ಪ್ರಥಮ ಪ್ರಜೆಯ ಆಯ್ಕೆಗೆ ಮತದಾನ ಆರಂಭ


Team Udayavani, Jul 17, 2017, 4:40 AM IST

President-Election-600.jpg

ಹೊಸದಿಲ್ಲಿ: ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರ ಉತ್ತರಾಧಿಕಾರಿ ಆಯ್ಕೆಗಾಗಿ ಸೋಮವಾರ ಮತದಾನ ನಡೆಯಲಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ರಾಮನಾಥ್‌ ಕೋವಿಂದ್‌ ಮತ್ತು ಕಾಂಗ್ರೆಸ್‌ ನೇತೃತ್ವದ ಯುಪಿಎ ಅಭ್ಯರ್ಥಿಯಾಗಿ ಲೋಕಸಭೆಯ ಮಾಜಿ ಸ್ಪೀಕರ್‌ ಮೀರಾ ಕುಮಾರ್‌ ಕಣದಲ್ಲಿದ್ದಾರೆ. ಸದ್ಯದ ಅಂಕಿ ಅಂಶಗಳ ಪ್ರಕಾರ, ಕೋವಿಂದ್‌ ಅವರೇ ಮುಂಚೂಣಿಯಲ್ಲಿದ್ದಾರೆ. ಈ ಚುನಾವಣೆಯ ಫ‌ಲಿತಾಂಶ ಗುರುವಾರ ಪ್ರಕಟವಾಗಲಿದೆ.

ಈ ಚುನಾವಣೆಯಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸಂಸದರು, ಆಯಾ ರಾಜ್ಯಗಳ ಶಾಸಕರು ಮತ ಚಲಾಯಿಸಲಿದ್ದಾರೆ. ಸಂಸದರು ಸಂಸತ್‌ ಅಥವಾ ಆಯಾ ರಾಜ್ಯಗಳ ವಿಧಾನಸಭೆಯಲ್ಲಿ ಮತ ಚಲಾಯಿಸಬಹುದು. ಹಾಗೆಯೇ ಶಾಸಕರು ತಮ್ಮ ತಮ್ಮ ರಾಜ್ಯಗಳ ವಿಧಾನ ಸಭೆಯಲ್ಲಿ ಮತ ಚಲಾಯಿಸಲಿದ್ದಾರೆ. ಈ ಬಾರಿ ಒಟ್ಟು 4,896 ಮತದಾರರು ಮತದಾನ ಮಾಡಲಿದ್ದು, ಇವರಲ್ಲಿ 4,120 ಶಾಸಕರು ಮತ್ತು 776 ಸಂಸದರು ಇದ್ದಾರೆ. ಆದರೆ, ರಾಷ್ಟ್ರಪತಿ ಅವರಿಂದ ನಾಮನಿರ್ದೇಶಿತಗೊಂಡಿರುವವರಿಗೂ ಮತದಾನದ ಹಕ್ಕು ಇಲ್ಲ. ಅಂದರೆ ಸಚಿನ್‌ ಹಾಗೂ ರೇಖಾ ಮತ ಚಲಾವಣೆ ಮಾಡುವಂತಿಲ್ಲ. ರಾಜ್ಯಗಳ ವಿಧಾನಪರಿಷತ್‌ ಸದಸ್ಯರಿಗೆ ಮತದಾನದ ಹಕ್ಕು ಇರುವುದಿಲ್ಲ. ಹಾಗೆಯೇ ಲೋಕಸಭೆ ಮತ್ತು ವಿವಿಧ ರಾಜ್ಯಗಳ ವಿಧಾನಸಭೆಗಳಲ್ಲಿ 13 ಸದಸ್ಯ ಸ್ಥಾನಗಳು ಖಾಲಿಯಿದ್ದು, ಚುನಾವಣೆ ಬಳಿಕವೇ ಸದಸ್ಯರ ಆಯ್ಕೆ ನಡೆಯಲಿದೆ.


ದೇಶಾದ್ಯಂತ 32 ಮತದಾನ ಕೇಂದ್ರಗಳಲ್ಲಿ, ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಲ್ಲಿ ಮತದಾನ ನಡೆಯಲಿದೆ. ಲೋಕಸಭಾ ಕಾರ್ಯದರ್ಶಿ ಅವರು ರಿಟರ್ನಿಂಗ್‌ ಆಫೀಸರ್‌ ಆಗಿದ್ದಾರೆ. ಚುನಾವಣೆಗೆ 33 ವೀಕ್ಷಕರನ್ನು ಚುನಾವಣಾ ಆಯೋಗ ನೇಮಿಸಿದೆ. ಇಬ್ಬರು ವೀಕ್ಷಕರು ಲೋಕಸಭೆಯಲ್ಲಿ ಉಪಸ್ಥಿತರಿರಲಿದ್ದು, ವಿಧಾನಸಭೆಗಳಲ್ಲಿ ಒಬ್ಬರು ಉಪಸ್ಥಿತರಿರಲಿದ್ದಾರೆ. ಹಾಲಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರ ಅಧಿಕಾರಾವಧಿ ಜು.24ರಂದು ಕೊನೆಗೊಳ್ಳಲಿದ್ದು, ಜು.25ರಂದು ನೂತನ ರಾಷ್ಟ್ರಪತಿ ಅವರಿಗೆ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಜೆ.ಎಸ್‌. ಖೆಹರ್‌ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ.

ವಿಶೇಷ ಪೆನ್‌ ಬಳಕೆ: ಮತದಾನ ಕೇಂದ್ರಕ್ಕೆ ಮತದಾರ ಜನಪ್ರತಿನಿಧಿಗಳು ಪೆನ್ನು ತೆಗೆದುಕೊಂಡು ಹೋಗುವಂತಿಲ್ಲ. ಈ ಬಗ್ಗೆ ಚುನಾವಣಾ ಆಯೋಗ ಪ್ರಕಟನೆ ಹೊರಡಿಸಿದೆ. ಚುನಾವಣೆಗೆ ಮತಪತ್ರದಲ್ಲಿ ಟಿಕ್‌ ಮಾಡುವ ಮೂಲಕ ಮತ ಹಾಕಬೇಕು. ಇದಕ್ಕೆ ಮತದಾನ ಕೇಂದ್ರದಲ್ಲೇ ನೀಡುವ ವಿಶಿಷ್ಟ ನಮೂನೆಯ ಮಾರ್ಕರ್‌ ಪೆನ್‌ಗಳನ್ನೇ ಬಳಸಬೇಕು. ಮತದಾರರು ತಮ್ಮ ಪೆನ್‌ಗಳಿಂದಲೇ ಟಿಕ್‌ ಮಾಡಿದರೆ ಮತ ಅಸಿಂಧು ಆಗುತ್ತದೆ. ಆದ್ದರಿಂದ ಪೆನ್‌ ಅನ್ನು ನಿಷೇಧಿಸಲಾಗಿದೆ.

ಒಟ್ಟು ಮತಗಳ ಮೌಲ್ಯ – 10,95,519;
ಎನ್‌ಡಿಎ – 6,61,278 – 60.30%;
ಯುಪಿಎ – 4,34,241 – 39.70%

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.