![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಅಮೆರಿಕದಲ್ಲಿ ಭಾರತೀಯ ಕುಟುಂಬದ ಎಲ್ಲ ನಾಲ್ವರ ಸಾವು: ಸುಶ್ಮಾ
Team Udayavani, Apr 17, 2018, 4:23 PM IST
![sushma-swaraj-700.jpg](https://www.udayavani.com/wp-content/uploads/2018/04/17/sushma-swaraj-700-620x354.jpg)
ಹೊಸದಿಲ್ಲಿ : ಅಮೆರಿಕದಲ್ಲಿ ಒರೆಗಾನ್ನಿಂದ ಕ್ಯಾಲಿಫೋರ್ನಿಯಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ನಾಪತ್ತೆಯಾಗಿದ್ದ ಭಾರತೀಯ ಕುಟುಂಬವೊಂದರ ಎಲ್ಲ ನಾಲ್ವರು ಮೃತಪಟ್ಟಿರುವುದನ್ನು ವಿದೇಶ ವ್ಯವಹಾರಗಳ ಸಚಿವೆ ಸುಶ್ಮಾ ಸ್ವರಾಜ್ ದೃಢಪಡಿಸಿದ್ದಾರೆ.
ಗುಜರಾತ್ನ ಸೂರತ್ ಮೂಲದ ಸಂದೀಪ್ ತೊಟ್ಟಪಿಳ್ಳಿ ಮತ್ತು ಅವರ ಕುಟುಂಬದವರ ಸಾವಿಗೆ ಸುಶ್ಮಾ ಅವರು ಟ್ವಿಟರ್ ನಲ್ಲಿ ತೀವ್ರ ಶೋಕ, ಆಘಾತ ವ್ಯಕ್ತಪಡಿಸಿದ್ದಾರೆ.
ಕ್ಯಾಲಿಫೋರ್ನಿಯದ ಈಲ್ ನದಿಯಲ್ಲಿ ಪತ್ತೆಯಾಗಿದ್ದ ಸಂದೀಪ್ ಕುಟುಂಬದ ಎಲ್ಲ ನಾಲ್ವರ ಶವಗಳನ್ನು ಮೇಲಕ್ಕೆತ್ತಲಾಗಿದ್ದು ಸರಕಾರ ಇವರ ಕುಟುಂಬ ಸದಸ್ಯರಿಗೆ ಅಮೆರಿಕಕ್ಕೆ ಪ್ರಯಾಣಿಸಲು ವೀಸಾ ದೊರಕಿಸಿಕೊಡಲು ನೆರವಾಗುತ್ತಿದೆ ಎಂದು ತಿಳಿಸಿದ್ದಾರೆ.
ಕ್ಯಾಲಿಫೋರ್ನಿಯದ ಈಲ್ ನದಿಯಲ್ಲಿ ಕಾರು ಮುಳುಗಿ ಮೃತಪಟ್ಟವರೆಂದರೆ ಸಂದೀಪ್ ತೊಟ್ಟಪಿಳ್ಳಿ, ಅವರ ಪತ್ನಿ ಸೌಮ್ಯಾ, ಮತ್ತು ಇಬ್ಬರು ಮಕ್ಕಳಾದ, 9ರ ಹರೆಯದ ಪುತ್ರಿ ಸಾಚಿ ಮತ್ತು ಪುತ್ರ ಸಿದ್ಧಾಂತ್.
ಈಲ್ ನದಿಯಲ್ಲಿ ಮುಳುಗಿದ ಕಾರಿನಲ್ಲಿ ಸಂದೀಪ್ ಮತ್ತು ಪುತ್ರಿ ಸಾಚಿ ಅವರ ಶವಗಳು ಪತ್ತೆಯಾಗುವುದಕ್ಕೆ ಎರಡು ದಿನಗಳ ಹಿಂದೆ ಸಂದೀಪ್ ಪತ್ನಿ ಸೌಮ್ಯಾ ಅವರ ಶವ ಪತ್ತೆಯಾಗಿತ್ತು. ಆದರೆ ಪುತ್ರ ಸಿದ್ಧಾಂತ್ ನ ಸುಳಿವು ಸಿಕ್ಕಿರಲಿಲ್ಲ. ಅನಂತರ ಆತನ ಶವವೂ ಪತ್ತೆಯಾಯಿತು.
ಸಂದೀಪ್ ತೊಟ್ಟಪಿಳ್ಳಿ ಅವರು ಸ್ಯಾನ್ ಓಸೇಯಲ್ಲಿನ ತಮ್ಮ ಸ್ನೇಹಿತನನ್ನು ಭೇಟಿಯಾಗಲು ಎ.6ರಂದು ಬರುವವರಿದ್ದರು. ಎ.5ರ ತನಕ ಸಂದೀಪ್ ಸಂಪರ್ಕದಲ್ಲಿದ್ದರು. ಎ.6ರಂದು ಅವರು ಸ್ಯಾನ್ ಓಸೆ ತಲುಪಲಿಲ್ಲ ಎಂದು ಇಲ್ಲಿನ ಪೊಲೀಸರು ಹೇಳಿದ್ದಾರೆ. ಸಂದೀಪ್ ಅವರು ಕಳೆದ ಹದಿನೈದು ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.