ಬುದ್ಧಿಜೀವಿಗಳ ಇಬ್ಬಗೆ ನೀತಿ: ಬಿಜೆಪಿ ಆಂದೋಲನ
Team Udayavani, Jul 12, 2017, 3:00 AM IST
ಕೋಲ್ಕತಾ: ಪಶ್ಚಿಮಬಂಗಾಲದಲ್ಲಿ ಕೆಲವು ಬುದ್ಧಿಜೀವಿಗಳ ಇಬ್ಬಗೆ ನೀತಿಯ ವಿರುದ್ಧ ಬಿಜೆಪಿ ಮತ್ತು ಆರ್ಎಸ್ಎಸ್ ಆಂದೋಲನ ನಡೆಸಲು ನಿರ್ಧರಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಾಹುಲ್ ಸಿನ್ಹಾ ಹೇಳಿದ್ದಾರೆ. ಬಿಜೆಪಿ ಮೇಲೆ ಇಲ್ಲ ಸಲ್ಲದ ಆರೋಪ ಮಾಡುವ ಜನರು ಉತ್ತರ ಪರಗಣ ಜಿಲ್ಲೆಯಲ್ಲಿನ ಬಸಿರ್ಹಾಟ್ ಗಲಭೆಯ ಬಗ್ಗೆ ಯಾಕೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸದೆ ಮೌನವಾಗಿದ್ದಾರೆ ಎಂದು ಅವರು ಪ್ರಶ್ನಿಸಿದ್ದಾರೆ. ಯೋಗಿ ಆದಿತ್ಯನಾಥ್ ಯುಪಿ ಸಿಎಂ ಆಗಿರುವುದನ್ನು ಸಹಿಸದೆ, ಖಂಡಿಸಿ ಕವಿತೆ ಬರೆಯುತ್ತಾರೆ. ಆದರೆ ಬಹುಸಂಖ್ಯಾತರನ್ನು ಗುರಿ ಮಾಡಿ ದಾಳಿ ಮಾಡಿದಾಗ ಇವರು ಯಾವುದೇ ಪ್ರತಿಕ್ರಿಯೆ ನೀಡದೆ ಮೌನವಾಗಿ ಇಬ್ಬಗೆ ನೀತಿ ಅನುಸರಿಸುತ್ತಾರೆ ಎಂದೂ ಕಿಡಿಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!