ಆರುಷಿಯನ್ನು ಕೊಂದದ್ದು ಹೆತ್ತವರೇ ? ಇಂದು ಹೈಕೋರ್ಟ್ ತೀರ್ಪು
Team Udayavani, Oct 12, 2017, 10:56 AM IST
ಹೊಸದಿಲ್ಲಿ : ಒಂಬತ್ತು ವರ್ಷಗಳ ಹಿಂದೆ ನಡೆದಿದ್ದ 14 ವರ್ಷ ಪ್ರಾಯದ ಆರುಷಿ ತಲ್ವಾರ್ ಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಅಲಹಾಬಾದ್ ಹೈಕೋರ್ಟ್ ಇಂದು ಗುರುವಾರ ತೀರ್ಪು ನೀಡುವ ಸಂಭವವಿದೆ. 2008ರಲ್ಲಿ ನೋಯ್ಡಾದಲ್ಲಿನ ತನ್ನ ನಿವಾಸದಲ್ಲಿ ಆರುಷಿ ಸತ್ತು ಬಿದ್ದಿರುವುದು ಪತ್ತೆಯಾಗಿತ್ತು.
ಆರುಷಿ ಮತ್ತು ಮನೆ ಕೆಲಸದಾಳು ಹೇಮರಾಜ್ನನ್ನು ಹತ್ಯೆಗೈದ ಅಪರಾಧಕ್ಕಾಗಿ ಉತ್ತರ ಪ್ರದೇಶ ನ್ಯಾಯಾಲಯ ಆರುಷಿಯ ಹೆತ್ತವರಾದ ರಾಜೇಶ್ ಮತ್ತು ನೂಪುರ್ ತಲ್ವಾರ್ ಅವರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿತ್ತು.
ಗಾಜಿಯಾಬಾದ್ನ ಸಿಬಿಐ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷೆಯ ತೀರ್ಪನ್ನು ಪ್ರಶ್ನಿಸಿ ಆರುಷಿ ಹೆತ್ತವರು ಅಲಹಾಬಾದ್ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು. ಕಳೆದ ಸೆಪ್ಟಂಬರ್ನಲ್ಲಿ ಜಸ್ಟಿಸ್ ಬಿ ಕೆ ನಾರಾಯಣ ಮತ್ತು ಜಸ್ಟಿಸ್ ಎ ಕೆ ಮಿಶ್ರಾ ಅವರನ್ನು ಒಳಗೊಂಡ ಪೀಠವು ಈ ಪ್ರಕರಣದ ಮೇಲಿನ ತೀರ್ಪನ್ನು ಕಾದಿರಿಸಿತ್ತು.
2013ರ ನವೆಂಬರ್ 26ರಂದು ಸಿಬಿಐ ನ್ಯಾಯಾಲಯ ಆರುಷಿ ದಂಪತಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು. ಆ ತೀರ್ಪನ್ನು ಪ್ರಶ್ನಿಸಿ ದಂಪತಿ ಸಲ್ಲಿಸಿದ್ದ ಮೇಲ್ಮನವಿಯು ನಾಳೆ (ಗುರುವಾರ) ವಿಚಾರಣೆಗೆ ಬರಲಿದೆ; ಅವರಿಗೆ ನ್ಯಾಯ ಸಿಕ್ಕೀತು ಎಂದು “ಏಕ್ ಥೀ ಆರುಷಿ’ ಕೃತಿಯ ಲೇಖಕ ಸುನೀಲ್ ಮೌರ್ಯ ನಿನ್ನೆ ಬುಧವಾರ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ