ಅಲಯನ್ಸ್ ಏರ್ ಆಸ್ತಿ ನಗದೀಕರಣಕ್ಕೆ ಚಿಂತನೆ
Team Udayavani, Oct 11, 2021, 5:29 AM IST
ಹೊಸದಿಲ್ಲಿ: ಏರ್ ಇಂಡಿಯಾವನ್ನು ಟಾಟಾ ಸನ್ಸ್ಗೆ ಮಾರಾಟ ಮಾಡಿದ ಬಳಿಕ, ಕೇಂದ್ರ ಸರಕಾರ ಅಲಯನ್ಸ್ ಏರ್ ಮತ್ತು ಇತರ ನಾಲ್ಕು ಸಹವರ್ತಿ ಸಂಸ್ಥೆಗಳು ಹೊಂದಿರುವ ಆಸ್ತಿ ಯನ್ನು ನಗದೀ ಕರಿಸಲು ಮುಂದಾ ಗಿದೆ.
ಅಲಯನ್ಸ್ ಏರ್ ಎನ್ನುವುದು ಏರ್ ಇಂಡಿಯಾದ ಸಹವರ್ತಿ ಸಂಸ್ಥೆ ಯಾಗಿದೆ. “ಪಿಟಿಐ’ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಬಂಡವಾಳ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣ ಇಲಾಖೆ (ಡಿಐಪಿಎಎಂ) ಕಾರ್ಯದರ್ಶಿ ತುಹಿನ್ ಕಾಂತ ಪಾಂಡೆ, ಏರ್ ಇಂಡಿಯಾ ಏರ್ ಟ್ರಾನ್ಸ್ಪೊರ್ಟ್ ಸರ್ವಿಸಸ್ ಲಿಮಿಟೆಡ್ (ಎಐಎಟಿಎಸ್ಎಲ್), ಏರ್ ಇಂಡಿಯಾ ಎಂಜಿನಿಯರಿಂಗ್ ಸರ್ವಿಸಸ್ (ಎಐಇಎಸ್ಎಲ್), ಏರ್ಲೈನ್ ಅಲೈಡ್ ಸರ್ವಿಸಸ್ ಲಿಮಿಟೆಡ್ (ಎಎಎಸ್ಎಲ್) ಮತ್ತು ಹೊಟೇಲ್ ಕಾರ್ಪೊರೇಶನ್ ಆಫ್ ಇಂಡಿಯಾ (ಎಚ್ಸಿಐ)ಗಳ ಆಸ್ತಿಗಳನ್ನು ಶೀಘ್ರವೇ ನಗದೀಕರಣಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಇದಲ್ಲದೆ ಏರ್ ಇಂಡಿಯಾ ಅಸೆಟ್ ಹೋಲ್ಡಿಂಗ್ಸ್ ಲಿಮಿಟೆಡ್ ಒಟ್ಟು 44,679 ಕೋಟಿ ರೂ. ನಿವ್ವಳ ಆಸ್ತಿ ಹೊಂದಿದೆ.
ಏರ್ ಇಂಡಿಯಾ ಮಾರಾಟವಾಗದ ಹೊರತಾಗಿ ಸಹವರ್ತಿ ಸಂಸ್ಥೆಗಳು ಹೊಂದಿ ರುವ ಆಸ್ತಿಯ ಬಗ್ಗೆ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಸರಕಾರಿ ಸ್ವಾಮ್ಯದ ವಿಮಾನ ಸಂಸ್ಥೆ ಟಾಟಾ ಸನ್ಸ್ಗೆ ಮಾರಾಟ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ನಾಲ್ಕು ಸಂಸ್ಥೆಗಳು ಹೊಂದಿರುವ ಆಸ್ತಿಯ ಬಗ್ಗೆ ಕ್ರಮ ಕೈಗೊಳ್ಳಲು ಅವಕಾಶ ಸಿಗಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ವೀಕ್ಎಂಡ್ ಹುಮಸ್ಸಿನಲ್ಲಿದ್ದ ಜನರಿಗೆ ಕಿರಿಕಿರಿ ಉಂಟು ಮಾಡಿದ ಮಳೆ
14, 700 ಕೋಟಿ ರೂ.: ಕಟ್ಟಡಗಳು ಮತ್ತು ಇತರ ಆಸ್ತಿ ಮಾರಾಟದಿಂದಾಗಿ 14,700 ಕೋಟಿ ರೂ. ಸರಕಾರಕ್ಕೆ ಸಿಗಲಿದೆ. ಗ್ರೌಂಡ್ ಹ್ಯಾಂಡ್ಲಿಂಗ್, ಎಂಜಿನಿಯರಿಂಗ್ ವಿಭಾಗ ಮತ್ತು ಅಲಯನ್ಸ್ ಏರ್ನಿಂದಾಗಿ 2 ಸಾವಿರ ಕೋಟಿ ರೂ. ಸಿಗುವ ಸಾಧ್ಯತೆ ಇದೆ. ಪ್ರಾದೇಶಿಕವಾಗಿ ವಿಮಾನ ಯಾನ ನೀಡುವ ಸಂಸ್ಥೆಗಳಿಗೆ ಆದ್ಯತೆ ನೀಡಲಾಗುತ್ತದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ದೋಣಿಯಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ದೋಣಿಯಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ