Airport ನಲ್ಲಿನ್ನು ಮೊದಲು ಸ್ಥಳೀಯ ಭಾಷೆಯಲ್ಲೇ ಸಾರ್ವಜನಿಕ ಪ್ರಕಟನೆ
Team Udayavani, Dec 26, 2018, 7:28 PM IST
ಹೊಸದಿಲ್ಲಿ : ‘ದೇಶದಲ್ಲಿನ ಎಲ್ಲ ವಿಮಾನ ನಿಲ್ದಾಣಗಳು ತಮ್ಮ ಸಾರ್ವಜನಿಕ ಪ್ರಕಟನೆಯನ್ನು ಮೊದಲಾಗಿ ಸ್ಥಳೀಯ ಭಾಷೆಯಲ್ಲಿ, ಅನಂತರ ಅನುಕ್ರಮವಾಗಿ ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಮಾಡಬೇಕು’ ಎಂದು ಸರಕಾರ ಇಂದು ಬುಧವಾರ ನಿರ್ದೇಶ ಹೊರಡಿಸಿದೆ
ನಾಗರಿಕ ವಾಯು ಯಾನ ಸಚಿವ ಸುರೇಶ್ ಪ್ರಭು ಅವರು ಈ ಸಂಬಂಧ ನಿರ್ದೇಶ ಹೊರಡಿಸುವ ತಾಜಾ ಕ್ರಮವನ್ನು ತೆಗೆದುಕೊಂಡಿರುವುದಾಗಿ ವರದಿ ತಿಳಿಸಿದೆ.
ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) ತನ್ನ ನಿಯಂತ್ರಣದಲ್ಲಿರುವ ಎಲ್ಲ ವಿಮಾನ ನಿಲ್ದಾಣಗಳಿಗೆ, “ಎಲ್ಲ ಸಾರ್ವಜನಿಕ ಪ್ರಕಟನೆಗಳನ್ನು ಮೊದಲು ಸ್ಥಳೀಯ ಭಾಷೆಯಲ್ಲಿ ಮತ್ತು ಅನಂತರ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಮಾಡುವಂತೆ ನಿರ್ದೇಶ ಹೊರಡಿಸಿದೆ” ಎಂದು ಪ್ರಾಧಿಕಾರದ ಅಧಿಕಾರಿ ತಿಳಿಸಿದ್ದಾರೆ.
ಇದೇ ರೀತಿ ಎಲ್ಲ ಖಾಸಗಿ ವಿಮಾನ ನಿಲ್ದಾಣ ನಿರ್ವಾಹಕರಿಗೆ ಕೂಡ ಈ ರೀತಿಯ ನಿರ್ದೇಶ ಜಾರಿ ಮಾಡಿರುವುದಾಗಿ ನಾಗರಿಕ ವಾಯು ಯಾನ ಸಚಿವಾಲಯ ತಿಳಿಸಿದೆ.
ಆದರೆ ನಿಶಬ್ದ (ಸೈಲೆಂಟ್) ವಿಮಾನ ನಿಲ್ದಾಣಗಳಿಗೆ ಈ ನಿರ್ದೇಶ ಅನ್ವಯಿಸುವುದಿಲ್ಲ; ಕಾರಣ ಅಂತಹ ವಿಮಾನ ನಿಲ್ದಾಣಗಳಲ್ಲಿ ಯಾವುದೇ ಬಾಯ್ದೆರೆಯ ಸಾರ್ವಜನಿಕ ಪ್ರಕಟನೆಗಳನ್ನು ಮಾಡಲಾಗುವುದಿಲ್ಲ.
ವಿಮಾನ ನಿಲ್ದಾಣಗಳಲ್ಲಿನ ಎಲ್ಲ ಬಾಯ್ದೆರೆಯ ಪ್ರಕಟನೆಗಳನ್ನು ಮೊದಲು ಸ್ಥಳೀಯ ಭಾಷೆಯಲ್ಲೇ ಮಾಡಬೇಕು; ಅನಂತರದಲ್ಲಿ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಾಡಬೇಕು ಎಂದು ಕೋರಿ ಹಲವಾರು ಮನವಿಗಳು ಜನರಿಂದ ಬಂದಿರುವುದನ್ನು ಪರಿಗಣಿಸಿ ನಾಗರಿಕ ವಾಯು ಯಾನ ಸಚಿವರು (ಸುರೇಶ್ ಪ್ರಭು) ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಸಚಿವಾಲಯ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
MUST WATCH
ಹೊಸ ಸೇರ್ಪಡೆ
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ