ರಾಹುಲ್ಗೆ ಕೈಕೊಟ್ಟ ಅಖೀಲೇಶ್ ಯಾದವ್
Team Udayavani, Jan 10, 2018, 7:00 AM IST
ಲಕ್ನೋ: ಇತ್ತೀಚೆಗಷ್ಟೇ ಕಾಂಗ್ರೆಸ್ ಅಧ್ಯಕ್ಷ ಪದವಿ ಗೇರಿರುವ ರಾಹುಲ್ ಗಾಂಧಿಗೆ, 2019ರ ಲೋಕಸಭೆ ಚುನಾವಣೆಗೂ ಮುನ್ನವೇ ವಿಘ್ನ ಎದುರಾಗಿದೆ.
ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಮುಖಂಡ ಅಖೀಲೇಶ್ ಯಾದವ್ ಅವರು ರಾಹುಲ್ ಸಖ್ಯ ತೊರೆಯಲು ನಿರ್ಧರಿಸಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೇರಿದಂತೆ ಯಾವ ಪಕ್ಷದ ಜತೆಗೂ ಮೈತ್ರಿ ಮಾಡಿ ಕೊಳ್ಳುವುದಿಲ್ಲ ಎಂದು ಅಖೀಲೇಶ್ ಹೇಳಿದ್ದಾರೆ. ಕಾಂಗ್ರೆಸ್ ಜತೆಗಿನ ಮೈತ್ರಿಯಿಂದ ನಾವು ಏನನ್ನೂ ಗಳಿಸಿಲ್ಲ. ಹೀಗಾಗಿ ಸದ್ಯಕ್ಕೆ ಪಕ್ಷ ಬಲವರ್ಧನೆಯತ್ತ ನಮ್ಮ ಗಮನ ಇರಲಿದೆ. ಮೈತ್ರಿ ಬಗ್ಗೆ ಮಾತುಕತೆ ನಡೆಸುವುದು ಹಾಗೂ ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಸುವುದೆಲ್ಲವೂ ಸಮಯ ವ್ಯರ್ಥ ಎಂದಿದ್ದಾರೆ.
ಉತ್ತರಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಿದ್ದ ಸಮಾಜವಾದಿ ಮತ್ತು ಕಾಂಗ್ರೆಸ್ ಪಕ್ಷ ಬಿಜೆಪಿ ಎದುರು ಹೀನಾಯವಾಗಿ ಸೋಲುಂಡಿತ್ತು. ಎಸ್ಪಿ 47 ಸ್ಥಾನಗಳನ್ನು ಗಳಿಸಿದರೆ, ಕಾಂಗ್ರೆಸ್ 7 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ