ ಹಾರಿದ ವಿಮಾನ!
Team Udayavani, Oct 13, 2018, 9:59 AM IST
ತಿರುಚಿರಾಪಳ್ಳಿ: ತಿರುಚಿರಾಪಳ್ಳಿಯಿಂದ ದುಬೈಗೆ ಹೊರಟಿದ್ದ ವಿಮಾನ, ತಿರುಚಿರಾಪಳ್ಳಿಯಿಂದ ಟೇಕ್ ಆಫ್ ಆಗುತ್ತಿದ್ದಂತೆ ನಿಲ್ದಾಣದ ಹೊರ ಗೋಡೆಗೆ ಢಿಕ್ಕಿ ಹೊಡೆದಿದೆ. ಅಚ್ಚರಿಯ ಸಂಗತಿಯೆಂದರೆ, ಗೋಡೆಗೆ ಢಿಕ್ಕಿ ಹೊಡೆದು ವಿಮಾನ ಭಾರೀ ಪ್ರಮಾಣದಲ್ಲಿ ಹಾನಿಯಾದರೂ ಅದು 4 ಗಂಟೆಗಳ ಕಾಲ ಎಂದಿನಂತೆ ಹಾರಾಟ ನಡೆಸಿದೆ. ವಿಮಾನದೊಳಗಿದ್ದ ಎಲ್ಲ 136 ಪ್ರಯಾಣಿಕರು ಹಾಗೂ ಸಿಬಂದಿಗೆ ಯಾವುದೇ ತೊಂದರೆಯಾಗಿಲ್ಲ. ಅನಂತರ ಮುಂಬೈನಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.
ಏರ್ಇಂಡಿಯಾ ಎಕ್ಸ್ಪ್ರೆಸ್ ಬೋಯಿಂಗ್ 737-800 ವಿಮಾನ ಇದಾಗಿದ್ದು, ಢಿಕ್ಕಿ ಹೊಡೆದ ಪರಿಣಾಮ ತಿರುಚ್ಚಿ ವಿಮಾನ ನಿಲ್ದಾಣದ ಹೊರ ಪ್ರಾಕಾರ ಭಾಗಶಃ ಕುಸಿದಿದೆ. ಇದನ್ನು ಕೆಂಪು ಕಲ್ಲಿನಿಂದ ನಿರ್ಮಿಸಲಾಗಿತ್ತು. ವಿಮಾನ ಭಾರೀ ಪ್ರಮಾಣದಲ್ಲಿ ನುಜ್ಜುಗು ಜ್ಜಾಗಿದೆ. ವಿಮಾನದ ಹೊರಭಾಗಕ್ಕೆ ಹಾನಿಯಾ ಗಿದ್ದರೂ, ವಿಮಾನದ ಎಲ್ಲ ಸಿಸ್ಟಂಗಳು ಸಹಜ ವಾಗಿ ಕೆಲಸ ಮಾಡುತ್ತಿದ್ದವು. ಹೀಗಾಗಿ ವಿಮಾನ ಹಾರಾಟ ನಡೆಸಲು ನಿರ್ಧರಿಸಲಾಯಿತು.
ಗೋಡೆಗೆ ಬಡಿದ ವಿಚಾರವನ್ನು ಸಿಐಎಸ್ಎಫ್ ಸಿಬಂದಿ ವಿಮಾನ ಸಂಚಾರ ನಿಯಂತ್ರಕ(ಎಟಿಸಿ)ರಿಗೆ ಮಾಹಿತಿ ನೀಡಿದ್ದು, ಕೂಡಲೇ ಅವರು ಪೈಲಟ್ಗಳನ್ನು ಸಂಪರ್ಕಿಸಿ ವಿಚಾರ ತಿಳಿಸಿದ್ದಾರೆ. ಆದರೆ, ವಿಮಾನದ ಎಲ್ಲ ವ್ಯವಸ್ಥೆಗಳೂ ಸುಸೂತ್ರವಾಗಿವೆ ಎಂದು ಪೈಲಟ್ ಹೇಳಿದ್ದಾರೆ. ಆದರೂ, ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನವನ್ನು ಮುಂಬೈಗೆ ತಿರುಗಿಸಲು ಸೂಚಿಸಲಾಯಿತು. ಅದರಂತೆ, ಮುಂಬೈನಲ್ಲಿ ವಿಮಾನ ಭೂಸ್ಪರ್ಶ ಮಾಡಿದೆ ಎಂದು ಮೂಲಗಳು ತಿಳಿಸಿವೆ. ತಿರುಚ್ಚಿಯಿಂದ ಮುಂಬಯಿವರೆಗೆ ಸುಮಾರು 4 ಗಂಟೆಗಳ ಕಾಲ ವಿಮಾನ ಹಾರಾಟ ನಡೆಸಿದೆ. ಸದ್ಯ ಪೈಲಟ್ ಗಣೇಶ್ ಬಾಬು ಹಾಗೂ ಅನುರಾಗ್ರನ್ನು ಅಮಾನತಿನಲ್ಲಿಡಲಾಗಿದೆ. ಇದೇ ರೀತಿಯ ಘಟನೆ 2010ರಲ್ಲಿ ಮಂಗಳೂರಿನಲ್ಲಿ ನಡೆದಾಗ 158 ಜನರು ಸಾವನ್ನಪ್ಪಿದ್ದರು. ಆದರೆ ಈ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಅಪಾಯವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ