Amarnath Yatra; ದೋಸೆಗಿಲ್ಲ ಅವಕಾಶ

ದೇಗುಲ ಮಂಡಳಿಯಿಂದ ಹಲವು ಆಹಾರ ವಸ್ತುಗಳಿಗೆ ನಿಷೇಧ

Team Udayavani, Jun 10, 2023, 8:20 AM IST

thumb-1

ನವದೆಹಲಿ/ಶ್ರೀನಗರ: ಪ್ರಸಕ್ತ ಸಾಲಿನ 62 ದಿನಗಳ ಅಮರನಾಥ ಯಾತ್ರೆ ಜು.1ರಿಂದ ಆ.31ರವರೆಗೆ ನಡೆಯಲಿದೆ. ಅದಕ್ಕೆ ಪೂರಕವಾಗಿ ಸಿದ್ಧತೆಗಳೂ ನಡೆದಿವೆ.

ಹಿಮಾಚ್ಛಾದಿತ ಪರ್ವತದಲ್ಲಿರುವ ದೇಗುಲದ ಆಡಳಿತ ಮಂಡಳಿ ಕೆಲವೊಂದು ಆಹಾರ ವಸ್ತುಗಳನ್ನು ತೆಗೆದುಕೊಂಡು ಬಾರದಂತೆ ನಿಷೇಧ ಹೇರಿದೆ. ದೋಸೆ, ಹಲ್ವಾ, ಪೂರಿ, ತಂಪು ಪಾನೀಯಗಳು, ಚೋಲಾ ಬಟುರೆ, ಜಿಲೇಬಿಗಳನ್ನು ನಿಷೇಧಿಸಿದೆ. ಹರ್ಬಲ್‌ ಟೀ, ಕಾಫಿ, ಕಡಿಮೆ ಪ್ರಮಾಣದಲ್ಲಿ ಫ್ಯಾಟ್‌ ಅಂಶ ಇರುವ ಹಾಲು, ಹಣ್ಣಿನ ಜ್ಯೂಸ್‌, ನಿಂಬೆ ಸ್ಕ್ವಾಶ್‌, ತರಕಾರಿ ಸೂಪ್‌ಗಳ ಬಳಕೆಗೆ ಅವಕಾಶ ನೀಡದೇ ಇರಲು ನಿರ್ಧರಿಸಲಾಗಿದೆ. ಗುಲಾಬ್‌ ಜಾಮೂನು, ಲಡ್ಡು, ಬರ್ಫಿ, ರಸಗುಲ್ಲ, ಕುರುಕುಲು ತಿಂಡಿಗಳು, ನಮ್‌ಕಿನ್‌, ಪಕೋಡ, ಸಮೋಸಗಳನ್ನೂ ನಿಷೇಧ ಪಟ್ಟಿಗೆ ಸೇರಿಸಲಾಗಿದೆ.

ಇದಲ್ಲದೆ, ಮದ್ಯ, ಮಾಂಸಾಹಾರ, ಗುಟ್ಕಾ, ಪಾನ್‌ಮಸಾಲಾ, ತಂಬಾಕು ಉತ್ಪನ್ನಗಳು, ಧೂಮಪಾನ ಹಾಗೂ ಮತ್ತೇರಿಸುವ ವಸ್ತುಗಳಿಗೆ ಅವಕಾಶ ಇಲ್ಲ. ಜತೆಗೆ 14 ಕಿಮೀ ದೂರ ನಡೆಯುವ ಸ್ಥಳದಲ್ಲಿ ಕೂಡ ಸ್ಥಾಪನೆಗೊಳ್ಳಲಿರುವ ತಾತ್ಕಾಲಿಕ ಮಳಿಗೆಗಳಿಗೆ ಕೂಡ ಇದೇ ನಿಯಮ ಅನ್ವಯಗೊಳಿಸಲಾಗಿದೆ.

ಯಾವುದಕ್ಕೆ ಅವಕಾಶ?: ಫ್ರೈಡ್‌ ರೈಸ್‌ಗೆ ಅವಕಾಶ ಕಲ್ಪಿಸಲಾಗಿಲ್ಲ. ಆದರೆ, ಅನ್ನದ ಸೇವನೆಗೆ ಅವಕಾಶ ಕಲ್ಪಿಸಲಾಗಿದೆ. ಪೋಹಾ, ಹುರಿದ ಕಡಲೆ, ಊತಪ್ಪ, ಇಡ್ಲಿ, ರೋಟಿ ಮತ್ತು ದಾಲ್‌, ಚಾಕೋಲೇಟ್‌, ಖೀರ್‌, ಓಟ್ಸ್‌, ಡ್ರೈಫ್ರೂಟ್ಸ್‌, ಜೇನು, ಬಿಸಿಯಾಗಿರುವ ಸಿಹಿ ತಿನಸುಗಳನ್ನು ಸೇವಿಸಲು ಅವಕಾಶ ಕಲ್ಪಿಸಲಾಗಿದೆ.

ಶಾ ನೇತೃತ್ವದಲ್ಲಿ ಸಭೆ: ಇದೇ ವೇಳೆ, ನವದೆಹಲಿಯಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್‌ ಶಾ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆ, ಯಾತ್ರಾರ್ಥಿಗಳಿಗೆ ಒದಗಿಸಬೇಕಾದ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಬಾಲ್ತಾಲ್‌ ಮತ್ತು ಪೆಹಲ್ಗಾಂವ್‌ ಮೂಲಕ ಪವಿತ್ರ ಕ್ಷೇತ್ರಕ್ಕೆ ತೆರಳುವ ದಾರಿಯಲ್ಲಿ ಸದ್ಯ ಭಾರೀ ಪ್ರಮಾಣದಲ್ಲಿ ಹಿಮಪಾತ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಾರ್ಡರ್‌ ರೋಡ್‌ ಆರ್ಗನೈಸೇಷನ್‌ (ಬಿಆರ್‌ಒ)ಗೆ ಜೂ.15ರ ಒಳಗಾಗಿ ರಸ್ತೆಗಳನ್ನು ದುರಸ್ತಿಗೊಳಿಸಿ, ಸಿದ್ಧಗೊಳಿಸುವ ಕಾರ್ಯದ ಹೊಣೆಯನ್ನು ವಹಿಸಲಾಗಿದೆ. ಕಳೆದ ವರ್ಷ 3.45 ಲಕ್ಷ ಮಂದಿ ಭಕ್ತರು ಯಾತ್ರೆ ಕೈಗೊಂಡಿದ್ದರು. ಪ್ರಸಕ್ತ ವರ್ಷ 5 ಲಕ್ಷ ಮಂದಿ ಆಗುವ ಸಾಧ್ಯತೆಗಳು ಇವೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (ಎನ್‌ಡಿಆರ್‌ಎಫ್) ಯಾವ ಸ್ಥಳದಲ್ಲಿ ತಾತ್ಕಾಲಿಕ ಟೆಂಟ್‌ಗಳನ್ನು ಹಾಕಬೇಕು ಎಂಬುದರ ಬಗ್ಗೆ ಸ್ಥಳ ಪರಿಶೀಲನೆಯನ್ನು ನಡೆಸುತ್ತಿದೆ. ಹಠಾತ್‌ ಪ್ರವಾಹ ಪರಿಸ್ಥಿತಿ ಉಂಟಾದರೆ, ಯಾತ್ರಾರ್ಥಿಗಳನ್ನು ರಕ್ಷಿಸಲು ಭಾರತೀಯ ವಾಯುಪಡೆ (ಐಎಎಫ್)ಯ ವಿಮಾನಗಳನ್ನೂ ನಿಯೋಜಿಸಲು ತೀರ್ಮಾನಿಸಲಾಗಿದೆ.

 

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.