ಪೋರ್ಟ್ ಬ್ಲೇರ್ ವಿಮಾನ ನಿಲ್ದಾಣ ಜಲಾವೃತ: 9 ಹಾರಾಟ ವಿಳಂಬ
Team Udayavani, May 30, 2018, 4:20 PM IST
ಪೋರ್ಟ್ ಬ್ಲೇರ್ : ಅಂಡಮಾನ್ ಮತ್ತು ನಿಕೋಬಾರ್ ನಲ್ಲಿ ನಿರಂತರ ಜಡಿಮಳೆ ಸುರಿಯುತ್ತಿರುವ ಪರಿಣಾಮವಾಗಿ ಇಲ್ಲಿನ ವೀರ್ ಸಾವರ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪೂರ್ಣವಾಗಿ ನೀರಿನಿಂದ ತುಂಬಿಕೊಂಡಿದೆ.
ಪ್ರಯಾಣಿಕರ ಬ್ಯಾಗೇಜ್ಗಳನ್ನು ತಪಾಸಿಸುವ ಮತ್ತು ಅವುಗಳನ್ನು ಮರಳಿ ಪಡೆಯುವ ತಾಣಗಳಲ್ಲಿ ಮೊಣಕಾಲ ವರೆಗೆ ನೀರು ತುಂಬಿದ್ದು ಪ್ರಯಾಣಿಕರ ನಿರ್ವಹಣೆಗೆ ಸವಾಲಾಗಿದೆ.
ಅಂಡಮಾನ್ ಕ್ರಾನಿಕಲ್ ವರದಿಯ ಪ್ರಕಾರ ಮಂಗಳವಾರ ಸಂಜೆಯಿಂದೀಚೆಗೆ ಕನಿಷ್ಠ 9 ವಿಮಾನಗಳ ಹಾರಾಟ ವಿಳಂಬವಾಗಿದೆ. ಇವುಗಳಲ್ಲಿ ಏರಿಂಡಿಯದ ನಾಲ್ಕು, ಇಂಡಿಗೋ ದ ಮೂರು ಮತ್ತು ಗೋ ಏರ್ ನ ಎರಡು ವಿಮಾನಗಳ ಹಾರಾಟ ಸೇರಿವೆ.
ಇಂದು ಬುಧವಾರ ಮಧ್ಯಾಹ್ನದ ಹೊತ್ತಿಗೆ ವಿಮಾನಗಳ ಅವರೋಹಣ (ಲ್ಯಾಂಡಿಂಗ್) ಪುನರಾರಂಭಗೊಂಡಿದೆ. ಹಾಗಿದ್ದರೂ ವಿಮಾನ ನಿಲ್ದಾಣದ ಅಧಿಕಾರಿಗಳು ಈಗಲೂ ನಿಲ್ದಾಣದಲ್ಲಿ ತುಂಬಿರುವ ನೀರನ್ನು ಹೊರಹಾಕಲು ಹರಸಾಹಸ ಪಡುತ್ತಿದ್ದಾರೆ. ಅಂತೆಯೇ ವಿಮಾನ ಅವರೋಹಣ ಪಟ್ಟಿಯಲ್ಲಿ ಎಲ್ಲಿಯೂ ನೀರು ನಿಂತಿಲ್ಲದಿರುವುದನ್ನು ಖಾತರಿ ಪಡಿಸಿಕೊಳ್ಳುತ್ತಿದ್ದಾರೆ.
ಎರಡು ದಿನಗಳ ಹಿಂದೆ ಬಂಗಾಲ ಕೊಲ್ಲಿಯ ಮಧ್ಯಪೂರ್ವ ಭಾಗದಲ್ಲಿ ವಾಯು ನಿಮ್ನತೆ ಒತ್ತಡ ಉಂಟಾಗಿದ್ದುದರ ಪರಿಣಾಮವಾಗಿ ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಜಡಿಮಳೆಯಾಗುತ್ತಿದೆ ಎಂದು ಹವಾಮಾನ ವೀಕ್ಷಕರು ತಿಳಿಸಿದ್ದಾರೆ.
ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಇನ್ನೂ ಒಂದು ದಿನ ಭಾರೀ ಮಳೆಯಾಗಲಿದೆಯಾದರೂ ಕ್ರಮೇಣ ಅದರ ತೀವ್ರತೆ ಕಡಿಮೆಯಾಗಲಿದೆ ಎಂದು ವೀಕ್ಷಕರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ