ಮಾರ್ಚ್ ಅಂತ್ಯಕ್ಕೆ ಎಲ್ಲಾ ಕಾರುಗಳಲ್ಲಿ 6 ಏರ್ಬ್ಯಾಗ್: ಸಚಿವ ನಿತಿನ್ ಗಡ್ಕರಿ
Team Udayavani, Sep 8, 2022, 7:25 AM IST
ನವದೆಹಲಿ: ಟಾಟಾ ಸನ್ಸ್ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ ಬೆನ್ನಲ್ಲೇ, ಕಾರುಗಳಲ್ಲಿ ಸುರಕ್ಷತೆ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ, ಈ ವಿತ್ತೀಯ ವರ್ಷದ ಅಂತ್ಯದೊಳಗೆ ಎಲ್ಲಾ ಕಾರುಗಳಲ್ಲಿಯೂ ಆರು ಏರ್ಬ್ಯಾಗ್ಗಳನ್ನು ಕಡ್ಡಾಯವಾಗಿ ಅಳವಡಿಸುವ ಬಗ್ಗೆ ಚಿಂತನೆ ನಡೆಸಿದೆ.
ಈ ಸಂಬಂಧ ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೇ ಮಾಹಿತಿ ನೀಡಿದ್ದು, ಈ ನಿಯಮದ ಕರಡನ್ನು ಜನವರಿ ತಿಂಗಳಲ್ಲಿ ಹೊರತರಲಾಗಿದ್ದು, ಫೆಬ್ರವರಿಯಲ್ಲೇ ಜಾರಿಗೊಳಿಸಲು ಚಿಂತಿಸಲಾಗಿತ್ತು. ಆದರೆ ಹಲವು ಕಾರು ನಿರ್ಮಾಣ ಸಂಸ್ಥೆಗಳು ಈ ನಿಯಮಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ನಿಯಮ ಜಾರಿಗೆ ತಡೆಯಾಗಿದೆ. ಆದರೆ ಅದನ್ನು ವಿತ್ತೀಯ ವರ್ಷದ ಅಂತ್ಯದೊಳಗೆ ಜಾರಿಗೆ ತರಲಾಗುವುದು. ಹಾಗೂ ಹಿಂಬದಿ ಸವಾರರು ಸೀಟ್ ಬೆಲ್ಟ್ ಧರಿಸದೇ ಹೋದರೆ ಅಲರಾಂ ರಿಂಗಣಿಸುವಂತೆ ವ್ಯವಸ್ಥೆ ಕಲ್ಪಿಸಲು ಕಾರು ನಿರ್ಮಾಣ ಸಂಸ್ಥೆಗಳಿಗೆ ಸೂಚಿಸಲಾಗುವುದು ಎಂದು ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಗಡ್ಕರಿ ಅವರೇ ಹೇಳಿರುವ ಪ್ರಕಾರ, 2021ರಲ್ಲಿ 5 ಲಕ್ಷ ರಸ್ತೆ ಅಪಘಾತಗಳು ಸಂಭವಿಸಿದ್ದು ಒಂದೂವರೆ ಲಕ್ಷ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆ ಬದಲಾಗಿ ಕಾರುಗಳಲ್ಲಿ ಸುರಕ್ಷತಾ ಫೀಚರ್ಗಳು ಇದ್ದಿದ್ದರೆ ಸಾವುಗಳನ್ನು ತಡೆಯಬಹುದಾಗಿತ್ತು ಎಂದಿದ್ದಾರೆ.
ಸದ್ಯ ಕಾರು ಕಂಪನಿಗಳು ಆರು ಏರ್ಬ್ಯಾಗ್ ಅಳವಡಿಕೆಯಿಂದ ಕಾರುಗಳ ದರ ದುಬಾರಿಯಾಗುತ್ತದೆ ಎಂಬ ನೆಪ ಹೇಳುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ಕೇವಲ 900 ರೂ.ಗಳಿಗೆ ಪ್ರತಿ ಏರ್ಬ್ಯಾಗ್ ಅಳವಡಿಸಬಹುದಾಗಿದೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ