ಕಳವಳ: ಕೋವಿಡ್ ನಿರ್ವಹಣೆ ಕುರಿತು ರಾಷ್ಟ್ರೀಯ ಯೋಜನೆ ವರದಿ ಕೊಡಿ: ಕೇಂದ್ರಕ್ಕೆ ಸುಪ್ರೀಂ
ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ, ಶುಕ್ರವಾರ(ಏಪ್ರಿಲ್ 23)ಸುಮೊಟೊ ಪ್ರಕರಣದ ವಿಚಾರಣೆ ನಡೆಸುವುದಾಗಿ ಹೇಳಿದೆ.
Team Udayavani, Apr 22, 2021, 3:06 PM IST
ನವದೆಹಲಿ: ದೇಶದಲ್ಲಿ ಕೋವಿಡ್ ಎರಡನೇ ಅಲೆ ಕ್ಷಿಪ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಸೋಂಕಿಗೆ ಒಳಗಾದ ರೋಗಿಗಳಿಗೆ ಅಗತ್ಯವಿರುವ ಔಷಧಗಳ ಪೂರೈಕೆ, ಆಕ್ಸಿಜನ್ ಸರಬರಾಜು ಸೇರಿದಂತೆ ರಾಷ್ಟ್ರೀಯ ಯೋಜನೆ ವರದಿಯನ್ನು ನೀಡುವಂತೆ ಸುಪ್ರೀಂಕೋರ್ಟ್ ಗುರುವಾರ(ಏಪ್ರಿಲ್ 22) ಕೇಂದ್ರ ಸರಕಾರಕ್ಕೆ ಸೂಚಿಸಿದೆ.
ಭಾರತದಲ್ಲಿ ಕೋವಿಡ್ 19 ಸೋಂಕು ಪರಿಸ್ಥಿತಿ ಹೆಚ್ಚಳವಾಗುತ್ತಿದ್ದು, ಈ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ಸುಮೊಟೊ ಪ್ರಕರಣ ದಾಖಲಿಸಿಕೊಂಡಿದೆ. ಸುಪ್ರೀಂಕೋರ್ಟ್ ಸಿಜೆಐ ಎಸ್ ಎ ಬೋಬ್ಡೆ ನೇತೃತ್ವದ ಪೀಠ, ದೇಶದಲ್ಲಿ ಕೋವಿಡ್ 19 ಲಸಿಕೆಯ ವಿತರಣೆ ಮತ್ತು ನಿರ್ವಹಣೆ ಕುರಿತು ವಿಚಾರಣೆ ವೇಳೆ ಪರಿಗಣಿಸುವುದಾಗಿ ತಿಳಿಸಿದೆ.
ಸಿಜೆಐ ಬೋಬ್ಡೆ, ಜಸ್ಟೀಸ್ ಎಲ್ ಎನ್ ರಾವ್ ಮತ್ತು ಜಸ್ಟೀಸ್ ಎಸ್ ಆರ್ ಭಟ್ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ನ ತ್ರಿಸದಸ್ಯ ಪೀಠ, ಸೋಂಕು ಹೆಚ್ಚಳವಾಗುತ್ತಿರುವ ಪರಿಣಾಮ ಲಾಕ್ ಡೌನ್ ಘೋಷಿಸುವ ಅಧಿಕಾರ ಹೈಕೋರ್ಟ್ ಗಳಿಗೆ ಇದೆಯೇ ಎಂಬ ಕುರಿತು ಪರಿಶೀಲಿಸುವುದಾಗಿ ಅಭಿಪ್ರಾಯವ್ಯಕ್ತಪಡಿಸಿದೆ.
ಕೋವಿಡ್ ಪರಿಸ್ಥಿತಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ, ಶುಕ್ರವಾರ(ಏಪ್ರಿಲ್ 23)ಸುಮೊಟೊ ಪ್ರಕರಣದ ವಿಚಾರಣೆ ನಡೆಸುವುದಾಗಿ ಹೇಳಿದೆ.
ಒಂದು ಪೀಠವಾಗಿ, ಕೋರ್ಟ್ ಆಗಿ ಇಂತಹ ವಿಚಾರಗಳಲ್ಲಿ ಸುಮೊಟೊ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಬಹುದಾಗಿದೆ ಎಂದು ಸುಪ್ರೀಂ ತ್ರಿಸದಸ್ಯ ಪೀಠ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾಗೆ ತಿಳಿಸಿದೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ