ಅಮರನಾಥ ಯಾತ್ರಿಕರು ನಮ್ಮ ಗುರಿಯಲ್ಲ:ಹಿಜ್ಬುಲ್ ಕಮಾಂಡರ್ ವಿಡಿಯೋ
Team Udayavani, Jun 27, 2018, 10:14 AM IST
ಜಮ್ಮು: ಅಮರನಾಥ ಯಾತ್ರಿಕರು ಅತಿಥಿಗಳು, ಅವರು ನಮ್ಮ ಗುರಿಯಲ್ಲ ಎಂದು ಹಿಜ್ಬುಲ್ ಮುಜಾಯಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ರಿಯಾಜ್ ನಾಯ್ಕು ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ಅದೀಗ ವೈರಲ್ ಆಗಿದೆ.
ಯಾತ್ರಿಕರ ಮೇಲೆ ದಾಳಿಗೆ ಸಜ್ಜಾಗಿರುವ ವಿಚಾರವನ್ನು ತಳ್ಳಿ ಹಾಕಿರುವ ನಾಯ್ಕು ,
ನಾವು ಎಂದಿಗೂ ಯಾತ್ರಿಕರ ಮೇಲೆ ದಾಳಿ ಮಾಡಿಲ್ಲ. ಯಾತ್ರಿಕರು ನಮ್ಮ ಟಾರ್ಗೆಟ್ ಅಲ್ಲ, ಅವರು ಧಾರ್ಮಿಕ ಕಾರ್ಯಕ್ರಮಗಳಿಗಾಗಿ ಆಗಮಿಸುತ್ತಾರೆ. ಅವರು ಅತಿಥಿಗಳು ಎಂದಿದ್ದಾನೆ.
ನಾವು ಯಾತ್ರಿಕರ ನಡುವೆ ಸಂಘರ್ಷ ಹೊಂದಿಲ್ಲ. ಯಾರು ನಮ್ಮನ್ನು ಗನ್ ಹಿಡಿಯುವಂತೆ ಮಾಡಿದ್ದಾರೋ ಅವರ ವಿರುದ್ಧ ನಮ್ಮ ಹೋರಾಟ, ನಮ್ಮ ಹಕ್ಕುಗಳು ಮತ್ತು ಸ್ವಾತಂತ್ರ್ಯಕ್ಕಾಗಿ ನಾವು ನಿರಂತರ ಹೋರಾಟ ಮಾಡುವುದಾಗಿ ಹೇಳಿದ್ದಾನೆ.
ಆದರೆ ಈ ವಿಡಿಯೋವನ್ನು ಇದುವರಗೆ ಧೃಡಿಕರೀಸಲಾಗಿಲ್ಲ. ಪ್ರಸಕ್ತ ಸಾಲಿನ ಮೊದಲ ಬ್ಯಾಚ್ ಬುಧವಾರ ಬೆಳಗ್ಗೆ ಜಮ್ಮುವಿನ ಭಗವತಿ ನಗರದ ಬೇಸ್ ಕ್ಯಾಂಪ್ನಿಂದ ಅಮರನಾಥ ಯಾತ್ರೆ ಕೈಗೊಂಡ ವೇಳೆಯಲ್ಲೆ ಈ ವಿಡಿಯೋ ವೈರಲ್ಆಗಿದೆ.
ಉಗ್ರರ ದಾಳಿ ಸಾಧ್ಯತೆಯ ಹಿನ್ನೆಲೆಯಲ್ಲಿ ವ್ಯಾಪಕ ಭದ್ರತೆಯ ನಡುವೆ ಅಮರ ನಾಥ ಯಾತ್ರೆ ನಡೆಸಲಾಗುತ್ತಿದೆ.
ಪ್ರಸಕ್ತ ಸಾಲಿನಲ್ಲಿ ದೇಶದ ಎಲ್ಲಾ ಭಾಗಗಳಿಂದ 2 ಲಕ್ಷ ಮಂದಿ ಯಾತ್ರೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ ದೇಶದ ಬೇರೆ ಬೇರೆ ಭಾಗಗಳಿಂದ ಸಾಧುಗಳೂ ಪಾಲ್ಗೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್