ಸುಪ್ರೀಂ ಮುಂದೆ ಮಹತ್ವದ ಪ್ರಕರಣಗಳು ; ಚಳಿಗಾಲದ ರಜೆಯ ಅನಂತರ ಇಂದಿನಿಂದ ಕಲಾಪಗಳು ಆರಂಭ
Team Udayavani, Jan 6, 2020, 9:45 AM IST
ಹೊಸದಿಲ್ಲಿ: ಚಳಿಗಾಲದ ರಜೆಯ ಬಳಿಕ ಸೋಮವಾರದಿಂದ ಪುನರಾರಂಭವಾಗಲಿರುವ ಸುಪ್ರೀಂ ಕೋರ್ಟ್ನ ಮುಂದೆ ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಪ್ರಕರಣ, ಪೌರತ್ವ ತಿದ್ದುಪಡಿ ಕಾಯ್ದೆ ಮುಂತಾದ ಮಹತ್ವದ ಪ್ರಕರಣಗಳು ವಿಚಾರಣೆಗಾಗಿ ಸಾಲುಗಟ್ಟಿ ನಿಂತಿವೆ. ಇವುಗಳಲ್ಲಿ ಶಬರಿಮಲೆ ಪ್ರಕರಣವೂ ಒಂದಾಗಿದ್ದು ಅದರ ವಿಚಾರಣೆಯನ್ನು ಏಳು ಸದಸ್ಯರ ಸಾಂವಿಧಾನಿಕ ಪೀಠ ನಡೆಸಲಿದೆ. ಕಲಾಪಗಳ ಮೊದಲ ದಿನವೇ, ಟಾಟಾ ಸನ್ಸ್ ಕಂಪೆನಿ ಹಾಗೂ ಸೈರಸ್ ಮಿಸ್ತ್ರಿ ನಡುವಿನ ವ್ಯಾಜ್ಯ ವಿಚಾರಣೆಗೊಳಪಡುವ ಸಾಧ್ಯತೆ ದಟ್ಟವಾಗಿದೆ.
ಆನಂತರದ ದಿನಗಳಲ್ಲಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕೆನೆಪದರಿನಲ್ಲಿ ಇರುವವರಿಗೆ ಮೀಸಲಾತಿ ಅನ್ವಯವಾಗದು ಎಂಬ 2018ರ ಸುಪ್ರೀಂ ಕೋರ್ಟ್ನ ತೀರ್ಪನ್ನು 7 ಸದಸ್ಯರ ಪೀಠದಿಂದ ಮತ್ತೆ ವಿಚಾರಣೆಗೊಳಪಡಿಸಬೇಕು ಎಂದು ಕೇಂದ್ರ ಸರಕಾರ ಸಲ್ಲಿಸಿರುವ ಮನವಿಯ ವಿಚಾರಣೆ ಶುರುವಾಗಲಿದೆ.
ಇನ್ನು, ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಅನಂತರ ಅಲ್ಲಿ ಹೇರಲಾಗಿರುವ ಪ್ರತಿಬಂಧಕಾಜ್ಞೆಗಳನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದ್ದು, ಜ. 22ರಿಂದ ಸಿಜೆಐ ಎಸ್.ಎ. ಬೋಬ್ಡೆ ನೇತೃತ್ವದ ಪೀಠದಿಂದ ಪೌರತ್ವ ಕಾಯ್ದೆ ತಿದ್ದುಪಡಿ ಪ್ರಕರಣ ವಿಚಾರಣೆಗೊಳಪಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್