Amarnath Yatra; ದೋಸೆಗಿಲ್ಲ ಅವಕಾಶ

ದೇಗುಲ ಮಂಡಳಿಯಿಂದ ಹಲವು ಆಹಾರ ವಸ್ತುಗಳಿಗೆ ನಿಷೇಧ

Team Udayavani, Jun 10, 2023, 8:20 AM IST

thumb-1

ನವದೆಹಲಿ/ಶ್ರೀನಗರ: ಪ್ರಸಕ್ತ ಸಾಲಿನ 62 ದಿನಗಳ ಅಮರನಾಥ ಯಾತ್ರೆ ಜು.1ರಿಂದ ಆ.31ರವರೆಗೆ ನಡೆಯಲಿದೆ. ಅದಕ್ಕೆ ಪೂರಕವಾಗಿ ಸಿದ್ಧತೆಗಳೂ ನಡೆದಿವೆ.

ಹಿಮಾಚ್ಛಾದಿತ ಪರ್ವತದಲ್ಲಿರುವ ದೇಗುಲದ ಆಡಳಿತ ಮಂಡಳಿ ಕೆಲವೊಂದು ಆಹಾರ ವಸ್ತುಗಳನ್ನು ತೆಗೆದುಕೊಂಡು ಬಾರದಂತೆ ನಿಷೇಧ ಹೇರಿದೆ. ದೋಸೆ, ಹಲ್ವಾ, ಪೂರಿ, ತಂಪು ಪಾನೀಯಗಳು, ಚೋಲಾ ಬಟುರೆ, ಜಿಲೇಬಿಗಳನ್ನು ನಿಷೇಧಿಸಿದೆ. ಹರ್ಬಲ್‌ ಟೀ, ಕಾಫಿ, ಕಡಿಮೆ ಪ್ರಮಾಣದಲ್ಲಿ ಫ್ಯಾಟ್‌ ಅಂಶ ಇರುವ ಹಾಲು, ಹಣ್ಣಿನ ಜ್ಯೂಸ್‌, ನಿಂಬೆ ಸ್ಕ್ವಾಶ್‌, ತರಕಾರಿ ಸೂಪ್‌ಗಳ ಬಳಕೆಗೆ ಅವಕಾಶ ನೀಡದೇ ಇರಲು ನಿರ್ಧರಿಸಲಾಗಿದೆ. ಗುಲಾಬ್‌ ಜಾಮೂನು, ಲಡ್ಡು, ಬರ್ಫಿ, ರಸಗುಲ್ಲ, ಕುರುಕುಲು ತಿಂಡಿಗಳು, ನಮ್‌ಕಿನ್‌, ಪಕೋಡ, ಸಮೋಸಗಳನ್ನೂ ನಿಷೇಧ ಪಟ್ಟಿಗೆ ಸೇರಿಸಲಾಗಿದೆ.

ಇದಲ್ಲದೆ, ಮದ್ಯ, ಮಾಂಸಾಹಾರ, ಗುಟ್ಕಾ, ಪಾನ್‌ಮಸಾಲಾ, ತಂಬಾಕು ಉತ್ಪನ್ನಗಳು, ಧೂಮಪಾನ ಹಾಗೂ ಮತ್ತೇರಿಸುವ ವಸ್ತುಗಳಿಗೆ ಅವಕಾಶ ಇಲ್ಲ. ಜತೆಗೆ 14 ಕಿಮೀ ದೂರ ನಡೆಯುವ ಸ್ಥಳದಲ್ಲಿ ಕೂಡ ಸ್ಥಾಪನೆಗೊಳ್ಳಲಿರುವ ತಾತ್ಕಾಲಿಕ ಮಳಿಗೆಗಳಿಗೆ ಕೂಡ ಇದೇ ನಿಯಮ ಅನ್ವಯಗೊಳಿಸಲಾಗಿದೆ.

ಯಾವುದಕ್ಕೆ ಅವಕಾಶ?: ಫ್ರೈಡ್‌ ರೈಸ್‌ಗೆ ಅವಕಾಶ ಕಲ್ಪಿಸಲಾಗಿಲ್ಲ. ಆದರೆ, ಅನ್ನದ ಸೇವನೆಗೆ ಅವಕಾಶ ಕಲ್ಪಿಸಲಾಗಿದೆ. ಪೋಹಾ, ಹುರಿದ ಕಡಲೆ, ಊತಪ್ಪ, ಇಡ್ಲಿ, ರೋಟಿ ಮತ್ತು ದಾಲ್‌, ಚಾಕೋಲೇಟ್‌, ಖೀರ್‌, ಓಟ್ಸ್‌, ಡ್ರೈಫ್ರೂಟ್ಸ್‌, ಜೇನು, ಬಿಸಿಯಾಗಿರುವ ಸಿಹಿ ತಿನಸುಗಳನ್ನು ಸೇವಿಸಲು ಅವಕಾಶ ಕಲ್ಪಿಸಲಾಗಿದೆ.

ಶಾ ನೇತೃತ್ವದಲ್ಲಿ ಸಭೆ: ಇದೇ ವೇಳೆ, ನವದೆಹಲಿಯಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್‌ ಶಾ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆ, ಯಾತ್ರಾರ್ಥಿಗಳಿಗೆ ಒದಗಿಸಬೇಕಾದ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಬಾಲ್ತಾಲ್‌ ಮತ್ತು ಪೆಹಲ್ಗಾಂವ್‌ ಮೂಲಕ ಪವಿತ್ರ ಕ್ಷೇತ್ರಕ್ಕೆ ತೆರಳುವ ದಾರಿಯಲ್ಲಿ ಸದ್ಯ ಭಾರೀ ಪ್ರಮಾಣದಲ್ಲಿ ಹಿಮಪಾತ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಾರ್ಡರ್‌ ರೋಡ್‌ ಆರ್ಗನೈಸೇಷನ್‌ (ಬಿಆರ್‌ಒ)ಗೆ ಜೂ.15ರ ಒಳಗಾಗಿ ರಸ್ತೆಗಳನ್ನು ದುರಸ್ತಿಗೊಳಿಸಿ, ಸಿದ್ಧಗೊಳಿಸುವ ಕಾರ್ಯದ ಹೊಣೆಯನ್ನು ವಹಿಸಲಾಗಿದೆ. ಕಳೆದ ವರ್ಷ 3.45 ಲಕ್ಷ ಮಂದಿ ಭಕ್ತರು ಯಾತ್ರೆ ಕೈಗೊಂಡಿದ್ದರು. ಪ್ರಸಕ್ತ ವರ್ಷ 5 ಲಕ್ಷ ಮಂದಿ ಆಗುವ ಸಾಧ್ಯತೆಗಳು ಇವೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (ಎನ್‌ಡಿಆರ್‌ಎಫ್) ಯಾವ ಸ್ಥಳದಲ್ಲಿ ತಾತ್ಕಾಲಿಕ ಟೆಂಟ್‌ಗಳನ್ನು ಹಾಕಬೇಕು ಎಂಬುದರ ಬಗ್ಗೆ ಸ್ಥಳ ಪರಿಶೀಲನೆಯನ್ನು ನಡೆಸುತ್ತಿದೆ. ಹಠಾತ್‌ ಪ್ರವಾಹ ಪರಿಸ್ಥಿತಿ ಉಂಟಾದರೆ, ಯಾತ್ರಾರ್ಥಿಗಳನ್ನು ರಕ್ಷಿಸಲು ಭಾರತೀಯ ವಾಯುಪಡೆ (ಐಎಎಫ್)ಯ ವಿಮಾನಗಳನ್ನೂ ನಿಯೋಜಿಸಲು ತೀರ್ಮಾನಿಸಲಾಗಿದೆ.

 

ಟಾಪ್ ನ್ಯೂಸ್

1-fdwewq

Gujarat ; ಕುಸಿದು ಬಿದ್ದ ಹಳೆಯ ಸೇತುವೆ: ಕನಿಷ್ಠ 6 ಮಂದಿ ನೀರುಪಾಲು ಶಂಕೆ

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

1-asdasd

Jog Falls ಸಮೀಪದ ದೇವಿಗುಂಡಿಯಲ್ಲಿ ಇಬ್ಬರು ನೀರುಪಾಲು

1-asdsad

Kannada in UK ; ಲಂಡನ್ ನಲ್ಲಿ ಮೊಳಗಲಿರುವ ಕನ್ನಡ ಬಳಗದ ಡಿಂಡಿಮ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

gautam

World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-fdwewq

Gujarat ; ಕುಸಿದು ಬಿದ್ದ ಹಳೆಯ ಸೇತುವೆ: ಕನಿಷ್ಠ 6 ಮಂದಿ ನೀರುಪಾಲು ಶಂಕೆ

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

Ra

Congress ಛತ್ತೀಸ್‌ಗಢ, ಮಧ್ಯಪ್ರದೇಶದಲ್ಲಿ ಗೆಲ್ಲುವುದು ಖಚಿತ, ರಾಜಸ್ಥಾನದಲ್ಲಿ…: ರಾಹುಲ್

Vande Bharat; ಭಾರತೀಯ ರೈಲ್ವೆಯ ಪರಿವರ್ತನೆಗಾಗಿ ನಮ್ಮ ಸರ್ಕಾರದ ಕೆಲಸ: ಪ್ರಧಾನಿ ಮೋದಿ

Vande Bharat; ಭಾರತೀಯ ರೈಲ್ವೆಯ ಪರಿವರ್ತನೆಗಾಗಿ ನಮ್ಮ ಸರ್ಕಾರದ ಕೆಲಸ: ಪ್ರಧಾನಿ ಮೋದಿ

Brij Bhushan Singh harassed wrestlers at every opportunity: Delhi Police to court

WrestlersCase ಅವಕಾಶ ಸಿಕ್ಕಾಗೆಲ್ಲಾ ಬ್ರಿಜ್ ಭೂಷಣ್ ಕಿರುಕುಳ:ಕೋರ್ಟ್ ನಲ್ಲಿ ದೆಹಲಿಪೊಲೀಸರು

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

1-fdwewq

Gujarat ; ಕುಸಿದು ಬಿದ್ದ ಹಳೆಯ ಸೇತುವೆ: ಕನಿಷ್ಠ 6 ಮಂದಿ ನೀರುಪಾಲು ಶಂಕೆ

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

1-dasdsad

Bhatkal: ಸಚಿವ ಮಂಕಾಳ ವೈದ್ಯ ಅವರ ಕಾರ್ಯಾಲಯ ಆರಂಭ; ಜನಜಂಗುಳಿ

1-asdasd

Jog Falls ಸಮೀಪದ ದೇವಿಗುಂಡಿಯಲ್ಲಿ ಇಬ್ಬರು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.