ಉಗ್ರರ ದಾಳಿ ಬೆದರಿಕೆ, ಅಮರನಾಥ ಯಾತ್ರೆ ರದ್ದುಗೊಳಿಸಿ; ಜಮ್ಮು ಸರಕಾರ ಆದೇಶ
Team Udayavani, Aug 2, 2019, 4:30 PM IST
ಶ್ರೀನಗರ: ಗುಪ್ತಚರ ಇಲಾಖೆಯ ಮುನ್ನೆಚ್ಚರಿಕೆಯಂತೆ ದಾಳಿ ಬೆದರಿಕೆಯ ಹಿನ್ನೆಲೆಯಲ್ಲಿ ಅಮರನಾಥ ಯಾತ್ರಾರ್ಥಿಗಳು ಮತ್ತು ಪ್ರವಾಸಿಗರು ಶೀಘ್ರವೇ ರಾಜ್ಯ ಬಿಟ್ಟು ತೆರಳಬೇಕು ಎಂದು ಜಮ್ಮು-ಕಾಶ್ಮೀರ ಸರಕಾರ ಶುಕ್ರವಾರ ವಿನಂತಿ ಮಾಡಿಕೊಂಡಿದೆ.
ಅಮರನಾಥ ಯಾತ್ರಾರ್ಥಿಗಳನ್ನು ಗುರಿಯಾಗಿರಿಸಿಕೊಂಡು ಭಯೋತ್ಪಾದಕರು ದಾಳಿ ನಡೆಸುವ ಸಾಧ್ಯತೆ ಇದ್ದಿರುವುದಾಗಿ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಅಲ್ಲದೇ ಕಾಶ್ಮೀರ ಕಣಿವೆಯಲ್ಲಿ ಹೆಚ್ಚುವರಿ ಭದ್ರತೆ ಕೈಗೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಅಮರನಾಥ ಯಾತ್ರಾರ್ಥಿಗಳ, ಪ್ರವಾಸಿಗರ ಸುರಕ್ಷತೆ ಮತ್ತು ಭದ್ರತೆಯ ದೃಷ್ಟಿಯ ಕಾರಣದಿಂದ ಕೂಡಲೇ ವಾಪಸ್ ತೆರಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.
ಅಮರನಾಥ ಯಾತ್ರಾರ್ಥಿಗಳ ಮೇಲೆ ದಾಳಿ ನಡೆಸಲು ಪಾಕಿಸ್ತಾನ ಬೆಂಬಲಿತ ಉಗ್ರರು ಸಂಚು ರೂಪಿಸಿರುವುದನ್ನು ಗುಪ್ತಚರ ಇಲಾಖೆ ವರದಿ ಖಚಿತಪಡಿಸಿದೆ. ಅಲ್ಲದೇ ಶುಕ್ರವಾರ ಅಮರನಾಥ ಯಾತ್ರಾರ್ಥಿಗಳ ತೆರಳುವ ದಾರಿಯಲ್ಲಿ ಶಸ್ತ್ರಾಸ್ತ್ರ, ನೆಲ ಬಾಂಬ್ ದೊರೆತಿರುವುದಾಗಿ ಸೇನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ