ಚಿದು ವಿಚಾರಣೆ: ಸಿಬಿಐಗೆ ಅನುಮತಿ
Team Udayavani, Nov 27, 2018, 6:00 AM IST
ಹೊಸದಿಲ್ಲಿ: ಏರ್ಸೆಲ್ ಮ್ಯಾಕ್ಸಿಸ್ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರನ್ನು ವಿಚಾರಣೆ ನಡೆಸಲು ಸಿಬಿಐಗೆ ಕೇಂದ್ರ ಸರಕಾರ ಅನುಮತಿ ನೀಡಿದೆ. ಜಾರಿ ನಿರ್ದೇಶನಾಲಯವು ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಚಿದಂಬರಂ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದೆ. ಪಟಿಯಾಲಾ ಹೌಸ್ ಕೋರ್ಟ್ನಲ್ಲಿ ಸೋಮವಾರ ಪ್ರಕರಣಕ್ಕೆ ಸಂಬಂಧಿಸಿ
ದಂತೆ ವಿಚಾರಣೆ ನಡೆದಿದ್ದು, ಚಿದಂಬರಂ ವಿಚಾರಣೆ ನಡೆಸಲು ಅಗತ್ಯ ಅನುಮತಿಯನ್ನು ನಾವು ಪಡೆದಿದ್ದೇವೆ ಎಂದು ಅಟಾರ್ನಿ ಜನರಲ್ ತುಷಾರ್ ಮೆಹ್ತಾ ಕೋರ್ಟ್ಗೆ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ 18 ಆರೋಪಿಗಳನ್ನು ಸಿಬಿಐ ಗುರುತಿಸಿದ್ದು, ಈ ಪೈಕಿ ಐವರು ಅಧಿಕಾರಿಗಳ ವಿಚಾರಣೆಗೂ ಸರಕಾರದಿಂದ ಅನುಮತಿ ನಿರೀಕ್ಷಿಸಲಾಗುತ್ತಿದೆ. ಈ ಮಧ್ಯೆ ಚಿದಂಬರಂ ಹಾಗೂ ಕಾರ್ತಿಗೆ ಡಿ.18ರ ವರೆಗೆ ಜಾಮೀನು ಮಂಜೂರು ಅವಧಿಯನ್ನು ವಿಸ್ತರಿಸಲಾಗಿದ್ದು, ವಿಚಾರಣೆಯನ್ನು ಕೋರ್ಟ್ ಡಿ.18ಕ್ಕೆ ನಿಗದಿ ಪಡಿಸಿದೆ. ಜತೆಗೆ ಇತರ ಅಧಿಕಾರಿಗಳ ವಿಚಾರಣೆಗೆ ಅನುಮತಿ ಪಡೆಯಲು 3 ವಾರ ಅವಕಾಶವನ್ನು ಸಿಬಿಐಗೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ