ಭೂಪಟದಲ್ಲಿ ಅಮರಾವತಿ ನಾಪತ್ತೆ: ಟಿಡಿಪಿ, ವೈಎಸ್ಆರ್ ವಾಕ್ಸಮರ
Team Udayavani, Nov 5, 2019, 12:54 AM IST
ಹೈದರಾಬಾದ್: ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ಗಳನ್ನು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಅಸ್ತಿತ್ವಕ್ಕೆ ತಂದ ಅನಂತರ, ಕೇಂದ್ರ ಸರಕಾರ ಬಿಡುಗಡೆ ಮಾಡಿರುವ ಭಾರತದ ಹೊಸ ಭೂಪಟದಲ್ಲಿ ಆಂಧ್ರಪ್ರದೇಶದ ಅಮರಾವತಿ ನಗರ ನಾಪತ್ತೆಯಾಗಿದೆ. ಇದು, ಅಲ್ಲಿನ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಾರ್ಟಿ (ವೈಎಸ್ಆರ್ಸಿಪಿ) ಹಾಗೂ ವಿಪಕ್ಷ ತೆಲುಗುದೇಶಂ ಪಾರ್ಟಿ (ಟಿಡಿಪಿ) ನಾಯಕರ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ.
ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಟಿಡಿಪಿ ವಕ್ತಾರ ವಾರ್ಲಾ ರಾಮಯ್ಯ, ‘ಅಮರಾವತಿಗೆ ಇರುವ ರಾಜಧಾನಿ ಸ್ಥಾನಮಾನವನ್ನು ಬೇರೆ ನಗರಕ್ಕೆ ವರ್ಗಾಯಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಹಾಗಾಗಿ, ಆ ನಗರವನ್ನು ಭೂಪಟದಿಂದ ನಾಪತ್ತೆ ಮಾಡಲಾಗಿದೆ” ಎಂದಿದ್ದಾರೆ.
ಮತ್ತೂಂದೆಡೆ, ಅಮರಾವತಿ ಜಿಲ್ಲೆಯ ಮಂಗಳಗಿರಿ ಕ್ಷೇತ್ರದ ಶಾಸಕ, ವೈಎಸ್ಸಾರ್ಸಿ ನಾಯಕ ಅಲ್ಲಾ ರಾಮಕೃಷ್ಣಾ ರೆಡ್ಡಿ ಮಾತನಾಡಿ, ‘ಭೂಪಟದಲ್ಲಿ ನಮ್ಮ ಜಿಲ್ಲೆ ನಾಪತ್ತೆಯಾಗಿರುವುದು ಬೇಸರ ತರಿಸಿದೆ. ಆದರೆ, ಈ ಎಲ್ಲ ಬೆಳವಣಿಗೆಗೆ ಈ ಹಿಂದಿನ ಸಿಎಂ ಚಂದ್ರಬಾಬು ನಾಯ್ಡುರವರೇ ಕಾರಣ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ