
ಅಮಾನತುಲ್ಲಾ ಖಾನ್ ಬೆಂಬಲಿಗರಿಂದ ಎಸಿಬಿ ಅಧಿಕಾರಿಯ ಮೇಲೆ ಹಲ್ಲೆ
ಮೂರನೇ ಎಫ್ಐಆರ್ ದಾಖಲು ; ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್
Team Udayavani, Sep 18, 2022, 2:14 PM IST

ನವ ದೆಹಲಿ: ವಕ್ಫ್ ಬೋರ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿಯ ವೇಳೆ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಬೆಂಬಲಿಗರು ಎಸಿಬಿ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿ ಬೆದರಿಸುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.ಸೆ 16 ರಂದು ದೆಹಲಿಯ ಓಖ್ಲಾ ಶಾಸಕ ಖಾನ್ ಜಾಮಿಯಾ ನಗರದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿದಾಗ ಈ ಘಟನೆ ನಡೆದಿದೆ.
ದೆಹಲಿ ವಕ್ಫ್ ಬೋರ್ಡ್ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ದೆಹಲಿ ಎಸಿಬಿ ಶುಕ್ರವಾರ ಸಂಜೆ ಬಂಧಿಸಿತ್ತು.
ಇದನ್ನೂ ಓದಿ: ದೇಶದ ವಿರೋಧಿ ಚಟುವಟಿಕೆ ಆರೋಪ: ಆಂಧ್ರಪ್ರದೇಶದ ಹಲವೆಡೆ ಎನ್ ಐಎ ದಾಳಿ
ಶನಿವಾರ ನಡೆದ ವಿಚಾರಣೆಯ ವೇಳೆ ಎಸಿಬಿ, ತಮ್ಮ ಎಸಿಪಿ ಮೇಲೆ ಖಾನ್ ಸಂಬಂಧಿಕರು ಮತ್ತು ಬೆಂಬಲಿಗರು ದಾಳಿ ನಡೆಸಿದ್ದರು ಎಂದು ರೂಸ್ ಅವೆನ್ಯೂ ಕೋರ್ಟ್ಗೆ ಮಾಹಿತಿ ನೀಡಲಾಗಿದೆ. ದಾಳಿಯ ಛಾಯಾಚಿತ್ರಗಳು ಮತ್ತು ವಿಡಿಯೋ ಸಾಕ್ಷ್ಯಗಳನ್ನು ಸಹ ನ್ಯಾಯಾಲಯಕ್ಕೆ ತೋರಿಸಲಾಗಿದೆ.
ಎಸಿಬಿಯ ಎಸಿಪಿ ಮೇಲೆ ದಾಳಿ ಮಾಡಿದ್ದಕ್ಕಾಗಿ ಮತ್ತು ಅಕ್ರಮ ಶಸ್ತ್ರಾಸ್ತ್ರಗಳು ಮತ್ತು ಜೀವಂತ ಕಾಟ್ರಿಡ್ಜ್ಗಳನ್ನು ಹೊಂದಿದ್ದಕ್ಕಾಗಿ ಖಾನ್ ಬೆಂಬಲಿಗರ ವಿರುದ್ಧ ದೆಹಲಿ ಪೊಲೀಸರು ಜಾಮಿಯಾ ನಗರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್ಐಆರ್ಗಳನ್ನು ದಾಖಲಿಸಿದ್ದಾರೆ. ಎಎಪಿ ಶಾಸಕ ಹಮೀದ್ ಅಲಿ ಮತ್ತು ಕೌಸರ್ ಇಮಾಮ್ ಸಿದ್ದಿಕ್ ಅವರ ಸಹಾಯಕರ ವಿರುದ್ಧ ಎರಡು ಎಫ್ಐಆರ್ಗಳನ್ನು ದಾಖಲಿಸಲಾಗಿದೆ ಮತ್ತು ಎಸಿಬಿ ನಡೆಸಿದ ದಾಳಿಗೆ ಅಡ್ಡಿಪಡಿಸಿದಕ್ಕಾಗಿ ಮೂರನೇ ಎಫ್ಐಆರ್ ದಾಖಲಿಸಲಾಗಿದೆ.
#WATCH | Delhi: Supporters of AAP MLA Amanatullah Khan manhandled an Anti Corruption Bureau official during raids at the residence of the AAP MLA in Jamia Nagar, on 16th September.
(Video Source: ACB) pic.twitter.com/dcyKv5LXTQ
— ANI (@ANI) September 18, 2022
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಜಿ ಕಾನೂನು ಸಚಿವ, ಖ್ಯಾತ ವಕೀಲ ಶಾಂತಿ ಭೂಷಣ್ ಇನ್ನಿಲ್ಲ

ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ಗೆ ದಾಖಲೆ ಹಸ್ತಾಂತರಿಸಿದ ಮಮತಾ ಬ್ಯಾನರ್ಜಿ

ಪಿಎಂ ಕೇರ್ಸ್ ಸರ್ಕಾರದ್ದಲ್ಲ, ಸ್ವತಂತ್ರ ದತ್ತಿ ಸಂಸ್ಥೆ!

ಅಪಪ್ರಚಾರಕ್ಕಾಗಿ ಬಿಬಿಸಿಗೆ ಚೀನಾದಿಂದ ಹಣಕಾಸು ನೆರವು? ಬಿಜೆಪಿ ಸಂಸದ ಮಹೇಶ್ ಜೇಠ್ಮಲಾನಿ

ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ: ಆರೋಪಿ ಶಂಕರ್ ಮಿಶ್ರಾಗೆ ಜಾಮೀನು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
