ಕಮಲಕ್ಕೆ ಕ್ಯಾಪ್ಟನ್ | ಇಂದು ಸಂಜೆ ಅಮಿತ್ ಶಾ-ಅಮರೀಂದರ್ ಭೇಟಿ?
Team Udayavani, Sep 28, 2021, 3:51 PM IST
ನವದೆಹಲಿ:ಪಂಜಾಬ್ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಬಿಜೆಪಿ ಪಕ್ಷ ಸೇರಲಿದ್ದಾರೆಯೇ ಎನ್ನುವ ಪ್ರಶ್ನೆ ಇದೀಗ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಇಂದು(ಸೆ.28) ಸಂಜೆ ಅಮರೀಂದರ್ ಸಿಂಗ್ ಅವರು ದೆಹಲಿಗೆ ಭೇಟಿ ನೀಡುತ್ತಿರುವುದು ಈ ವದಂತಿಗೆ ಕಾರಣವಾಗಿದೆ.
ಒಳಜಗಳದ ಕಾರಣವಾಗಿ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಅಮರೀಂದರ್ ರಾಜೀನಾಮೆ ನೀಡಿದ್ದು ಅವರ ಮುಂದಿನ ನಡೆ ಏನು ಎಂಬುದು ಕುತೂಹಲವಾಗಿ ಉಳಿದಿದೆ. ರಾಜೀನಾಮೆ ಬಳಿಕ ಮಾಧ್ಯಮಗಳಿಗೆ ಮಾತನಾಡಿದ್ದ ಅವರು ಕಾಂಗ್ರೆಸ್ ಪಕ್ಷದಿಂದ ಅವಮಾನಿತನಾದೆ ಎಂದು ಹೇಳಿದರು. ಹಾಗಾಗಿ ಆ ಪಕ್ಷದಲ್ಲಿ ಅವರು ಮುಂದುವರೆಯುವುದು ಅನುಮಾನ ಎನ್ನುವುದು ಬಹುತೇಕ ಖಚಿತವಾಗಿದೆ. ಈ ಹಿನ್ನೆಲೆ ಕ್ಯಾಪ್ಟನ್ ಅವರ ಮುಂದಿನ ರಾಜಕೀಯ ನಡೆ ಏನಿರಬಹುದು ಎಂದು ಎಲ್ಲರೂ ಕುತೂಹಲದ ಕಣ್ಣುಗಳಿಂದ ನೋಡುತ್ತಿದ್ದಾರೆ. ಇದರ ನಡುವೆ ಇಂದು ಅವರು ನವದೆಹಲಿಗೆ ತೆರಳುತ್ತಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನುವ ಮಾತು ಹರಿದಾಡುತ್ತಿದೆ.
ವದಂತಿಗೆ ತೆರೆ :
ಇನ್ನು ಅಮರೀಂದರ್ ದೆಹಲಿಗೆ ಭೇಟಿ ರಾಜಕೀಯ ಸ್ವರೂಪ ಪಡೆದಿದ್ದರಿಂದ ಈ ಬಗ್ಗೆ ಅವರ ಮಾಧ್ಯಮ ಸಲಹೆಗಾರ ರವೀನ ತುಕ್ರಾಲ್ ಸ್ಪಷ್ಟನೆ ನೀಡಿದ್ದಾರೆ. ಇದು ಖಾಸಗಿ ಭೇಟಿಯಾಗಿದ್ದು, ನವದೆಹಲಿಯಲ್ಲಿರುವ ಕೆಲವು ತಮ್ಮ ಸ್ನೇಹಿತರನ್ನು ಭೇಟಿ ಮಾಡಲಿದ್ದಾರಷ್ಟೆ ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ