ಅಖೀಲೇಶ್ಗೆ ತಡೆ ಒಡ್ಡಿದ ಅಧಿಕಾರಿಗಳು: ಎಸ್ಪಿ- ಬಿಜೆಪಿ ಕೆಸರೆರಚಾಟ
Team Udayavani, Feb 13, 2019, 12:30 AM IST
ಲಕ್ನೋ: ಸಮಾಜವಾದಿ ಪಕ್ಷದ ಅಧ್ಯಕ್ಷ ಅಖೀಲೇಶ್ ಯಾದವ್ರನ್ನು ವಿಮಾನ ಮೂಲಕ ಅಲಹಾಬಾದ್ಗೆ ತೆರಳದಂತೆ ಪೊಲೀಸರು ತಡೆದಿದ್ದು, ಈ ವಿಚಾರ ಉತ್ತರ ಪ್ರದೇಶದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ. ಈ ಬಗ್ಗೆ ಅಖೀಲೇಶ್ ಯಾದವ್ ಫೋಟೋಗಳನ್ನು ಟ್ವೀಟ್ ಮಾಡಿ, ತಮ್ಮನ್ನು “ವಶಪಡಿಸಿಕೊಳ್ಳಲಾಗಿದೆ’ ಎಂದು ಬರೆದುಕೊಂಡಿದ್ದಾರೆ.
ಅಲಹಾಬಾದ್ನಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿ ಘಟಕದ ನಾಯಕನ ಪದಗ್ರಹಣ ಕಾರ್ಯಕ್ರಮಕ್ಕೆ ತೆರಳಲು ಅಖೀಲೇಶ್ ಲಕ್ನೋ ಏರ್ಪೋರ್ಟ್ನಿಂದ ತೆರಳಲು ಚಾರ್ಟರ್ಡ್ ವಿಮಾನ ಏರಲು ಮುಂದಾದರು. ಈ ಸಂದರ್ಭದಲ್ಲಿ ಮಾಜಿ ಸಿಎಂರನ್ನು ಪೊಲೀಸ್ ಅಧಿಕಾರಿಗಳು ತಡೆದರು ಎಂದು ಅಖೀಲೇಶ್ ಹೇಳಿಕೊಂಡಿದ್ದಾರೆ. ವಿದ್ಯಾರ್ಥಿಗಳ ಶಕ್ತಿ ಏನು ಎನ್ನುವುದನ್ನು ತಿಳಿದು ಬಿಜೆಪಿಗೆ ಭಯವಾಗಿದೆ ಎಂದೂ ಆರೋಪಿಸಿದ್ದಾರೆ. ಈ ವಿಚಾರ ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಯಿತು. ಜತೆಗೆ ರಾಜ್ಯಾದ್ಯಂತ ಪ್ರತಿಭಟನೆಯೂ ನಡೆದಿದೆ. ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಯೋಗಿ ಆದಿತ್ಯನಾಥ್, ಅವರ ಭೇಟಿಯಿಂದ ಗಲಾಟೆ ಉಂಟಾಗಬಹುದು. ಪ್ರಯಾಗ್ರಾಜ್ನಲ್ಲೀಗ ಕುಂಭ ಮೇಳ ಶಾಂತಿಯುತವಾಗಿ ನಡೆಯುತ್ತಿದೆ. ಹೀಗಾಗಿ ಪ್ರಯಾಣಕ್ಕೆ ತಡೆಯೊಡ್ಡಲಾಯಿತು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ