ಕೋವಿಡ್ 2ನೇ ಅಲೆ ಭೀತಿ ನಡುವೆ ರೋಹ್ಟಕ್ ನಲ್ಲಿ ನಿಗೂಢ ಜ್ವರಕ್ಕೆ 28 ಮಂದಿ ಸಾವು!
ನೆರೆಯ ಗ್ರಾಮಗಳಿಗೆ ಹರಡದಿರಲು ಮುಂಜಾಗ್ರತಾ ಕ್ರಮವಾಗಿ ಇಡೀ ಗ್ರಾಮವನ್ನೇ ಕಂಟೈನ್ ಮೆಂಟ್ ಜೋನ್ ಎಂದು ಘೋಷಿಸಲಾಗಿದೆ.
Team Udayavani, May 11, 2021, 12:13 PM IST
ರೋಹ್ಟಕ್:ಭಾರತದಲ್ಲಿ ಕೋವಿಡ್ 19 ಮಾರಣಾಂತಿಕ ಎರಡನೇ ಅಲೆ ಕ್ಷಿಪ್ರವಾಗಿ ಹರಡುತ್ತಿರುವ ನಡುವೆಯೇ ಹರ್ಯಾಣದ ರೋಹ್ಟಕ್ ನಲ್ಲಿ ಕಳೆದ 10 ದಿನಗಳಲ್ಲಿ ನಿಗೂಢ ಜ್ವರಕ್ಕೆ 25ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ.
ಇದನ್ನೂ ಓದಿ:ಮಹಾರಾಷ್ಟ್ರ ಮಾಜಿ ಸಚಿವ ಅನಿಲ್ ದೇಶಮುಖ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ ED
ರೋಹ್ಟಕ್ ನ ಟಿಟೋಳಿ ಗ್ರಾಮದಲ್ಲಿ ಈ ಆಘಾತಕಾರಿ ಸಾವಿನ ಘಟನೆ ಸಂಭವಿಸಿದ್ದು, ಜಿಲ್ಲಾಡಳಿತ ಈ ಗ್ರಾಮವನ್ನು ಸೀಲ್ಡ್ ಮಾಡಿರುವುದಾಗಿ ವರದಿ ತಿಳಿಸಿದೆ. ಗ್ರಾಮದಲ್ಲಿನ ನಿಗೂಢ ಸಾವಿನ ಬಗ್ಗೆ ರೋಹ್ಟಕ್ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ತನಿಖೆ ನಡೆಸುತ್ತಿದೆ.
ನಿಗೂಢ ಜ್ವರಕ್ಕೆ 28ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ನಿಗೂಢ ಜ್ವರ ನೆರೆಯ ಗ್ರಾಮಗಳಿಗೆ ಹರಡದಿರಲು ಮುಂಜಾಗ್ರತಾ ಕ್ರಮವಾಗಿ ಇಡೀ ಗ್ರಾಮವನ್ನೇ ಕಂಟೈನ್ ಮೆಂಟ್ ಜೋನ್ ಎಂದು ಘೋಷಿಸಲಾಗಿದೆ.
ಸ್ಥಳೀಯ ಗ್ರಾಮಸ್ಥರ ಹೇಳಿಕೆ ಪ್ರಕಾರ, ಕಳೆದ ಎರಡು ದಿನಗಳಲ್ಲಿ ಕಾಣಿಸಿಕೊಂಡ ಜ್ವರಕ್ಕೆ ಯುವಕರು ಸೇರಿದಂತೆ 40ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಏಕಾಏಕಿ ಸಂಭವಿಸಿದ ಸಾವಿನ ದುರಂತ ಪ್ರಕರಣದಿಂದ ಗ್ರಾಮಸ್ಥರು ಭೀತಿಗೆ ಒಳಗಾಗಿರುವುದಾಗಿ ವರದಿ ತಿಳಿಸಿದೆ.
ಆದರೆ ಈ ಸಾವು ಸಂಭವಿಸಲು ಕೋವಿಡ್ 19 ಸೋಂಕು ಕಾರಣವಾಗಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಶವಗಳ ಮರಣೋತ್ತರ ಪರೀಕ್ಷೆ ಮತ್ತು ತನಿಖೆ ಮುಂದುವರಿದಿದ್ದು, ಈ ಸಾವಿಗೆ ಏನು ಕಾರಣ ಎಂಬುದು ಪತ್ತೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆದರೆ ಈ ಸಾವು ಸಂಭವಿಸಲು ಕೋವಿಡ್ 19 ಸೋಂಕು ಕಾರಣವಾಗಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಶವಗಳ ಮರಣೋತ್ತರ ಪರೀಕ್ಷೆ ಮತ್ತು ತನಿಖೆ ಮುಂದುವರಿದಿದ್ದು, ಈ ಸಾವಿಗೆ ಏನು ಕಾರಣ ಎಂಬುದು ಪತ್ತೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಟಿಟೋಳಿ ಗ್ರಾಮದ ಪ್ರವೇಶ ಮಾರ್ಗ ಮತ್ತು ಹೊರ ಹೋಗುವ ಮಾರ್ಗವನ್ನು ಸಂಪೂರ್ಣವಾಗಿ ಸೀಲ್ಡ್ ಮಾಡಿರುವುದಾಗಿ ಜಿಲ್ಲಾಡಳಿತ ತಿಳಿಸಿದೆ. ದೆಹಲಿಯಿಂದ 60 ಕಿಲೋ ಮೀಟರ್ ದೂರದಲ್ಲಿರುವ ಈ ಗ್ರಾಮದಲ್ಲಿ ಕೋವಿಡ್ 19 ಸೆಂಟರ್ ತೆರೆಯಲು ಜಿಲ್ಲಾಡಳಿತ ಸಿದ್ಧತೆ ನಡೆಸುತ್ತಿದೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ