ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತೊರೆದ ಅಜಯ್ ಮಕೇನ್
Team Udayavani, Jan 4, 2019, 9:45 AM IST
ನವದೆಹಲಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ಮುಖಂಡ ಅಜಯ್ ಮಕೇನ್ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ.
ಗುರುವಾರ ಸಂಜೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಪಿಸಿ ಚಾಕೋ ಮತ್ತು ಅಜಯ್ ಮಕೇನ್ ಮಾತುಕತೆ ನಡೆಸಿದ್ದರು. ಏತನ್ಮಧ್ಯೆ ರಾಹುಲ್ ಗಾಂಧಿ, ಮಕೇನ್ ರಾಜೀನಾಮೆಯನ್ನು ಸ್ವೀಕರಿಸಿರುವುದಾಗಿ ವರದಿ ತಿಳಿಸಿದೆ.
ಅನಾರೋಗ್ಯದ ಕಾರಣ ನೀಡಿ ಅಜಯ್ ಮಕೇನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 54 ವರ್ಷದ ಮಕೇನ್ 2015ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲನ್ನನುಭವಿಸಿದ ಬಳಿಕ ಮಕೇನ್ ಅವರನ್ನು ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಮಾಡಲಾಗಿತ್ತು.
2015 विधान सभा के उपरान्त-
बतौर @INCDelhi अध्यक्ष-पिछले 4 वर्षों से,दिल्ली कांग्रेस कार्यकर्ताओं द्वारा,कांग्रेस कवर करने वाली मीडिया द्वारा,एवं हमारे नेता @RahulGandhi जी द्वारा,मुझे अपार स्नेह तथा सहयोग मिला है।इन कठिन परिस्थितियों में यह आसान नहीं था! इसके लिए ह्रदय से आभार!
— Ajay Maken (@ajaymaken) January 4, 2019
ಪಕ್ಷದ ವರಿಷ್ಠ ರಾಹುಲ್ ಗಾಂಧಿ, ಕಾರ್ಯಕರ್ತರು ಹಾಗೂ ಮಾಧ್ಯಮದವರಿಗೆ ಮಕೇನ್ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ್ದರು. ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಲ್ಲಿ ಅಜಯ್ ಮಕೇನ್ ರಾಜೀನಾಮೆ ನೀಡಿದ್ದಾರೆಂಬ ವರದಿಯನ್ನು ಕಾಂಗ್ರೆಸ್ ಅಲ್ಲಗಳೆದಿತ್ತು.
ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ತನಗೆ ಜವಾಬ್ದಾರಿ ವಹಿಸಿದರೆ ಅದನ್ನು ನಿಭಾಯಿಸಲು ಸಿದ್ಧ ಎಂದು ಕಳೆದ ವರ್ಷ ಅಭಿಪ್ರಾಯವ್ಯಕ್ತಪಡಿಸಿದ್ದರು. ದೆಹಲಿಯಲ್ಲಿ ಪಕ್ಷವನ್ನು ಮುನ್ನಡೆಸಿ ಎಂದು ಹೈಕಮಾಂಡ್ ಹೇಳಿದರೆ ನಾನು ಅದಕ್ಕೆ ಇಲ್ಲ ಎಂದು ಹೇಳಲಾರೆ ಎಂದು ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!