![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಪೆಹಲ್ಗಾಂವ್ ಮಾರ್ಗದ ಮೂಲಕ ಅಮರನಾಥ ಯಾತ್ರೆ ಪುನರಾರಂಭ
Team Udayavani, Jul 6, 2018, 12:15 PM IST
![amarnath-yatra-800.jpg](https://www.udayavani.com/wp-content/uploads/2018/07/6/amarnath-yatra-800-620x465.jpg)
ಶ್ರೀನಗರ : ಎರಡು ದಿನಗಳ ಬಳಿಕ ಅಮರನಾಥ ಯಾತ್ರೆ ಇಂದು ಪೆಹಲ್ಗಾಂವ್ ಮಾರ್ಗದ ಮೂಲಕ ಪುನರಾರಂಭಗೊಂಡಿದೆ.
ಇದೇ ವೇಳೆ ಭೂಕುಸಿತದ ಕಾರಣಕ್ಕೆ ಅಮಾನತುಗೊಂಡಿದ್ದ ಬಲ್ತಾಲ್ ಮಾರ್ಗದ ಮೂಲಕ ಸಾಗಿದ್ದ ಅಮರನಾಥ ಯಾತ್ರೆ ಇಂದು ನಿರಂತರ ಮೂರನೇ ದಿನ ಕೂಡ ಸ್ಥಗಿತಗೊಂಡೇ ಇದೆ.
ಈ ಎರಡೂ ಮಾರ್ಗಗಳ ಮೂಲಕ ಸಾಗಿದ್ದ ಅಮರನಾಥ ಯಾತ್ರೆಯನ್ನು ಕಳೆದ ಬುಧವಾರ ಅನೇಕ ಕಡೆಗಳಲ್ಲಿನ ಭೂಕುಸಿತ ಮತ್ತು ಬೆಟ್ಟಗಳಿಂದ ಬಂಡೆ ಕಲ್ಲುಗಳು ಜಾರಿ ಉರುಳಿಕೊಂಡು ರಸ್ತೆಗೆ ಬರುತ್ತಿದ್ದ ಕಾರಣ ಸ್ಥಗಿತಗೊಳಿಸಲಾಗಿತ್ತು.
ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿನ ಪೆಹಲ್ಗಾಂವ್ ಮಾರ್ಗದ ಮೂಲಕ ಅಮರನಾಥ ಯಾತ್ರೆ ಇಂದು ಬೆಳಗ್ಗೆ ಪುನರಾರಂಭಗೊಂಡಿತು ಎಂದು ಶ್ರೀ ಅಮರನಾಥ ದೇವಾಲಯ ಮಂಡಳಿ (ಎಸ್ಎಎಸ್ಬಿ) ವಕ್ತಾರ ಹೇಳಿದರು.
ಆದರೆ ಗುಂದರ್ಬಾಲ್ ಜಿಲ್ಲೆಯ ಬಲ್ತಾಲ್ ಮಾರ್ಗದ ಮೂಲಕ ಸಾಗುತ್ತಿದ್ದ ಅಮರನಾಥ ಯಾತ್ರೆ ಇಂದು ನಿರಂತರ ಮೂರನೇ ದಿನ ಕೂಡ ಸ್ಥಗಿತಗೊಂಡ ಸ್ಥಿತಿಯಲ್ಲೇ ಉಳಿದಿದೆ ಎಂದವರು ಹೇಳಿದರು.
ಬಲ್ತಾಲ್ ಮಾರ್ಗದಲ್ಲಿ ಬ್ರಾರಿಮಾರ್ಗ್ ಮತ್ತು ರಾಯಿಲ್ಪಾತ್ರಿ ನಡುವೆ ಸಂಭವಿಸಿದ ಭೂಕುಸಿತದಿಂದಾಗಿ ಕಳೆದ ಮಂಗಳವಾರ ಮೂವರು ಯಾತ್ರಿಕರು ಮೃತಪಟ್ಟು ಇತರ ನಾಲ್ವರು ಗಾಯಗೊಂಡರೆಂದು ವಕ್ತಾರ ತಿಳಿಸಿದರು.
ಪಶ್ಚಿಮ ಬಂಗಾಲದ ಸಂಜಯ್ ಸಾಂತ್ರಾ ಎಂಬವರು ಅಮರನಾಥ ದೇಗುಲಕ್ಕೆ ಸಮೀಪವೇ ಹೃತ್ಕ್ರಿಯೆ ನಿಂತು ನಿಧನಹೊಂದಿದರು ಎಂದು ಅಧಿಕಾರಿ ತಿಳಿಸಿದರು. ಈ ವರ್ಷ ಜೂನ್ 28ರಿಂದ ಅಮರನಾಥ ಯಾತ್ರೆ ಆರಂಭಗೊಂಡ ಬಳಿಕದಲ್ಲಿ ಈ ವರೆಗೆ ಆರು ಮಂದಿ ಹೃತ್ಕ್ರಿಯೆ ನಿಂತು ಮೃತಪಟ್ಟಿದ್ದಾರೆ; ಆ ಮೂಲಕ ಮೃತರ ಒಟ್ಟು ಸಂಖ್ಯೆ 12 ಆಗಿದೆ ಎಂದವರು ಹೇಳಿದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.