ರೈತರ ಆತಂಕ, ಸರಕಾರದ ಭರವಸೆಯ ನಡುವೆ…


Team Udayavani, Dec 8, 2020, 6:19 AM IST

ರೈತರ ಆತಂಕ, ಸರಕಾರದ ಭರವಸೆಯ ನಡುವೆ…

ಸಾಂದರ್ಭಿಕ ಚಿತ್ರ

ಕೇಂದ್ರ ಸರಕಾರ ಇತ್ತೀಚೆಗೆ ಜಾರಿ ಮಾಡಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಒಂದೆಡೆ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ, ಮಂಗಳವಾರ ದೇಶಾದ್ಯಂತ ಬಂದ್‌ಗೂ ಕರೆ ಕೊಡಲಾಗಿದೆ. ಈ ಪ್ರತಿಭಟನೆಗಳಿಗೆ ವಿಪಕ್ಷಗಳೂ ಕೈ ಜೋಡಿಸಿವೆ. ಇನ್ನೊಂದೆಡೆ ರೈತ ಒಕ್ಕೂಟಗಳು ಹಾಗೂ ಕೇಂದ್ರ ಸರಕಾರದ ನಡುವೆ ಡಿಸೆಂಬರ್‌ 9ರಂದು ಮತ್ತೂಂದು ಸುತ್ತಿನ ಮಾತುಕತೆಯೂ ನಡೆಯಲಿದೆ. ನೂತನ ಕಾಯ್ದೆಗಳ ವಿಚಾರದಲ್ಲಿ ರೈತರಿಗಿರುವ ಆತಂಕಗಳೇನು? ಸರಕಾರ ನೀಡುತ್ತಿರುವ ಭರವಸೆಯೇನು? ಮಾಹಿತಿ ಇಲ್ಲಿದೆ…

ಮೂರು ಕಾಯ್ದೆಗಳ ಜಾರಿ…
2020ರೊಳಗೆ ದೇಶದ ರೈತರ ಆದಾಯವನ್ನು ದ್ವಿಗುಣಗೊಳಿಸುವ ಹಾಗೂ ಕೃಷಿ ಮಾರುಕಟ್ಟೆಯ ವ್ಯಾಪ್ತಿಯನ್ನು ವಿಸ್ತರಿಸುವ ಉದ್ದೇಶದಿಂದ ಕೇಂದ್ರ ಸರಕಾರ ಸೆಪ್ಟಂಬರ್‌ ತಿಂಗಳಲ್ಲಿ ಕೃಷಿ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ(ಉತ್ತೇಜನ ಮತ್ತು ಸೌಲಭ್ಯ) ಮಸೂದೆ-2020, ರೈತರ(ಸಶಕ್ತೀಕರಣ ಮತ್ತು ಸಂರಕ್ಷಣೆ) ಬೆಲೆ ಖಾತರಿ ಒಪ್ಪಂದದ ಭರವಸೆ ಮತ್ತು ಕೃಷಿ ಸೇವೆ 2020, ಅಗತ್ಯ ಸರಕುಗಳ(ತಿದ್ದುಪಡಿ)2020 ಕಾಯ್ದೆಗಳನ್ನು ಜಾರಿಗೆ ತಂದಿತು. ಈ ವಿಷಯವಾಗಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರು ಇದು ಭಾರತದ ಕೃಷಿ ಕ್ಷೇತ್ರದ “ಅಭೂತಪೂರ್ವ ಕ್ಷಣ’ ಎಂದರಷ್ಟೇ ಅಲ್ಲದೇ ದಶಕಗಳಿಂದಲೂ ದಲ್ಲಾಳಿಗಳ ಕಪಿಮುಷ್ಠಿಯಲ್ಲಿ ಸಿಲುಕಿರುವ ದೇಶದ ರೈತರನ್ನು ಇವು ಪಾರು ಮಾಡಲಿವೆ, ಇನ್ನು ಮುಂದೆ ಕೃಷಿ ಕ್ಷೇತ್ರ ಎದುರಿಸುತ್ತಿದ್ದ ಸಂಕಷ್ಟಗಳು ನಿವಾರಣೆಯಾಗಲಿವೆ ಎಂದಿದ್ದರು.

ಕೇಂದ್ರ ಹೇಳುವುದೇನು?
ಭಾರತದ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಹಲವಾರು ನಿರ್ಬಂಧಗಳನ್ನು ಎದುರಿಸುತ್ತಿದ್ದರು. ಎಪಿಎಂಸಿ ಮಾರುಕಟ್ಟೆಯ ಹೊರಗೆ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಅನೇಕ ನಿರ್ಬಂಧಗಳಿದ್ದವು. ರೈತರು ಉತ್ಪನ್ನಗಳನ್ನು ರಾಜ್ಯ ಸರಕಾರಗಳ ನೋಂದಾಯಿತ ಪರವಾನಿಗೆದಾರರಿಗೆ ಮಾತ್ರ ಮಾರಾಟ ಮಾಡುವ ಅವಕಾಶವಿತ್ತು. ಇದಲ್ಲದೆ, ರಾಜ್ಯ ಸರಕಾರಗಳು ಜಾರಿಗೆ ತಂದ ವಿವಿಧ ಎಪಿಎಂಸಿ ಕಾಯ್ದೆಗಳಿಂದಾಗಿ ವಿವಿಧ ರಾಜ್ಯಗಳ ನಡುವೆ ಕೃಷಿ ಉತ್ಪನ್ನಗಳ ಮುಕ್ತ ಹರಿವಿನಲ್ಲಿ ಅಡೆತಡೆಗಳು ಅಸ್ತಿತ್ವದಲ್ಲಿದ್ದವು. ಕೃಷಿ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ(ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆಯು ದೇಶದ ಕೃಷಿ ಮಾರುಕಟ್ಟೆಗಳನ್ನು ಮುಕ್ತಗೊಳಿಸುವ ಒಂದು ಐತಿಹಾಸಿಕ ಹೆಜ್ಜೆಯಾಗಿದೆ. ಇದು ರೈತನಿಗೆ ಹೆಚ್ಚಿನ ಆಯ್ಕೆಗಳನ್ನು ಒದಗಿಸುತ್ತದೆ, ರೈತರಿಗೆ ಮಾರುಕಟ್ಟೆ ವೆಚ್ಚವನ್ನು ಕಡಿಮೆ ಮಾಡುತ್ತದೆ ಮತ್ತು ಉತ್ತಮ ಬೆಲೆಗಳನ್ನು ಪಡೆಯಲು ಸಹಾಯ ಮಾಡುತ್ತದೆ. ಹೆಚ್ಚುವರಿ ಉತ್ಪನ್ನಗಳನ್ನು ಹೊಂದಿರುವ ಪ್ರದೇಶಗಳ ರೈತರಿಗೆ ಉತ್ತಮ ಬೆಲೆಗಳನ್ನು ಪಡೆಯಲು ಮತ್ತು ಕೊರತೆಯಿರುವ ಪ್ರದೇಶಗಳ ಗ್ರಾಹಕರು ಕಡಿಮೆ ಬೆಲೆಗೆ ಪಡೆಯಲು ಇದು ಸಹಾಯ ಮಾಡುತ್ತದೆ. ಇನ್ನು ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆಯು ರೈತರು ಕಂಪೆನಿಯೊಂದರ ಜತೆ ಲಿಖೀತ ಒಪ್ಪಂದಕ್ಕೆ ಸಹಿ ಹಾಕಲು ಅವಕಾಶ ನೀಡಿದೆ. ಕೃಷಿಕರು ಹಾಗೂ ವ್ಯಾಪಾರಸ್ಥರು ಎಪಿಎಂಸಿ ಹೊರತಾಗಿಯೂ ಅನ್ಯ ಕಡೆಗಳಲ್ಲಿ ಸುಲಭವಾಗಿ ತಮ್ಮ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಬಹುದಾದ ವಾತಾವರಣವನ್ನು ನಿರ್ಮಿಸುತ್ತದೆ. ರೈತರ (ಸಶಕ್ತೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ 2020 ರ ಒಪ್ಪಂದ ಕಾಯಿದೆಯೂ ಕೃಷಿ ವ್ಯವಹಾರಗಳಿಗೆ ರಾಷ್ಟ್ರೀಯ ಚೌಕಟ್ಟನ್ನು ಒದಗಿಸಲು ಪ್ರಯತ್ನಿಸುತ್ತದೆ. ಇದು ಕೃಷಿ-ವ್ಯಾಪಾರ ಸಂಸ್ಥೆಗಳು, ಸಂಸ್ಕರಣ ಘಟಕಗಳು, ಸಗಟು ವ್ಯಾಪಾರಿಗಳು, ರಫ್ತುದಾರರು ಅಥವಾ ದೊಡ್ಡ ಚಿಲ್ಲರೆ ವ್ಯಾಪಾರಿಗಳೊಂದಿಗೆ ತೊಡಗಿಸಿಕೊಳ್ಳಲು ರೈತರಿಗೆ ಅಧಿಕಾರ ನೀಡುತ್ತದೆ. ಭವಿಷ್ಯದ ಕೃಷಿ ಉತ್ಪನ್ನಗಳ ಸೇವೆಗಳು ಮತ್ತು ಮಾರಾಟವು ಪರಸ್ಪರ ಒಪ್ಪಿತ ಬೆಲೆ ಚೌಕಟ್ಟಿನಲ್ಲಿ ನ್ಯಾಯಯುತ ಮತ್ತು ಪಾರದರ್ಶಕ ರೀತಿಯಲ್ಲಿ ನಡೆಯಲು ಅನುವು ಮಾಡಿಕೊಡುತ್ತದೆ ಎನ್ನುವುದು ಕೇಂದ್ರ ಸರಕಾರದ ಭರವಸೆ.

ರೈತ ಸಂಘಟನೆಗಳ ವಾದವೇನು?
ಈ ಹೊಸ ಕಾಯ್ದೆಗಳು ಕೃಷಿ ವಲಯವನ್ನು ಕಾರ್ಪೊರೆಟ್‌ ತೆಕ್ಕೆಗೆ ಹಾಕುವ ಹುನ್ನಾರ, ಇದರಿಂದ ರೈತರ ಭವಿಷ್ಯ ಅತಂತ್ರವಾಗಲಿದೆ ಎನ್ನುವುದು ಆರೋಪ. ಮುಖ್ಯವಾಗಿ ಎಪಿಎಂಸಿ ಮಾರುಕಟ್ಟೆಯ ಹೊರಗೆ ವ್ಯಾಪಾರ ನಡೆದರೆ ರಾಜ್ಯ ಸರಕಾರಗಳಿಗೆ ಮಾರುಕಟ್ಟೆ ಶುಲ್ಕ ಅಥವಾ ಲೆವಿ ಸಂಗ್ರಹಿಸಲು ಸಾಧ್ಯವಾಗುವುದಿಲ್ಲ. ರಾಜ್ಯ ಸರಕಾರದ ಕಾನೂನು ಮತ್ತು ಮಾರುಕಟ್ಟೆ ಸಮಿತಿಯ ವ್ಯಾಪ್ತಿಗೂ ಇದು ನಿಲುಕ¨ªಾಗಿರುತ್ತದೆ. ಇದರಿಂದಾಗಿ ಕ್ರಮೇಣ ಸರಕಾರಿ ನಿಯಂತ್ರಿತ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಸ್ಥೆಯೇ ದುರ್ಬಲವಾಗಿಬಿಡುತ್ತದೆ. ಎಪಿಎಂಸಿಗಳು ಕೊನೆಗೊಂಡುಬಿಟ್ಟರೆ, ಕನಿಷ್ಠ ಬೆಂಬಲ ಬೆಲೆಯೂ ಮುಂದಿನ ದಿನಗಳಲ್ಲಿ ಹೊರಟುಹೋಗುತ್ತದೆ ಎನ್ನುವುದು ಅವರ ಆರೋಪ. ಈ ಕಾರಣಕ್ಕಾಗಿಯೇ, ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆಯ ಖಾತ್ರಿಯನ್ನು ಕಾನೂನಿನ ರೂಪದಲ್ಲಿ ಜಾರಿ ಮಾಡಿ ಎಂದು ಸರಕಾರವನ್ನು ಆಗ್ರಹಿಸಲಾಗುತ್ತಿದೆ.

ಸರಕಾರದ ಭರವಸೆ
ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಮುಂದುವರಿಯಲಿದೆ. ಇದನ್ನು ಅಂತ್ಯಗೊಳಿಸುವ ಯಾವುದೇ ಯೋಜನೆ ಸರಕಾರದ ಮುಂದಿಲ್ಲ. ರೈತರಿಗೆ ಮುಕ್ತ ಮಾರುಕಟ್ಟೆ ಸಿಗಲಿದೆಯೇ ಹೊರತು ಯಾವುದೇ ಸಮಸ್ಯೆ ಆಗುವುದಿಲ್ಲ. ಇನ್ನು ರೈತರಿಂದ ಎಂಎಸ್‌ಪಿ ಮೇಲೆ ಬೆಳೆಗಳ ಖರೀದಿ ಮುಂದುವರಿಯುತ್ತದೆ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ. ಆದರೆ ಕೇಂದ್ರವು ಕಾಯ್ದೆಗಳಲ್ಲಿ ಕೆಲವು ಲೋಪಗಳಿರುವುದನ್ನು ಒಪ್ಪಿಕೊಂಡಿದೆ ಎಂದು ರೈತ ಮುಖಂಡರು ಹೇಳುತ್ತಿದ್ದಾರೆ.

ಆತಂಕ ಬಗೆಹರಿಯಬೇಕು
ಕೃಷಿ ತಜ್ಞರೂ ಹೊಸ ಕಾಯ್ದೆಗಳ ವಿಚಾರದಲ್ಲಿ ಕೆಲವು ಸಂಶಯಗಳು ನಿವಾರಣೆಯಾಗಬೇಕು ಎನ್ನುತ್ತಿದ್ದಾರೆ. ರೈತರು ಕಂಪೆನಿಯೊಂದರ ಜತೆ ಒಪ್ಪಂದ ಮಾಡಿಕೊಂಡರೆ ನಿರ್ದಿಷ್ಟ ಗುಣಮಟ್ಟದ ಉತ್ಪನ್ನವನ್ನೇ ಖರೀದಿಸುತ್ತೇವೆ ಎಂಬ ನಿಯಮವೂ ಅದರಲ್ಲಿ ಇರಬಹುದು. ಒಂದು ವೇಳೆ ಆ ಬೆಳೆ ತಾನು ನಿಗದಿಪಡಿಸಿದ ಗುಣಮಟ್ಟ ಹೊಂದಿಲ್ಲ ಎಂದು ಖರೀದಿ ಸಂಸ್ಥೆಯು ನಿರಾಕರಿಸಿತೆಂದರೆ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ. ಅಂಥ ಸಂದರ್ಭಗಳಲ್ಲಿ ರೈತರ ಸಹಾಯಕ್ಕೆ ಏನು ದಾರಿಗಳಿವೆ ಎನ್ನುವುದು ಅವರ ಪ್ರಶ್ನೆ. ಈ ವಿಚಾರವೂ ಡಿಸೆಂಬರ್‌ 9ರ ಮಾತುಕತೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.

ಕಾಯ್ದೆಯಿಂದ ಹೋರಾಟದವರೆಗೂ…
ಜೂ. 5 ಕೃಷಿ ವಲಯದ ಆಮೂಲಾಗ್ರ ಸುಧಾರಣೆಗಾಗಿ ಮೂರು ಕೃಷಿ ಕಾಯ್ದೆಗಳಿಗೆ ಅನುಮೋದನೆ ನೀಡಿದ ಕೇಂದ್ರ ಕ್ಯಾಬಿನೆಟ್‌
ಜು. 26 ಅಖೀಲ ಭಾರತ ರೈತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ. ಮುಖ್ಯವಾಗಿ ಪಂಜಾಬ್‌, ಹರಿಯಾಣ ಮತ್ತು ಉತ್ತರಪ್ರದೇಶದಲ್ಲಿ
ತೀವ್ರಗೊಂಡ ವಿರೋಧ
– ಸೆ. 20-22 ಸಂಸತ್ತಿನ ಎರಡೂ ಸದನಗಳಲ್ಲಿ ಪಾಸ್‌ ಆದ ಬಿಲ್‌ಗಳು, ಪ್ರತಿಭಟನಾರ್ಥವಾಗಿ ಹೆದ್ದಾರಿ ಮತ್ತು ರೈಲ್ವೇ ಟ್ರಾÂಕ್‌ಗಳನ್ನು ಬಂದ್‌ ಮಾಡಿದ ಪಂಜಾಬ್‌ ರೈತ ಗುಂಪುಗಳು
– ಅ. 14 ರೈತ ಸಂಘಟನೆಗಳು ಮತ್ತು ಕೇಂದ್ರದ ಮಧ್ಯೆ ಚರ್ಚೆ ನಡೆಸುವ ಮೊದಲ ಪ್ರಯತ್ನ. ಸಭೆಗೆ ಯಾವೊಬ್ಬ ಕೇಂದ್ರ ಸಚಿವರೂ ಹಾಜರಾಗದ ಕಾರಣ ಸಭೆ ವಿಫ‌ಲ.
– ಅ. 20-31 ಕೇಂದ್ರದ ಕೃಷಿ ಕಾಯ್ದೆಗಳನ್ನು ನಿರಾಕರಿಸಿ ಶಾಸನ ಜಾರಿ ಮಾಡಿದ ಪಂಜಾಬ್‌, ಛತ್ತೀಸ್‌ಗಢ ಮತ್ತು ರಾಜಸ್ಥಾನ ಸರಕಾರಗಳು.
– ನ. 13-23 ಕೇಂದ್ರ ಮತ್ತು ರೈತ ಸಂಘಟನೆಗಳ ಮಧ್ಯೆ ಮಾತುಕತೆಯ ಎರಡನೇ ಪ್ರಯತ್ನ. ರಾಜನಾಥ್‌ ಸಿಂಗ್‌, ಪಿಯೂಷ್‌ ಗೋಯಲ್‌ ಮತ್ತು ನರೇಂದ್ರ ಸಿಂಗ್‌ ತೋಮರ್‌ ನೇತೃತ್ವದಲ್ಲಿ ನಡೆದ ಸಭೆ. ರೈಲ್ವೇ ಟ್ರ್ಯಾಕ್‌ಗಳನ್ನು ತೆರವುಗೊಳಿಸಲು ನ 23ರಂದು ಒಪ್ಪಿಕೊಂಡ ರೈತ ಸಂಘಟನೆಗಳು. ಡಿ.3 ಕ್ಕೆ ಮುಂದಿನ ಸುತ್ತಿನ ಮಾತುಕತೆಗೆ ದಿನ ನಿಗದಿ.
– ನ. 26-29 ಹೊಸದಿಲ್ಲಿಯಲ್ಲಿ ಪಂಜಾಬ್‌ನ ರೈತ ಸಂಘಟನೆಗಳಿಂದ ಬೃಹತ್‌ ಪ್ರತಿಭಟನ ರ್ಯಾಲಿ ಆಯೋಜನೆ. ದೇಶದ ಅನೇಕ ರಾಜ್ಯಗಳ ರೈತ ಒಕ್ಕೂಟಗಳಿಂದ ಬೆಂಬಲ.
-ಡಿ. 3-4 ಯಾವುದೇ ಸ್ಪಷ್ಟ ನಿರ್ಣಯವಿಲ್ಲದೇ ಮುಗಿದ ಸಭೆ. ಡಿಸೆಂಬರ್‌ 9ಕ್ಕೆ ಮತ್ತೂಂದು ಸುತ್ತಿನ ಮಾತುಕತೆಗೆ ದಿನ ನಿರ್ಧಾರ. ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಡಿಸೆಂಬರ್‌ 8ರಂದು ಭಾರತ ಬಂದ್‌ ನಡೆಸಲು ರೈತ ಸಂಘಟನೆಗಳಿಂದ ಘೋಷಣೆ. ದೇಶದ ಒಟ್ಟು 40ಕ್ಕೂ ಹೆಚ್ಚು ರೈತ ಒಕ್ಕೂಟಗಳು ಕರೆ ನೀಡಿರುವ ಭಾರತ ಬಂದ್‌ಗೆ ಕಾಂಗ್ರೆಸ್‌, ಆಪ್‌ ಸೇರಿದಂತೆ ಹಲವು ವಿಪಕ್ಷಗಳು ಬೆಂಬಲ ನೀಡಿವೆ. ಭಾರತ ಬಂದ್‌ಗೆ ಕರ್ನಾಟಕದಲ್ಲೂ ಬೆಂಬಲ ವ್ಯಕ್ತವಾಗಿದೆ.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.