ವಿವಾದಗಳ ಬೆನ್ನಲ್ಲೇ ಸಿಎಂ ಯೋಗಿಯಿಂದ ತಾಜ್ಮಹಲ್ಗೆ ಭೇಟಿ
Team Udayavani, Oct 26, 2017, 10:29 AM IST
ಆಗ್ರಾ: ಐತಿಹಾಸಿಕ ಸ್ಮಾರಕದ ಸ್ಥಿತಿಗತಿಯ ಕುರಿತಾಗಿ ವ್ಯಾಪಕ ಚರ್ಚೆ ನಡೆಯುತ್ತಿರುವ ವೇಳೆಯಲ್ಲೇ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗುರುವಾರ ತಾಜ್ಮಹಲ್ಗೆ ಭೇಟಿ ನೀಡುತ್ತಿದ್ದಾರೆ.
ಆದಿತ್ಯನಾಥ್ ಅವರು ತಾಜ್ಮಹಲ್ ಪ್ರವೇಶಿಸಿದ ಉತ್ತರಪ್ರದೇಶದ ಪ್ರಥಮ ಬಿಜೆಪಿ ಮುಖ್ಯಮಂತ್ರಿ ಎನಿಸಿಕೊಂಡಿದ್ದಾರೆ.
ತಾಜ್ ಭೇಟಿ ವೇಳೆ ಸಿಎಂ ಯೋಗಿ ಅವರು ಸೌಧದ ಒಳಗಿನ ಎಲ್ಲಾ ಪ್ರದೇಶಗಳನ್ನು ವೀಕ್ಷಿಸಲಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವನೀಶ್ ಅವಸ್ಥಿ ತಿಳಿಸಿದ್ದಾರೆ.
ಸಿಎಂ ಭೇಟಿಗೂ ಮುನ್ನ ತಾಜ್ ಸುತ್ತಲೂ ನೂರಾರು ಬಿಜೆಪಿ ಕಾರ್ಯಕರ್ತರು ಮತ್ತು ಸಮಾಜ ಸೇವಕರು ಸ್ವಚ್ಛತಾ ಆಂದೋಲನ ನಡೆಸುತ್ತಿದ್ದಾರೆ. ಆಗ್ರಾದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಯೋಗಿ ಚಾಲನೆ ನೀಡಲಿದ್ದಾರೆ. ಆಗ್ರಾದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಬರೋಬ್ಬರಿ 370 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿದ್ದಾರೆ.
ಪ್ರೇಮ ಸ್ಮಾರಕವಾಗಿರುವ 17ನೇ ಶತಮಾನದ ವಿಶ್ವ ಪ್ರಸಿದ್ಧ ಮೊಘಲ್ ಕಾಲದ ತಾಜ್ ಮಹಲ್, ಶಿವ ದೇವಾಲಯಗಿತ್ತು ಎಂದು ಸಾಬೀತು ಪಡಿಸುವುದಕ್ಕೆ ಯಾವುದೇ ದೃಢವಾದ ಸಾಕ್ಷ್ಯಾಧಾರಗಳು ಇಲ್ಲವೆಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿತ್ತು.
1983ರಲ್ಲಿ ಯುನೆಸ್ಕೋ ತಾಜ್ಮಹಲ್ ವಿಶ್ವ ಪಾರಂಪರಿಕ ತಾಣವೆಂದು ಮಾನ್ಯತೆ ನೀಡಿತ್ತು. ವಾರ್ಷಿಕ 30 ಲಕ್ಷ ಪ್ರವಾಸಿಗರನ್ನು ಹರಿದುಬರುತ್ತಿದ್ದ ಹೊರತಾಗಿಯೂ ಯೋಗಿ ಸರಕಾರ ಸಾಂಸ್ಕೃತಿಕ ಪರಂಪರೆಯ ಕೇಂದ್ರಗಳ ಪಟ್ಟಿಯಿಂದ ತಾಜ್ಮಹಲನ್ನು ಕೈಬಿಟ್ಟಿರುವುದು ಭಾರೀ ವಿವಾದ ಎಬ್ಬಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್ ಆಡಲಿ: ಪೊವೆಲ್
MUST WATCH
ಹೊಸ ಸೇರ್ಪಡೆ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
UV Fusion: ಇಂಡಿ ಪಂಪ್ ಮಟ..
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ