ಅಜಿತ್ಗೆ ವಿತ್ತ, ಆದಿತ್ಯಗೆ ಪರಿಸರ ಖಾತೆ?
Team Udayavani, Jan 3, 2020, 8:22 AM IST
ಮುಂಬಯಿ: ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ನೂತನ ಸಚಿವರಿಗೆ ಖಾತೆಗಳ ಹಂಚಿಕೆ ಅಂತಿಮಗೊಳಿ ಸಿದ್ದು, ಶುಕ್ರವಾರವೇ ಘೋಷಣೆ ಹೊರಬೀಳುವ ಸಾಧ್ಯತೆಯಿದೆ.
ಉಪಮುಖ್ಯಮಂತ್ರಿ ಹಾಗೂ ಎನ್ಸಿಪಿ ನಾಯಕ ಅಜಿತ್ ಪವಾರ್ ಅವರಿಗೆ ಹಣ ಕಾಸು ಖಾತೆ ಹಾಗೂ ಶಿವಸೇನೆಯ ಆದಿತ್ಯ ಠಾಕ್ರೆ ಅವರಿಗೆ ಪರಿಸರ ಮತ್ತು ಪ್ರವಾಸೋ ದ್ಯಮ ಇಲಾಖೆಯ ಹೊಣೆ ವಹಿಸಲಾಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಅಶೋಕ್ ಚವಾಣ್ಗೆ ಲೋಕೋಪಯೋಗಿ, ಎನ್ಸಿಪಿಯ ಅನಿಲ್ ದೇಶ್ಮುಖ್ಗೆ ಗೃಹ, ಜಯಂತ್ ಪಾಟೀಲ್ಗೆ ನೀರಾವರಿ, ದಿಲೀಪ್ ವಲ್ಸೆ ಪಾಟೀಲ್ಗೆ ಕಾರ್ಮಿಕ ಮತ್ತು ಅಬಕಾರಿ, ಚವಾಣ್ ಭುಜ್ಬಲ್ಗೆ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ನೀಡಲಾಗಿದೆ.
ಖಾತೆಗಳ ಹಂಚಿಕೆ ಕುರಿತು ಮೈತ್ರಿ ಪಕ್ಷಗಳಲ್ಲಿ ಯಾರಿಗೂ ಅಸಮಾಧಾನ ಆಗಿಲ್ಲ. ಸದ್ಯದಲ್ಲೇ ಮುಖ್ಯ ಮಂತ್ರಿಗಳು ಖಾತೆಗಳ ಕುರಿತು ಅಧಿಕೃತ ಘೋಷಣೆ ಮಾಡಲಿದ್ದಾರೆ ಎಂದು ಎನ್ಸಿಪಿ ವರಿಷ್ಠ ಶರದ್ ಪವಾರ್ ಹೇಳಿದ್ದಾರೆ. ಇದಕ್ಕೂ ಮುನ್ನ, ಖಾತೆ ಹಂಚಿಕೆ ವಿಚಾರದಲ್ಲಿ ಮೈತ್ರಿ ಪಕ್ಷಗಳ ನಾಯಕರ ನಡುವೆಯೇ ಒಡಕು ಮೂಡಿದೆ ಎಂದು ಶಿವಸೇನೆಯೇ ಹೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು