ಯುಪಿಐ ಆಧಾರಿತ ವಹಿವಾಟುಗಳಿಗೆ ಶುಲ್ಕ ವಿಧಿಸುವಂತಿಲ್ಲ: ಸಿಬಿಡಿಟಿ


Team Udayavani, Sep 6, 2020, 8:18 PM IST

UPI

ಹೊಸದಿಲ್ಲಿ: ನಿಧಾನವಾಗಿ ಹಣದಿಂದ ದೂರ ಸರಿಯುತ್ತಿರುವ ಆರ್ಥಿಕತೆಯಲ್ಲಿ ಡಿಜಿಟಲ್‌ ಪಾವತಿ ಪ್ರಕ್ರಿಯೆ ಬಲವಾಗುತ್ತಿದ್ದು, ಈ ವಿಧಾನವನ್ನು ಮತ್ತಷ್ಟು ಉತ್ತೇಜಿಸಲು ಕೇಂದ್ರ ಹೊಸ ನಿಯಮವನ್ನು ಜಾರಿ ಮಾಡಿದೆ.

ಹೌದು ಇ-ಪೇಮೆಂಟ್‌ ಕ್ಷೇತ್ರವನ್ನು ಸದೃಢಗೊಳಿಸಲು ಮುಂದಾಗಿರುವ ಸರಕಾರ, ಬ್ಯಾಂಕ್‌ಗಳು ಗ್ರಾಹಕರಿಗೆ ಏಕೀಕೃತ ಪಾವತಿ ಇಂಟರ್‌ಫೇಸ್‌ (ಯುಪಿಐ) ಆಧಾರಿತ ವಹಿವಾಟುಗಳಿಗೆ ಶುಲ್ಕ ವಿಧಿಸುವಂತಿಲ್ಲ ಎಂದು ಪುನರುಚ್ಚರಿಸಿದೆ.

ಪಾವತಿ ಅಥವಾ ಹಣ ವರ್ಗಾವಣೆಗೆ ಯುಪಿಐ ಸೌಲಭ್ಯ ಬಳಸುವ ಗ್ರಾಹಕರು ಯಾವುದೇ ಹೆಚ್ಚುವರಿ ವೆಚ್ಚ ಭರಿಸದೆ ವಹಿವಾಟು ನಡೆಸಬಹುದಾಗಿದ್ದು, ರುಪೇ ಕಾರ್ಡ್‌, ಭೀಮ…ನಂತಹ ಯುಪಿಐ ಮೂಲಕ ವಹಿವಾಟು ನಡೆಸಿದ್ದಕ್ಕೆ ಶುಲ್ಕ ವಿಧಿಸಿದ್ರೆ, ಹಿಂದಿರುಗಿಸುವಂತೆ ಬ್ಯಾಂಕ್‌ಗಳಿಗೆ ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಹೇಳಿದೆ.

ಜನವರಿ 1ರ ಬಳಿಕ ಯುಪಿಐ ವ್ಯವಹಾರಕ್ಕೆ ಇದು ಅನ್ವಯವಾಗಲಿದ್ದು, ಎಲೆಕ್ಟ್ರಾನಿಕ್‌ ವಹಿವಾಟು,ಇ-ಪೇಮೆಂಟ್‌ ವಿಧಾನದಲ್ಲಿ ಹೆಚ್ಚುವರಿ ಶುಲ್ಕ ವಿಧಿಸದಂತೆ ಬ್ಯಾಂಕ್‌ಗಳಿಗೆ ಆದಾಯ ತೆರಿಗೆ ಇಲಾಖೆ ಸೂಚಿಸಿದೆ.

ಏನಿದು ಪ್ರಕರಣ ?
ಡಿಜಿಟಲ್‌ ಪಾವತಿ ಉತ್ತೇಜಿಸಲು 2020ರ ಜನವರಿ 1ರಿಂದ ರುಪೇ ಮತ್ತು ಯುಪಿಐ ಪ್ಲಾಪ್‌ಫಾರ್ಮ್ಗಳ ವಹಿವಾಟಿನ ಮೇಲೆ ಯಾವುದೇ ಎಂಡಿಆರ್‌ ಶುಲ್ಕ ಅನ್ವಯಿಸುವುದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ 2019ರ ಡಿಸೆಂಬರ್‌ನಲ್ಲಿ ಘೋಷಿಸಿದ್ದರು.
ಕೆಲವು ಖಾಸಗಿ ಬ್ಯಾಂಕ್‌ಗಳು ಯುಪಿಐ ಪೀರ್‌-ಟು-ಪೀರ್‌ (ಪಿ2ಪಿ) ಪಾವತಿಗಳಿಗೆ (ಅಥವಾ ಹಣ ವರ್ಗಾವಣೆಗೆ) ನಿಗದಿತ ಮಾನದಂಡ ವಿರುದ್ಧವಾಗಿ ಶುಲ್ಕ ವಿಧಿಸುತ್ತಿವೆ ಎಂದು ವರದಿಯಾಗಿದೆ.

ಕಾನೂನಿಗೆ ವಿರುದ್ಧವಾಗಿ ಹೇಗೆ ಶುಲ್ಕ ವಿಧಿಸುತ್ತಿದ್ದೇವು ?
ಐಐಟಿ ಬಾಂಬೆಯ ಆಶಿಶ್‌ ದಾಸ್‌ ಪ್ರಕಟಿಸಿದ ವರದಿ ಅನ್ವಯ, “ಯುಪಿಐ ಪಾವತಿಗಳು’ ಉಚಿತವಾಗಿದ್ದರೂ ಬ್ಯಾಂಕ್‌ಗಳು ತಮ್ಮ ಅನುಕೂಲಕ್ಕೆ ಅನುಗುಣವಾಗಿ ಕಾನೂನನ್ನು ವ್ಯಾಖ್ಯಾನಿಸಿ ವರ್ಗಾವಣೆಗೆ ಶುಲ್ಕ ವಿಧಿಸುತ್ತಿವೆ.

ಎಷ್ಟು ಶುಲ್ಕ ವಿಧಿಸುತ್ತಿದ್ದವು?
ಖಾಸಗಿ ಬ್ಯಾಂಕ್‌ಗಳಾದ ಹೆಚ್‌ಡಿಎಫ್ಸಿ, ಆಕ್ಸಿಸ್‌, ಐಸಿಐಸಿಐ ಮತ್ತು ಕೋಟಕ್‌ ಮಹೀಂದ್ರಾ ಬ್ಯಾಂಕ್‌ ತಮ್ಮ ವೆಬ್‌ಸೈಟ್‌ಗಳಲ್ಲಿ ಗ್ರಾಹಕರು ಕೇವಲ 20 ಉಚಿತ ಯುಪಿಐ ಪೀರ್‌-ಟು-ಪೀರ್‌ ವಹಿವಾಟುಗಳನ್ನು ಮಾತ್ರ ಮಾಡಬಹುದಾಗಿದೆ. ನಿಗದಿತ ಮಿತಿ ಮೀರಿದ ಪ್ರತಿ ವಹಿವಾಟಿಗೆ 2.5 ರಿಂದ 5 ರೂ. (ಜಿಎಸ್‌ಟಿ ಹೊರತುಪಡಿಸಿ). ಉದಾ: ಕೋಟಾಕ್‌ ಮಹೀಂದ್ರಾ ಬ್ಯಾಂಕ್‌ ಯುಪಿಐ ವಹಿವಾಟಿಗೆ ರೂ .2.5ರೂ. ಮತ್ತು 1,000 ರೂ.ಗಳ ವಹಿವಾಟಿನ ಮೊತ್ತದ ಮೇಲೆ 5 ರೂ. ವಿಧಿಸಲಿದೆ. ವಹಿವಾಟಿನ ಸಂಖ್ಯೆಯ ಹೆಚ್ಚಳದೊಂದಿಗೆ ಅದು ವಿಧಿಸುವ ದರವು ಹೆಚ್ಚಾಗಬಹುದು.

ಲಾಕ್‌ಡೌನ್‌ ವೇಳೆ ಜಾರಿಯಾದ ನಿಯಮ ?
ಲಾಕ್‌ಡೌನ್‌ ಅವಧಿಯಲ್ಲಿ ಖಾಸಗಿ ಬ್ಯಾಂಕ್‌ಗಳು ಈ ಶುಲ್ಕ ವಿಧಿಸಲು ಪ್ರಾರಂಭಿಸಿದವು. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಪಾವತಿ ವಹಿವಾಟುಗಳ ಸಂಖ್ಯೆ ಅನೇಕ ಪಟ್ಟು ಹೆಚ್ಚಾಯಿತು. ಐಸಿಐಸಿಐ ಬ್ಯಾಂಕ್‌ ಮತ್ತು ಹೆಚ್‌ಡಿಎಫ್ಸಿ ಬ್ಯಾಂಕ್‌ ಈ ಶುಲ್ಕ 2020ರ ಮೇ 3ರಿಂದ ವಿಧಿಸಲು ಪ್ರಾರಂಭಿಸಿದ್ರೆ, ಆಕ್ಸಿಸ್‌ ಬ್ಯಾಂಕ್‌ ಮತ್ತು ಕೋಟಾಕ್‌ ಮಹೀಂದ್ರಾ ಬ್ಯಾಂಕ್‌ ಕ್ರಮವಾಗಿ 2020ರ 1 ಜೂನ್‌ ಮತ್ತು 2020ರ 1 ಏಪ್ರಿಲ್‌ನಿಂದ ಶುಲ್ಕ ಹೇರತೊಡಗಿದವು.

ಬ್ಯಾಂಕ್‌ಗಳು ಈ ಆರೋಪಗಳನ್ನು ಹೇಗೆ ಸಮರ್ಥಿಸುತ್ತಿವೆ?
ಖಾಸಗಿ ಬ್ಯಾಂಕ್‌ಗಳು ಕ್ಷುಲ್ಲಕ ಯುಪಿಐ ವಹಿವಾಟು ತಡೆಗಟ್ಟಲು ಈ ಶುಲ್ಕಗಳನ್ನು ಪರಿಚಯಿಸಿವೆ ಎಂದು ಹೇಳಲಾಗುತ್ತಿದ್ದು, ಕೆಲವು ಅಪ್ಲಿಕೇನ್‌ಗಳು ಪ್ರತಿಫ‌ಲಗಳ ಆಮಿಷ ಮತ್ತು ಪ್ರಯೋಜನಗಳ ಮೂಲಕ ಜನರಲ್ಲಿ ಡಿಜಿಟಲ್‌ ಹಣ ವರ್ಗಾವಣೆ ಉತ್ತೇಜಿಸುತ್ತಿವೆ. ಇದು ಗ್ರಾಹಕರ ನಡುವೆ ಪಾವತಿ ಹಾಗೂ ಮರುಪಾವತಿಗೆ ಕಾರಣವಾಗುತ್ತಿದ್ದು, ಪಾವತಿ ವ್ಯವಸ್ಥೆಯ ಮೇಲೆ ಹೆಚ್ಚಿನ ಹೊರೆ ಸೃಷ್ಟಿಸುತ್ತಿದೆ.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

1-qewqwqewq

Netizens; 10ನೇ ತರಗತಿ ಪರೀಕ್ಷೆ ಟಾಪರ್‌ ಟ್ರೋಲ್‌: ನೆಟ್ಟಿಗರಿಂದ ತರಾಟೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.