ಜಾಮೀನಿನ ಮೇಲೆ ಬಿಡುಗಡೆಯಾದ ಆಕಾಶ್ ವಿಜಯವರ್ಗೀಯಗೆ ಭರ್ಜರಿ ಸ್ವಾಗತ
ಅಧಿಕಾರಿಗೆ ಸಾರ್ವಜನಿಕವಾಗಿ ಬ್ಯಾಟ್ನಿಂದ ಹಲ್ಲೆ ನಡೆಸಿದ್ದ ಬಿಜೆಪಿ ಶಾಸಕ
Team Udayavani, Jun 30, 2019, 11:06 AM IST
ಇಂಧೋರ್: ಅಧಿಕಾರಿಗೆ ಸಾರ್ವಜನಿಕವಾಗಿ ಕ್ರಿಕೆಟ್ ಬ್ಯಾಟ್ನಿಂದ ಥಳಿಸಿ ಬಂಧನಕ್ಕೊಳಗಾಗಿದ್ದ ಮಧ್ಯಪ್ರದೇಶದ ಬಿಜೆಪಿ ಶಾಸಕ ಆಕಾಶ್ ವಿಜಯವರ್ಗೀಯ ಅವರಿಗೆ ಶನಿವಾರ ಸಂಜೆ ಭೂಪಾಲ್ ವಿಶೇಷ ಕೋರ್ಟ್ ಶನಿವಾರ ಸಂಜೆ ಜಾಮೀನು ನೀಡಿದೆ. ಭಾನುವಾರ ಬೆಳಗ್ಗೆ ಜೈಲಿನಿಂದ ಹೊರಬಂದ ಆಕಾಶ್ ಅವರಿಗೆ ಬಿಜೆಪಿ ಕಾರ್ಯಕರ್ತರು ಭರ್ಜರಿ ಸ್ವಾಗತ ನೀಡಿದ್ದಾರೆ.
‘ನಾನು ಜೈಲಿನಲ್ಲಿ ಉತ್ತಮ ಸಮಯವನ್ನೇ ಕಳೆದಿದ್ದೇನೆ,ಕ್ಷೇತ್ರದ ಅಭಿವೃದ್ಧಿ ಮತ್ತು ಸಾರ್ವಜನಿಕರ ಕ್ಷೇಮಕ್ಕಾಗಿ ಯೋಚನೆ ಮಾಡಿದ್ದೇನೆ’ ಎಂದು ಆಕಾಶ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಇಂಧೋರ್ನಲ್ಲಿ ಜಮಾವಣೆಗೊಂಡ ನೂರಾರು ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಪೊಲೀಸರು ಮತ್ತು ನೂರಾರು ಜನರ ಎದುರೆ ಆಕಾಶ್ ಸರ್ಕಾರಿ ಅಧಿಕಾರಿಯೊಬ್ಬರನ್ನು ಬ್ಯಾಟ್ನಿಂದ ಥಳಿಸಿದ್ದರು.
ಬಿಜೆಪಿ ಹಿರಿಯ ನಾಯಕ ಕೈಲಾಷ್ ವಿಜಯವರ್ಗೀಯ ಅವರ ಪುತ್ರ ಆಕಾಶ್ ನಡೆಸಿದ ಹಲ್ಲೆ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿ ಬಿಜೆಪಿ ತೀವ್ರ ಮುಜುಗರಕ್ಕೀಡಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು