“ಮೊಂಡುತನದ ಸರಕಾರ”: ಕೃಷಿ ಮಸೂದೆಗೆ ವಿರೋಧಿಸಿ ಎನ್ ಡಿಎ ನಿಂದ ಹೊರಬಂದ ಶಿರೋಮಣಿ ಅಕಾಲಿ ದಳ
Team Udayavani, Sep 27, 2020, 8:18 AM IST
ಹೊಸದಿಲ್ಲಿ: ಕೇಂದ್ರ ಸರ್ಕಾರದ ಕೃಷಿ ಮಸೂದೆಯನ್ನು ಖಂಡಿಸಿ ಶಿರೋಮಣಿ ಅಕಾಲಿದಳ ಪಕ್ಷವೂ ಎನ್ ಡಿಎ ನಿಂದ ಹೊರಬಂದಿದೆ. ಶನಿವಾರ ತಡರಾತ್ರಿ ನಡೆದ ಸಭೆಯಲ್ಲಿ ಅಕಾಲಿ ದಳ ಈ ನಿರ್ಧಾರ ಕೈಗೊಂಡಿದೆ.
ರೈತ ವಿರೋಧಿ ವಿಧೇಯಕಗಳನ್ನು ಒಪ್ಪಲು ಸಾಧ್ಯವಿಲ್ಲ. ತಮ್ಮ ನಿರಂತರ ಮನವಿಯ ಹೊರತಾಗಿಯೂ ನರೇಂದ್ರ ಮೋದಿ ಸರ್ಕಾರ ರೈತ ವಿರೋದಿ ವಿಧೇಯಕಗಳನ್ನು ಜಾರಿಗೆ ತರುತ್ತಿದೆ. ಈ ಕಾರಣಗಳಿಂದ ಇನ್ನು ಮುಂದೆ ಎನ್ ಡಿಎ ಭಾಗವಾಗಿ ಮುಂದುವರಿಯುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಶಿರೋಮಣಿ ಅಕಾಲಿ ದಳ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಹೇಳಿದ್ದಾರೆ.
ಇದನ್ನೂ ಓದಿ: ಪಂಜಾಬ್: ತೀವ್ರಗೊಂಡ ಪ್ರತಿಭಟನೆ : ಸೆ. 29ರ ವರೆಗೂ ರೈಲು ತಡೆಗೆ ರೈತರ ನಿರ್ಧಾರ
ಕೃಷಿ ವಿಧೇಯಕವು “ಬಡ ರೈತರ ಮೇಲೆ ಹತ್ಯೆಯ ದಾಳಿ” ಎಂದಿರುವ ಬಾದಲ್, ಮೋದಿ ಸರಕಾರವು ಮೊಂಡುತನದ ಮತ್ತು ಸೂಕ್ಷ್ಮತೆಯಿಲ್ಲದ ಸರಕಾರ ಎಂದಿದ್ದಾರೆ.
ಕೆಲವೇ ದಿನಗಳ ಹಿಂದೆ ಕೇಂದ್ರ ಸಚಿವೆ, ಅಕಾಲಿ ದಳ ಸಂಸದೆ ಹರ್ಸಿಮ್ರತ್ ಕೌರ್ ಬಾದಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಕೇಂದ್ರ ಸರ್ಕಾರದ ಕೃಷಿ ವಿಧೇಯಕವನ್ನು ಖಂಡಿಸಿ ಪಂಜಾಬ್, ಹರ್ಯಾಣ ಸೇರಿದಂತೆ ದೇಶಾದ್ಯಂತ ರೈತರು, ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ