ರೈಲು ನಿಲ್ದಾಣಕ್ಕೆ ಗಾಳಿಯಿಂದ ನೀರು
Team Udayavani, May 22, 2018, 6:00 AM IST
ನವದೆಹಲಿ: ಒಡಿಶಾದ ರಾಜಧಾನಿಯಿಂದ 460 ಕಿ.ಮೀ ದೂರದ ರೌಲಿ ಎಂಬ ಕುಗ್ರಾಮದಲ್ಲಿರುವ ರೈಲ್ವೆ ನಿಲ್ದಾಣದಲ್ಲಿ ನೀರಿನ ಸಮಸ್ಯೆ ವ್ಯಾಪಕವಾಗಿದೆ. ಬೋರ್ವೆಲ್ ಕೊರೆಯಲಾಗಿದ್ದರೂ ನೀರಿನ ಸೆಲೆಯೇ ಇಲ್ಲ. ಹೀಗಾಗಿ ಇದೀಗ ಗಾಳಿಯಿಂದ ನೀರನ್ನು ಸೆರೆಹಿಡಿಯುವ ಯಂತ್ರವನ್ನು ಅಳವಡಿಸಲಾಗಿದೆ. ವಾತಾವರಣದಲ್ಲಿನ ತೇವಾಂಶವನ್ನು ಈ ಯಂತ್ರವು ಸೆರೆಹಿಡಿದು, ನೀರನ್ನು ಸಂಗ್ರಹಿಸುತ್ತದೆ. ಏಪ್ರಿಲ್ 25ರಂದು ಈ ಯಂತ್ರವನ್ನು ಸ್ಥಾಪಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸಿದೆ. ಇಲ್ಲಿ ಪ್ರತಿ ದಿನ ಮೂರು ರೈಲುಗಳು ನಿಲ್ಲುತ್ತವೆ. ಇದೇ ತಂತ್ರವನ್ನು ನೀರಿನ ಕೊರತೆ ಇರುವ ಇತರ ರೈಲು ನಿಲ್ದಾಣಗಳಲ್ಲೂ ಅಳವಡಿಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ಈಸ್ಟ್ ಕೋಸ್ಟ್ ರೈಲ್ವೆ ಪ್ರಧಾನ ವ್ಯವಸ್ಥಾಪಕ ಉಮೇಶ್ ಸಿಂಗ್ ಹೇಳಿದ್ದಾರೆ.
ಈ ಯಂತ್ರವು 30-35 ಡಿಗ್ರಿ ತಾಪಮಾನದಲ್ಲಿ ಒಂದು ದಿನದಲ್ಲಿ 120 ಲೀಟರ್ ನೀರನ್ನು ಉತ್ಪಾದಿಸಬಲ್ಲದು. ಯಂತ್ರಕ್ಕೆ 2 ಲಕ್ಷ ರೂ. ವೆಚ್ಚವಾಗುತ್ತದೆ. ಇದಕ್ಕೂ ಮೊದಲು ಸಮೀಪದಲ್ಲಿ ಹರಿಯುತ್ತಿದ್ದ ತೊರೆಯ ನೀರನ್ನು ಬಳಸಲಾಗುತ್ತಿತ್ತು. ಆದರೆ ಇದು ಕುಡಿಯುವುದಕ್ಕೆ ಸೂಕ್ತವಾಗಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ